ಈ ಜನ ಯಾಕೆ ತಮ್ಮ ಜೀವನವನ್ನು ಸೀಮಿತಗೊಳಿಸಿಕೊಂಡು ಆಲೋಚಿಸುತ್ತಾರೆ, ಹಾಗೆಯೇ ಬದುಕುತ್ತಾರೆ ? ಮದುವೆ-ಗಂಡ-ಮನೆ-ಮಕ್ಕಳು ಈ ಚೌಕಟ್ಟಿನಿಂದ ಹೊರಗೆ ಬಂದು ಹೊಸ ಹೊಸ ಅನುಭವಗಳನ್ನ ಯಾಕೆ ಪಡೆಯಲಿಚ್ಛಿಸುವುದಿಲ್ಲ ? ಎದ್ದಿದ್ದವು ಪ್ರಶ್ನೆಗಳು ; ಆದರೆ ಕೇಳುವುದರಿಂದ ಹೆಚ್ಚಿನ ಪ್ರಯೋಜನವಿಲ್ಲ ಎಂದೆನಿಸಿ ಹೈದರಾಬಾದಿಗೆ ಹೊರಟುಬಂದಿದ್ದೆ. ರಾಮೋಜಿ ಫಿಲ್ಮ ಸಿಟಿ, ಈಟೀವಿ ಇವುಗಳ ಬಗ್ಗೆ ಹೊರಗಿನವರಿಗೆ ಸಹಜವಾಗಿ ಒಂದು ರೀತಿಯ ಆಕರ್ಷಣೆ ಇರುವಂತೆ ನಾನೂ ಸಂಭ್ರಮ, ಕುತೂಹಲ, ಆತಂಕ ಇನ್ನೂ ಹೇಳಲಾಗದ ಭಾವಗಳೊಂದಿಗೆ ಹೊಸಾ ಪ್ರಪಂಚದಲ್ಲಿ ಕಾಲಿಟ್ಟಿದ್ದೆ. ಅಲ್ಲಿಂದ ಶುರುವಾಗಿತ್ತು ಹೊಸಾಜೀವನ ; ಪರಿಸರ-ಜನರು-ಭಾಷೆ ಪ್ರತಿಯೊಂದೂ ಹೊಸತೇ.
ರಾಮೋಜಿರಾವ್ ನ ಸಾಮ್ರಾಜ್ಯ ಫಿಲ್ಮ್ ಸಿಟಿ ಒಂದು ಮಾಯಾನಗರಿ ; ಸಿನೆಮಾ ಶೂಟಿಂಗ್ ಗಾಗಿ ಎತ್ತೆರೆತ್ತರದ ಬಿಲ್ಡಿಂಗ್ ಗಳು, ಅರಮನೆ, ಕೋಟೆಗಳು, ದೇಚಸ್ಥಾನ, ಜಗತ್ತಿನ ಬೇರೆ ಬೇರೆ ಸ್ಥಳಗಳ ಮಾದರಿಗಳು ಎಲ್ಲವನ್ನೂ ಕೃತಕವಾಗಿ ನಿರ್ಮಿಸಿ ಅದೇ ಪ್ರದೇಶ ಎಂಬ ಭ್ರಮೆ ಹುಟ್ಟಿಸುತ್ತಾರೆ. ಯಶೋಧಾ ಹಾಸ್ಪಿಟಲ್ ಎಂಬ ಬೋರ್ಡ್ ಇದ್ದ ದೊಡ್ಡ ಕಟ್ಟಡವೊಂದನ್ನು ಎಷ್ಟೋ ದಿನಗಳ ಕಾಲ ನಾನು ನಿಜವಾದ ಆಸ್ಪತ್ರೆ ಎಂದೇ ಭಾವಿಸಿದ್ದೆ!!!. ಪ್ರವಾಸಕ್ಕೆಂದು ಬರುವವರಿಗೆ ನಾನಾ ಬಗೆಯ ಆಟಗಳು, ಮನರಂಜನೆಗಳು, ಕಣ್ಮನ ತಣಿಸುವ ಸುಂದರ ಉದ್ಯಾನವನಗಳು ಜೊತೆಗೆ ಹದಿಮೂರು ಭಾಷೆಗಳ ಈಟಿವಿ ಛಾನಲ್ ಗಳ ಕಛೇರಿಗಳಿರುವುದೂ ಇಲ್ಲೇ. ಮನೆಯಲ್ಲಿದ್ದಾಗ ಕೆಲವು ಧಾರಾವಾಹಿಗಳನ್ನ ನೋಡುತ್ತಿದ್ದ ನನಗೆ ಆ ವಿಭಾಗದಲ್ಲಿಯೇ ಕೆಲಸ ಸಿಕ್ಕಿದ್ದು ವಿಶೇಷ. ಮನೆಯಲ್ಲಿ ಆರಾಮಾಗಿ ಕುಳಿತು ಟೀವಿ ನೋಡುತ್ತಿದ್ದ ನನಗೆ ಅದರ ಹಿಂದೆ ಎಷ್ಟೆಲ್ಲ ಜನರ ಶ್ರಮ, ಏನೆಲ್ಲಾ ತಯಾರಿಗಳಿರುತ್ತವೆ ಎಂದು ಗೊತ್ತಾಗಿದ್ದೇ ಆಗ; ಒಟ್ಟಿನಲ್ಲಿ ಹೊಸಾ ರೀತಿಯ ಕೆಲಸ, ಹೊಸಾ ಅನುಭವ . . .
ಐದಾರು ಜನ ಸ್ನೇಹಿತರು ಸೇರಿಕೊಂಡು ಬಾಡಿಗೆ ಮನೆಗಾಗಿ ಅಲೆದಿದ್ದು.ಮನೆ ಸಿಕ್ಕ ನಂತರ ಮಲಗಲು ಹಾಸಿಗೆ-ತಡಿಗಾಗಿ ಕಷ್ಟಪಟ್ಟಿದ್ದು, ಅಂಗಡಿಗಳಿಗೆ ಏನಾದರೂ ತರಲು ಹೋದಾಗ ಭಾಷೆ ಬರದೆ ಒದ್ದಾಡಿದ್ದು ಎಲ್ಲವೂ ವಿಭಿನ್ನ ಅನುಭವಗಳೇ. ಬೆಂಗಳೂರಿನ ಹಾಗೆ ಅಲ್ಲಿ ಬಾಡಿಗೆ ಮನೆಗೆ ಹೆಚ್ಚು ಹಣ ಇಲ್ಲ, ಜೊತೆಗೆ ಅಡ್ವಾನ್ಸ್ ಎಂದು ಸಾವಿರಾರು ರೂಪಾಯಿ ಸುರಿಯಬೇಕಾಗಿಲ್ಲ, ಒಂದು ತಿಂಗಳ ಬಾಡಿಗೆಯನ್ನು ಹೆಚ್ಚು ಕೊಟ್ಟರಾಯಿತಷ್ಟೆ. ಚಿಕ್ಕ ಮನೆಯನ್ನು ಬಾಡಿಗೆಗೆ ಪಡೆದು ಆರಾಮಾಗಿ ಇರಬಹುದು ; ಜೀವನನಿರ್ವಹಣಾವೆಚ್ಚವೂ ಬೆಂಗಳೂರಿಗೆ ಹೋಲಿಸಿದಾಗ ತುಂಬ ಕಡಿಮೆಯೇ ; ಇಲ್ಲಿ ಪ್ರತಿಯೊಂದಕ್ಕೂ ಹೆಚ್ಚು ಹಣ ಸುರಿಯುವಾಗ ಅಲ್ಲಿಯ ದಿನಗಳು, ಸಂಜೆಗಳು ನೆನಪಾಗುತ್ತವೆ.
ಆರ್ಥಿಕ ಸ್ವಾವಲಂಬನೆ ಮನುಷ್ಯನಿಗೆ ಒಂದು ರೀತಿಯ ನೆಮ್ಮದಿ-ವಿಶ್ವಾಸವನ್ನು ಕೊಡುತ್ತದಂತೆ ; ಮೊದಲ ಸಂಬಳ ಪಡೆದಿದ್ದು, ಅದರಲ್ಲಿ ಮೊಬೈಲ್ ತೆಗೆದುಕೊಂಡಿದ್ದು, ಮೊದಲ ಬಾರಿ ಊರಿಗೆ ಬರುವಾಗ ಅಮ್ಮನಿಗೆ ಸೀರೆ ತಂದಿದ್ದು ಎಲ್ಲವೂ ಖುಷಿ ಕೊಡುವ ನೆನಪುಗಳೇ. ಅಲ್ಲಿ ಕಳೆದಷ್ಟು ದಿನ ಯಾವ ಕಟ್ಟುಪಾಡುಗಳೂ ಇರಲಿಲ್ಲ ; ನನ್ನದೇ ಚಿಕ್ಕ ಮನೆ, ಕೆಲಸ, ಖರ್ಚಿಗೆ ದುಡ್ಡು, ಮನಸೋ ಇಚ್ಛೆ ಅಲೆಯುವುದು . . . . . . ಸ್ವಾತಂತ್ರ್ಯದ ಪರಮಾವಧಿಯನ್ನು ಅನುಭವಿಸಿದ ದಿನಗಳವು.

ಯಾಕೆ ಹೀಗೆ ಹೇಳುತ್ತಿರುವುದೆಂದರೆ ನಮ್ಮ ಸಮಾಜದಲ್ಲಿ ಹುಡುಗಿಯರಿಗೆ ನಿರ್ಬಂಧಗಳು ಜಾಸ್ತಿ ; ಎಲ್ಲಿಗೋ ಹೋಗಬೇಕು, ಯಾರನ್ನೋ ಭೇಟಿ ಮಾಡಬೇಕು, ಏನನ್ನಾದರೂ ಮಾಡಬೇಕು ಎಂದರೆ ನೂರೆಂಟು ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ, ಅನುಮಾನದ ನೋಟಗಳನ್ನು ಎದುರಿಸಬೇಕಾಗುತ್ತದೆ; ತಮ್ಮಿಚ್ಛೆಯಂತೆ ಬದುಕನ್ನು ರೂಪಿಸಿಕೊಳ್ಳುವುದು, ಬದುಕುವುದು ಅಷ್ಟು ಸುಲಭವಲ್ಲ ; ಬದುಕೆಂದರೆ ಇಷ್ಟೇ, ಹೀಗೇ ಇರಬೇಕು ಎಂದು ಮಿತಿಗಳನ್ನು ಹಾಕುತ್ತಾರೆ ; ಮಿತಿಗಳಲ್ಲಿ ಬದುಕುವುದು ನನಗಿಷ್ಟವಿಲ್ಲ, ನನ್ನ ಮನೋಭಾವಕ್ಕೆ ಒಗ್ಗುವಂತಹುದೂ ಅಲ್ಲ. ಪ್ರಪಂಚ ವಿಶಾಲವಾಗಿದೆ ; ಎಷ್ಟೊಂದು ಹೊಸ ವಿಷಯಗಳಿವೆ, ವಸ್ತುಗಳಿವೆ, ಅಚ್ಚರಿಗಳಿವೆ ; ಇರುವುದೊಂದೇ ಬದುಕು, ಸಾಧ್ಯವಾದಷ್ಟೂ ವಿಶಿಷ್ಟ-ವಿಭಿನ್ನ ಅನುಭವಗಳಿಗೆ ನಮ್ಮನ್ನು ನಾವು ತೆರೆದುಕೊಳ್ಳಬೇಕು, ತಿಳಿದುಕೊಳ್ಳಬೇಕು, ಸಮೃದ್ಧಗೊಳಿಸಿಕೊಳ್ಳಬೇಕು ; ಹಿಂಜರಿದರೆ ಎಷ್ಟೋ ಅದ್ಭುತ ಎನಿಸುವಂಥ, ಖುಷಿ ಕೊಡುವಂಥ ಅನುಭವಗಳಿಂದ ವಂಚಿತರಾಗಬೇಕಾಗುತ್ತದೆ. ಹೀಗಾಗಿಯೇ ನನಗೆ ಆ ದಿನಗಳು ವಿಶೇಷವೆನಿಸಿದ್ದು, ಪದೇ ಪದೇ ಕಾಡುವುದೂ ಕೂಡಾ.
ನೀವು ಹೇಳಿದ್ದು ಸತ್ಯ. ಬದುಕು ಕವಲೊಡೆದು ಹಲವು ವಿಸ್ತಾರಗಳನ್ನು ಪಡೆದು ಸಾಗುವ ನಿಟ್ಟಿನಲ್ಲಿ ಇವೆಲ್ಲ ಅನುಭವಗಳು ಬೇಕು. ನೀವು ಅಲ್ಲಿಗೆ ಹೋದ ಹಾಗೇ ನಾನು ‘ಶಮ’ ಎಂಬ ಬೆಳ್ತಂಗಡಿಯ ನಂದಿಬೆಟ್ಟದ ಹುಡುಗಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿ ಬದುಕು ಕಟ್ಟಿಕೊಂಡಿದ್ದು ಹಾಗೆಯೇ.
-’ಶಮ’, ನಂದಿಬೆಟ್ಟ
'ಶಮ', ನಂದಿಬೆಟ್ಟ
November 24, 2008
ramoli filmcity yalli naanu kelasa madi bande
aadre nange mathra naraka andre nenapagode adu…
loko binna ruchi bidi…..
chithranna
November 22, 2008
ನನ್ನ ಕೆಲ ಸ್ನೇಹಿತರಿಗೆ ನಮ್ಮ ರಾಜ್ಯದಲ್ಲಿಯೇ ಕೆಲಸದ ಆಫರ್ ಬಂದಾಗ
“ಓ ಅಷ್ಟು ದೂರ ಹೋಗ್ಬೇಕಾ?” ಎಂದು ತಪ್ಪಿಸಿಕೊಂಡವರಿದ್ದಾರೆ.
ಅಂಥವರಿಗೆ ನಿಮ್ಮ ಬರಹ ಕಣ್ತೆರೆಸುವಂತಿದೆ. ಇರುವುದೊಂದೇ
ಬದುಕಿನಲ್ಲಿ ಸಾಧ್ಯವಾದಷ್ಟೂ ವಿಶಿಷ್ಟ-ವಿಭಿನ್ನ ಅನುಭವಗಳಿಗೆ ತೆರೆದುಕೊಳ್ಳುವ
ಪ್ರಯತ್ನವನ್ನು ಮಾಡುವ ಹುಮ್ಮಸ್ಸು ಎಲ್ಲರಲ್ಲೂ ಬರುವಂತಾಗಲಿ.
ಚನ್ನಾಗಿ ಬರೆದಿದ್ದೀರಾ.
ರಾಹುಲ್
November 21, 2008
RFC adbhutha.Sumaru geleyaru e-kannada dalliddaru,Bhagyalatha colony talli 2nd floor avara mane,Lavanya dalli raathri uta,madhyahna paradise na hyderabad biryani,Bank street na vishalandhra books,Supreme audio’s na cd/dvd raashigalu..salarjung, vijaya paala dairi…jeevantha nenapugala hyaderabadannu sogasagi nenapu madikottiri.
dhanyavaadagalu..
srujan
November 21, 2008