ಶಿಕ್ಷಣ ಸಚಿವರ ಪಠ್ಯ ಬದಲಾವಣೋತ್ಸಾಹ


-ಎನ್ ಎ ಎಂ ಇಸ್ಮಾಯಿಲ್

ಮನುಷ್ಯನನ್ನು ಪ್ರಾಣಿಗಳಿಂದ ಭಿನ್ನವಾಗಿಸುವ ಮುಖ್ಯ ಲಕ್ಷಣಗಳ ಲ್ಲೊಂದು ಭಾಷೆ. ಹಾಗಿದ್ದರೆ ಪ್ರಾಣಿಗಳಿಗೆ ಭಾಷೆ ಇಲ್ಲವೇ? ಅವುಗಳೂ ತಮ್ಮದೇ ಆದ ರೀತಿಯಲ್ಲಿ ಸದ್ದುಗಳನ್ನು ಸೃಷ್ಟಿಸುವ ಮೂಲಕ ಪರಸ್ಪರ ಸಂವಹನವನ್ನು ಸಾಧಿಸುತ್ತವೆಯಲ್ಲವೇ ಎಂಬ ಪ್ರಶ್ನೆಗಳು ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದು. ಈ ಪ್ರಶ್ನೆಗಳು ಸರಿಯಾಗಿಯೇ ಇವೆ. ಆದರೆ ಇವು ಮನುಷ್ಯನ ಭಾಷೆಯ ವೈಶಿಷ್ಟ್ಯವನ್ನು ಅರಿಯದೇ ಇರುವುದರಿಂದ ಹುಟ್ಟಿರುವ ಪ್ರಶ್ನೆಗಳು.

ಪ್ರಾಣಿಗಳ ಭಾಷೆಯೆಂದರೆ ನಿರ್ದಿಷ್ಟ ಸಂಖ್ಯೆಯ ಸಂಜ್ಞೆಗಳು ಮಾತ್ರ. ಹಸಿವಾದಾಗ ಒಂದು ಸಂಜ್ಞೆ, ಶತ್ರುವನ್ನು ನೋಡಿದಾಗ ಮತ್ತೊಂದು ಸಂಜ್ಞೆ, ಮಿಲನಕ್ಕೆ ಅಣಿಯಾಗುವುದಕ್ಕೆ ಇನ್ನೊಂದು ಸಂಜ್ಞೆ ಹೀಗೆ. ಇದನ್ನು ಒಂದು ಸರಳ ಉದಾಹರಣೆಯ ಮೂಲಕ ವಿವರಿಸಬಹುದು. ಮನೆಯ ನಾಯಿ ಅದಕ್ಕೆ ಅಸಹಜ ಎನಿಸಿದ್ದನ್ನು ಕಂಡಾಗ ಬೊಗಳುತ್ತದೆ. ಈ ಬೊಗಳುವಿಕೆಯ ತೀವ್ರತೆಯನ್ನು ಅನುಸರಿಸಿ ಅದೆಷ್ಟು ಕೋಪಗೊಂಡಿದೆ ಯೆಂದು ಊಹಿಸಬಹುದಾದರೂ ಅದು ನಿರ್ದಿಷ್ಟವಾಗಿ ಏನನ್ನು ನೋಡಿದೆ ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ. ಲಂಗೂರ್‌ ಕೋತಿಗಳು ಕಾಡಿನಲ್ಲಿ ಹುಲಿ, ಚಿರತೆಯಂಥ ಪ್ರಾಣಿಗಳನ್ನು ಕಂಡಾಗ ಸದ್ದು ಮಾಡುತ್ತವೆ. ಈ ಸದ್ದನ್ನು ಕೇಳಿ ಅದು ಹುಲಿಯನ್ನು ನೋಡಿತೇ ಚಿರತೆಯನ್ನು ನೋಡಿತೇ ಎಂದು ನಿರ್ಧರಿಸಲಾಗದು.

ಮನುಷ್ಯನ ಭಾಷೆ ಹೀಗಲ್ಲ. ಅದು ಅನಂತ ಸಂಖ್ಯೆಯ ಅಭಿವ್ಯಕ್ತಿ ಗಳಿಗೆ ಅವಕಾಶವಿರುವ ಭಾಷೆ. ಈ ಕಾರಣದಿಂದಾಗಿಯೇ ಮನುಷ್ಯ ಪ್ರಾಣಿಗಳಿಗಿಂತ ಭಿನ್ನನಾಗುತ್ತಾನೆ. ಪ್ರಾಣಿಗಳ ಭಾಷೆ ಹುಟ್ಟಿಕೊಳ್ಳುವುದು ಅವುಗಳ ಮೆದುಳು ಬಳ್ಳಿಯಲ್ಲಿ. ಮನುಷ್ಯನ ಭಾಷೆ ಹುಟ್ಟಿಕೊಳ್ಳುವುದು ಅವನ ಮೆದುಳಿನ ಎಡ ಗೋಳಾರ್ಧದ ಮೇಲ್ಭಾಗದಲ್ಲಿ. ಮೆದುಳು ಬಳ್ಳಿಯಿಂದ ಉತ್ಪತ್ತಿಯಾಗುವ ಸಂದೇಶಗಳೆಲ್ಲವೂ ಭಾವನಾತ್ಮಕ ತುರ್ತಿನವು. ಈ ಕುರಿತಂತೆ ನಾವೆಲ್ಲರೂ ಹೈಸ್ಕೂಲ್‌ ಮಟ್ಟದ ಪಠ್ಯ ಪುಸ್ತಕಗಳಲ್ಲೇ ಓದಿರುತ್ತೇವೆ. ಪರಾವರ್ತಿತ ಪ್ರತಿಕ್ರಿಯೆಗಳು ಮೆದುಳು ಬಳ್ಳಿಯಿಂದಲೇ ಹುಟ್ಟಿಕೊಳ್ಳುತ್ತವೆ. ಉದಾಹರಣೆಗೆ ಬಿಸಿಯಾದ ಕೆಂಡವನ್ನು ಮುಟ್ಟಿದರೆ ತಕ್ಷಣ ಕೈಯನ್ನು ಹಿಂದಕ್ಕೆ ತೆಗೆದುಕೊಳ್ಳುವಂಥ ಪ್ರತಿಕ್ರಿಯೆಗಳಿವು. ಇಲ್ಲಿ ತರ್ಕ, ಕಾರಣಗಳಿಗೆ ಅವಕಾಶವಿಲ್ಲ. ಇವೆಲ್ಲಾ ತಕ್ಷಣದ ರಕ್ಷಣಾ ಕ್ರಿಯೆ ಗಳು. ಪ್ರಾಣಿಗಳ ಭಾಷೆ ಹುಟ್ಟಿಕೊಳ್ಳುವುದು ಇಂಥ ಕಾರಣಗಳಿಂದ.

ಮನುಷ್ಯನ ಭಾಷೆಯೆಂಬುದು ತರ್ಕದ ಕೂಸು. ಮೆದುಳಿನ ಎಡ ಗೋಳಾರ್ಧದ ಮೇಲ್ಭಾಗ ನಮ್ಮ ತಾರ್ಕಿಕ ಶಕ್ತಿಯನ್ನು ನಿಯಂತ್ರಿಸುತ್ತದೆ. ಅಂದರೆ ಮನುಷ್ಯನಿಗೆ ಭಾಷೆಯೆಂಬುದು ಜೈವಿಕವಾಗಿ ದೊರೆಯುವ ಕೌಶಲ್ಯವಲ್ಲ. ಈ ಕೌಶಲ್ಯವನ್ನು ಆತ ಕಲಿತು ರೂಢಿಸಿಕೊಳ್ಳುತ್ತಾನೆ. ಈ ಕಾರಣದಿಂದಾಗಿಯೇ ವಿಶ್ವದ ಎಲ್ಲೆಡೆ ನಾಯಿಗಳು ಒಂದೇ ಬಗೆಯಲ್ಲಿ ಬೊಗಳುತ್ತವೆ. ಈ ಸಂಜ್ಞಾ ವಿಧಾನದಲ್ಲಿ ಯಾವ ವ್ಯತ್ಯಾಸವೂ ಇಲ್ಲ. ಆದರೆ ಮನುಷ್ಯನ ಭಾಷೆ ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುತ್ತದೆ. ಒಂದೇ ಭಾಷೆಯೊಳಗೆ ಅನೇಕ ಡಯಲೆಕ್ಟ್‌ಗಳಿರುತ್ತವೆ. ಇದಿಷ್ಟೂ ಆಧುನಿಕ ಭಾಷಾ ವಿಜ್ಞಾನಿಗಳು ಮನುಷ್ಯನ ಭಾಷೆಯ ಕುರಿತಂತೆ ತಿಳಿದುಕೊಂಡಿರುವ ವಿಷಯಗಳ ಸರಳೀಕೃತ ಸಾರ. ಮನುಷ್ಯ ಭಾಷೆಯನ್ನು ಕಲಿಯುವ ಪ್ರಕ್ರಿಯೆಯನ್ನೂ ಈ ಮಾಹಿತಿಗಳ ಹಿನ್ನೆಲೆಯಲ್ಲಿ ಅರ್ಥ ಮಾಡಿಕೊಳ್ಳಲಾಗುತ್ತಿದೆ. ಈ ಹೊಸ ಅರಿವಿನಿಂದಾಗಿ ಭಾಷಾ ಬೋಧನೆಯೆಂಬ ಜ್ಞಾನ ಕ್ಷೇತ್ರ ಬೋಧನೆಯ ತಂತ್ರಗಳನ್ನು ಪುನರಾವಿಷ್ಕರಿಸುತ್ತಿದೆ. ಮಗುವೊಂದು ತನ್ನ ವಾತಾವರಣದ ಭಾಷೆಯನ್ನು ಸಹಜವಾಗಿ ಕಲಿಯುವಂತೆಯೇ ಹೊಸ ಭಾಷೆಯನ್ನು ಕಲಿಸುವುದಕ್ಕೆ ಬೇಕಾದ ಸೂತ್ರ ಗಳನ್ನು ಭಾಷಾ ವಿಜ್ಞಾನಿಗಳು ಆವಿಷ್ಕರಿಸಿದ್ದಾರೆ. ವರ್ತಮಾನದ ಭಾಷಾ ಬೋಧನೆಯ ತಂತ್ರಗಳು ಬದಲಾಗಿರುವುದೂ ಇದೇ ಕಾರಣದಿಂದ.

* * *

ಸರ್ಕಾರೀ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಇಂಗ್ಲಿಷ್‌ ಬೋಧಿಸಬೇಕೆಂಬ ನಿರ್ಧಾರವೊಂದನ್ನು ಕರ್ನಾಟಕ ಸರಕಾರ ಕೈಗೊಂಡಾಗ ಅದಕ್ಕೆ ಅನೇಕ ವಿರೋಧಗಳು ವ್ಯಕ್ತವಾದವು. ಆದರೆ ಅಂತಿಮವಾಗಿ ಆಧುನಿಕ ಅಗತ್ಯಗಳಲ್ಲಿ ಇಂಗ್ಲಿಷ್‌ ಕೂಡಾ ಒಂದು ಎಂಬುದು ಎಲ್ಲಾ ಮಕ್ಕಳ ಪಾಲಕರ ನಿಲುವೂ ಆಗಿದ್ದರಿಂದ ಒಂದನೇ ತರಗತಿಯಿಂದ ಇಂಗ್ಲಿಷ್‌ ಕಲಿಸುವ ನಿರ್ಧಾರಕ್ಕೇ ಗೆಲುವು ದೊರೆಯಿತು. ಅದರ ಭಾಗವಾಗಿಯೇ ಒಂದನೇ ತರಗತಿಯ ಮಕ್ಕಳಿಗೆ ಇಂಗ್ಲಿಷ್‌ ಕಲಿಸುವುದಕ್ಕೊಂದು ಪಠ್ಯ ಪುಸ್ತಕ ರೂಪುಗೊಂಡಿತು.

ವಾಸ್ತವದಲ್ಲಿ ಇದೊಂದು ಪಠ್ಯ ಪುಸ್ತಕವಲ್ಲ. ಶಿಕ್ಷಕರಿಗೊಂದು ಬೋಧನಾ ಕೈಪಿಡಿ ಮಕ್ಕಳಿಗೊಂದು ಚಟುವಟಿಕೆ ಪುಸ್ತಕಗಳನ್ನು ತಜ್ಞರ ಸಮಿತಿ ರೂಪಿಸಿತು. ಮಕ್ಕಳ ಬಳಿ ಇರುವ ಚಟುವಟಿಕೆ ಪುಸ್ತಕದಲ್ಲಿ ಒಂದಷ್ಟು ಚಿತ್ರಗಳು, ಕಲಿಕಾ ಚಟುವಟಿಕೆಗಳಿಗೆ ಬೇಕಾದ ಅವಕಾಶವಿದೆ. ಶಿಕ್ಷಕರಿಗೆ ನೀಡಲಾಗಿರುವ ಕೈಪಿಡಿಯಲ್ಲಿ ಇಂಗ್ಲಿಷ್‌ನ ಕಥೆಗಳು, ಸರಳ ವಾಕ್ಯಗಳು ಇತ್ಯಾದಿಗಳಿವೆ. ಶಿಕ್ಷಕರು ತಮ್ಮ ಬೋಧನಾ ಕೈಪಿಡಿಯಲ್ಲಿರುವ ಮಾಹಿತಿ ಯನ್ನು ಸಹಜ ಕಲಿಕೆಯನ್ನು ಉತ್ತೇಜಿಸುವ ವಿಧಾನಗಳಲ್ಲಿ ಮಕ್ಕಳಿಗೆ ಬೋಧಿಸಬೇಕು. ಆ ರೀತಿಯ ಚಟುವಟಿಕೆಗಳನ್ನೂ ಮಾಡಿಸಬೇಕು.

ಇಷ್ಟಕ್ಕೂ ಈ ಪುಸ್ತಕಗಳು ಮಕ್ಕಳಿಗೆ ಇಂಗ್ಲಿಷ್‌ ಅಕ್ಷರಗಳನ್ನು ಅಥವಾ ವಾಕ್ಯಗಳನ್ನು ಬರೆಯಲು ಕಲಿಸುವ ಉದ್ದೇಶದಿಂದ ರೂಪುಗೊಂಡವಲ್ಲ. ಇವುಗಳ ಉದ್ದೇಶ ಮಕ್ಕಳು ನುಡಿಯನ್ನು ಕಲಿಯಲಿ ಎಂಬುದು. ಒಂದು ವರ್ಷದ ಚಟುವಟಿಕೆಗಳ ಮೂಲಕ ಅವರು ಇಂಗ್ಲಿಷ್‌ನಲ್ಲಿ ಸರಳ ವಾಕ್ಯಗಳನ್ನು ರಚಿಸಿ ಹೇಳುವ ಸಾಮರ್ಥ್ಯ ಪಡೆಯುತ್ತಾರಷ್ಟೇ. ಮಾತ್ರವಲ್ಲ ಶಿಕ್ಷಕರು ಅವರಿಗೆ ನೀಡಲಾಗಿರುವ ಪುಸ್ತಕದಲ್ಲಿರುವ ಕಥೆಗಳನ್ನೇ ಬಳಸಬೇಕೆಂಬ ಒತ್ತಾಯವೂ ಇಲ್ಲಿಲ್ಲ. ತಮಗೆ ಗೊತ್ತಿರುವ ಕಥೆಗಳನ್ನೇ ಪಠ್ಯ ಕ್ರಮಕ್ಕೆ ಅನುಗುಣವಾಗಿ ಅಳವಡಿಸಿಕೊಳ್ಳಲೂ ಅವರಿಗೆ ಸ್ವಾತಂತ್ರ್ಯವಿದೆ. ಒಟ್ಟಿನಲ್ಲಿ ಒಂದನೇ ತರಗತಿಯ ಮಕ್ಕಳಿಗೆ ವೈಜ್ಞಾನಿಕವಾಗಿ ಇಂಗ್ಲಿಷ್‌ ಕಲಿಸುವ ವಿಧಾನಕ್ಕೆ ಈ ಕೈಪಿಡಿ ಮತ್ತು ಚಟುವಟಿಕೆ ಪುಸ್ತಕ ಸಹಾಯ ಮಾಡುತ್ತದೆ. ಈ ಪುಸ್ತಕವನ್ನು ಹೇಗೆ ಬಳಸಬೇಕೆಂಬುದರ ಕುರಿತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಎರಡೆರಡು ಸುತ್ತಿನ ತರಬೇತಿಯನ್ನೂ ನೀಡಲಾಗಿದೆ. ಇದು ಸಾಲದು ಎಂಬಂತೆ ಉಪಗ್ರಹ ತಂತ್ರಜ್ಞಾನ ಬಳಸಿ ತಜ್ಞರ ಜತೆ ಸಂವಾದಕ್ಕೂ ಎಲ್ಲಾ ಶಿಕ್ಷಕರಿಗೂ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇದನ್ನೆಲ್ಲಾ ಮರೆತು ನಮ್ಮ ಶಿಕ್ಷಣ ಸಚಿವರು `ಒಂದನೇ ತರಗತಿಯ ಪಠ್ಯ ಪುಸ್ತಕವನ್ನು ಬದಲಾಯಿಸಲಾಗುವುದು’ ಎಂದು ಹೇಳುತ್ತಿದ್ದಾರೆ.

* * *

ಶಾಸಕನಾಗಿಯೂ ಸರಳವಾಗಿ ಬದುಕುತ್ತಿದ್ದ ಅಲ್ಪಸಂಖ್ಯಾತರಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಯೂ ಒಬ್ಬರು. ಅಷ್ಟೇಕೆ ಮಂತ್ರಿಯಾದ ನಂತರವೂ ತಮ್ಮ ಸರಳ ಬದುಕನ್ನು ಮುಂದುವರಿಸಿರುವವರು. ಅವರು ಹಳ್ಳಿಗಾಡಿನಿಂದ ಕನ್ನಡ ಮಾಧ್ಯಮದಲ್ಲೇ ಕಲಿತು ಬಂದು ಇಂಗ್ಲಿಷ್‌ ಬಳಸಲು ತೊಂದರೆ ಅನುಭವಿಸಿದವರೂ ಹೌದು. ಆದರೆ ಒಂದನೇ ತರಗತಿಯ ಪಠ್ಯ ಪುಸ್ತಕದ ಮೇಲೆ ಅವರಿಗೇಕೆ ಕೆಂಗಣ್ಣು ಎಂಬುದು ಮಾತ್ರ ಅರ್ಥವಾಗದ ಸಂಗತಿ. ಹೊಸ ಕಾಲದ ಬೋಧನಾ ವಿಧಾನಗಳ ಕುರಿತು ಅವರು ಹೆಚ್ಚು ತಿಳಿದುಕೊಳ್ಳಲು ಪ್ರಯತ್ನಿಸಿದರೆ ಅವರಿಗಿರುವ ಸಂಶಯಗಳು ದೂರವಾಗಬಹುದು. ಜತೆಗೆ `ಪುಸ್ತಕ ಕಷ್ಟ’ ಎಂಬ ಸೋಮಾರಿ ಶಿಕ್ಷಕರ ದೂರನ್ನು ಅವರು ಕಡೆಗಣಿಸುವುದು ಉತ್ತಮ ಎನಿಸುತ್ತದೆ. ಸರ್ಕಾರಿ ಕೆಲಸ ಸಿಕ್ಕಿರುವುದು ಸಂಬಳ ಪಡೆಯಲು ಮಾತ್ರ ಎಂಬ ನಿಲುವು ಹೊಂದಿರುವ ಕೆಲವು ಶಿಕ್ಷಕರಿಗಷ್ಟೇ ಈ ಬೋಧನಾ ವಿಧಾನ ಕಷ್ಟ ಎನಿಸುತ್ತಿದೆಯೇ ಹೊರತು ಮಕ್ಕಳಿಗೆ ಕಲಿಸುವ ವಿಷಯದಲ್ಲಿ ತಾವೂ ಕಲಿಯಲು ಸಿದ್ಧರಾಗಿರುವ ಯಾವ ಶಿಕ್ಷಕರೂ ಈ ಪಠ್ಯಕ್ರಮ ಕಷ್ಟ ಎಂದು ದೂರುತ್ತಿಲ್ಲ. ಸಚಿವರು ಇದನ್ನು ಅರ್ಥ ಮಾಡಿಕೊಳ್ಳಲು ತಮ್ಮದೇ ಇಲಾಖೆಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಕೇಳಿದರೂ ಸಾಕು. ಅವರು `ಚುಕ್ಕಿ ಚಿನ್ನಾ’ ಅಂತರ ಕ್ರಿಯಾತ್ಮಕ ರೇಡಿಯೋ ಬೋಧನಾ ಕಾರ್ಯ ಕ್ರಮಗಳನ್ನು ರೂಪಿಸುತ್ತಿದ್ದ `ಡಾಟ್‌ ಎಜು’ ಯೋಜನೆಯ ನಿರ್ದೇಶಕ ರಾಗಿದ್ದವರು. ಒಂದನೇ ತರಗತಿಯ ಪಠ್ಯ ಕ್ರಮವನ್ನೇ ಬಳಸಿ ರೂಪಿಸಲಾದ ಕಾರ್ಯಕ್ರಮಗಳೆಲ್ಲವಕ್ಕೂ ಧನಾತ್ಮಕ ಪ್ರತಿಕ್ರಿಯೆಗಳೇ ದೊರೆತಿದ್ದನ್ನು ಅವರು ಮರೆತಿರಲಾರರು. ಅನೇಕ ಶಿಕ್ಷಕರು ನಾವು ಕಲಿಯುವಾಗಲೂ ಇಂಥದ್ದೇ ವಿಧಾನಗಳಿದ್ದರೆ ಒಳ್ಳೆಯದಿತ್ತು ಎಂದು ಹೇಳಿದ್ದರೆಂದು ಕಾರ್ಯಕ್ರಮದ ಮೌಲ್ಯಮಾಪನ ನಡೆಸಿದವರು ದಾಖಲಿಸಿದ್ದಾರೆ.

* * *

ಸರ್ಕಾರ ಒಂದನೆಯ ತರಗತಿಯಿಂದ ಇಂಗ್ಲಿಷ್‌ ಬೋಧಿಸುವ ನಿರ್ಧಾರ ಕೈಗೊಳ್ಳುವ ಮೊದಲು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಐದನೇ ತರಗತಿಯಿಂದ ಇಂಗ್ಲಿಷ್‌ ಕಲಿಕೆಯನ್ನು ಆರಂಭಿಸುತ್ತಿದ್ದರು. ಅಲ್ಲಿಂದ ಮುಂದಕ್ಕೆ ಅವರು ಪದವಿಯ ತನಕವೂ ಇಂಗ್ಲಿಷ್‌ ಅನ್ನು ಕನಿಷ್ಠ ಭಾಷಾ ವಿಷಯವಾಗಿ ಅಧ್ಯಯನ ಮಾಡುತ್ತಾರೆ. ಈ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಪದವಿ ಮುಗಿಸಿದ ನಂತರವೂ ಸರಳ ಇಂಗ್ಲಿಷ್‌ ವಾಕ್ಯಗಳನ್ನು ರಚಿಸಲು ಸೋಲುತ್ತಾರೆ. ಕೆಎಎಸ್‌ ಪರೀಕ್ಷೆಯ ಫಲಿತಾಂಶಗಳಂತೂ ಇದಕ್ಕೆ ದೊಡ್ಡ ಸಾಕ್ಷಿ. ಇಂಗ್ಲಿಷ್‌ನಲ್ಲಿ ಅರ್ಹತೆ ಬೇಕಾದಷ್ಟು ಅಂಕಗಳನ್ನು ಗಳಿಸಲೇ ಹೆಚ್ಚಿನವರು ವಿಫಲರಾಗಿಬಿಡುತ್ತಾರೆ.

ಈಗ ಒಂದನೇ ತರಗತಿಗೆಂದು ರೂಪಿಸಲಾಗಿರುವ ಪಠ್ಯ ಕ್ರಮ ಕಷ್ಟವಿದೆಯೆಂದು ಹೇಳುತ್ತಿರುವ ಶಿಕ್ಷಕರ ಸಮಸ್ಯೆಯೂ ಇದುವೇ. ಇವರೆಲ್ಲಾ ಎಸ್‌ಎಸ್‌ಎಲ್‌ಸಿ ಅಥವಾ ಪದವಿ ಪೂರ್ವ ಶಿಕ್ಷಣ ಮುಗಿಸಿ ಶಿಕ್ಷಕರ ತರಬೇತಿ ಪಡೆದವರು. ಇವರ ಇಂಗ್ಲಿಷ್‌ನ ಮಟ್ಟವೂ ಇಂಥದ್ದೇ. ಪಠ್ಯ ಕ್ರಮ `ಕಷ್ಟವಾಗುತ್ತಿರುವುದು’ ಇದೇ ಕಾರಣದಿಂದ. ಈ ಶಿಕ್ಷಕರ ಇಂಗ್ಲಿಷ್‌ನ ಗುಣಮಟ್ಟವನ್ನು ಸುಧಾರಿಸಲು ಮತ್ತಷ್ಟು ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಅವರ ಉತ್ತರದಾಯಿತ್ವವನ್ನು ಖಾತರಿ ಪಡಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಂಡರೆ ಕನಿಷ್ಠ ಮಕ್ಕಳು ಇಂಗ್ಲಿಷ್‌ ಕಲಿಯುತ್ತಾರೆ. ಇದನ್ನು ಮಾಡದೆ ನೂರಾರು ಬಾರಿ ಪಠ್ಯ, ಪಠ್ಯ ಕ್ರಮಗಳನ್ನು ಬದಲಾಯಿಸಿದರೂ ಪ್ರಯೋಜನವಾಗದು.

ಅಮೃತಾ ಪ್ರೀತಂ ಇನ್ನಿಲ್ಲವಾದ ದಿನ ಇಂದು

ಒಂದು ರಸೀತಿ ಟಿಕೆಟ್ ನಷ್ಟು ಬದುಕು ಮಾಡಿದ ಅಮೃತಾ ಪ್ರೀತಂ ಇನ್ನಿಲ್ಲವಾದ ದಿನ ಇಂದು. ನೆನಪುಗಳ ಹುಚ್ಚು ಅಲೆಯನ್ನು ಮೀಟಿದ ಅಮೃತಾ ಅವರನ್ನು ನೆನೆಯುತ್ತಿದ್ದೇವೆ. ಪ್ರೀತಂ ಬಗ್ಗೆ ‘ಒಳಗೂ ಹೊರಗೂ’ ಬ್ಲಾಗ್ ಇನ್ನಿಲ್ಲದಷ್ಟು ಬರೆದಿದೆ.

‘ನೀನಾಸಂ’ ಜುಗಲಬಂದಿ

ನೀನಾಸಂ ನೆಲದಲ್ಲಿ ನೆನಪ ಮೆರವಣಿಗೆ

ಸಂಜೆಗೆ ಶಂಕರ್‍ ಮೊಕಾಶಿ ಪುಣೇಕರ್‍ ರ ‘ನಟನಾರಾಯಣಿ’ ನಾಟಕ ತಾನೆ? ಸ್ನೇಹಿತೆಯೊಬ್ಬಳು ಹಲ್ಲುಜ್ಜುತ್ತಾ ಕೇಳಿದಳು. ತುಸು ತಡವಾಗಿಯೇ ನನಗದು ಅರ್ಥವಾಯಿತು, ಅವಳು ಬಾಯಲ್ಲಿ ಟೂತ್‌ಬ್ರಶ್ ಇಟ್ಟುಕೊಂಡೇ ಮಾತನಾಡಿದ್ದರಿಂದ. ನಂತರ ನಾನು ಹೌದೆಂದೆ. ಚಿಕ್ಕವಳಿದ್ದಾಗ ನೋಡುತ್ತಿದ್ದ ಕಂಪನಿ ನಾಟಕದ ನೆನಪು ಬೆನ್ನುಹತ್ತಿತು. ಹಾಗೆ ಬೆನ್ನು ಹತ್ತಿದ್ದೇ, ಮನಸಿನೊಳಗೆ ನಡೆಯುತ್ತಿದ್ದ ಮೆರವಣಿಗೆಯೊಳಗಿನ

ಪಲ್ಲಕ್ಕಿ ನಿಧಾನವಾಗಿ ಹಿಮ್ಮುಖ ಚಲಿಸಲಾರಂಭಿಸಿತು. ಹದಿನೈದಿಪ್ಪತ್ತು ವರ್ಷಗಳ ಹಿಂದಿನದೆಲ್ಲವೂ ದೃಶ್ಯಗಳಂತೆ ಕಾಣಲಾರಂಭಿಸಿದವು.

ಸಂಪೂರ್ಣ ಓದಿಗೆ ಭೇಟಿ ಕೊಡಿ : ಲಾಪ

+++

ಹೆಗ್ಗೋಡಿನ ಬೆಳಗಿನಲ್ಲೊಂದು ಸ್ವಗತ

ಸಾಲದ್ದಕ್ಕೆ ಹಿಂದಿನ ಸಂಜೆ ಕೊನೆಯ ಗೋಷ್ಠಿಯಲ್ಲಿ ಅನಂತಮೂರ್ತಿ ಮಾತಾಡಿ ಮಾತಾಡಿ ಇನ್ನೂ ಮಾತಾಡುತ್ತಿದ್ದಾಗ ಅವರ ಮಗಳು “ಅಪ್ಪಾ ಮಾತಾಡಿದ್ದು ಸಾಕು, ಎಲ್ಲರಿಗೂ ತಿಂಡಿಗೆ ಹೊತ್ತಾಗುತ್ತಿದೆ” ಅಂತ ಚೀಟಿ ಕಳಿಸಿ, ಅದನ್ನು ಅನಂತಮೂರ್ತಿ ಜೋರಾಗಿ ಓದಿ ನಕ್ಕು, ಆ ನಗುವಿನಲ್ಲಿ ಜ್ಞಾನಪೀಠಿಯೊಬ್ಬರ ಸಂಸಾರದ ಸುಖ ಪರವಶ ಗಳಿಗೆಯೊಂದು ಹಾದು ಹೋದಂತೆ ಕಂಡುಬಂದದ್ದು ಇನ್ನೂ ನನ್ನ ತಲೆಯಲ್ಲಿ ಕುಳಿತಿತ್ತು.

ಸಂಪೂರ್ಣ ಓದಿಗೆ ಭೇಟಿ ಕೊಡಿ : ಬೆಟ್ಟದಡಿ

ಸಂಚಯ ಕಾವ್ಯ ಮತ್ತು ಲೇಖನ ಸ್ಪರ್ಧೆ

 

ನಂ. 100, 2ನೇ ಮುಖ್ಯರಸ್ತೆ, 6ನೇ ಬ್ಲಾಕ್, 3ನೇ ಹಂತ, 3ನೇ ಘಟ್ಟ, ಬನಶಂಕರಿ

ಬೆಂಗಳೂರು – 560 085

ಫೋನ್ ನಂ. 080-26791925 ಮೊಬೈಲ್: 98440 63514

prahlad118@yahoo.com

ಹೊಸ ಬರಹಗಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಸಂಚಯ ಸಾಹಿತ್ಯ ಪತ್ರಿಕೆಯು ಈ ವರ್ಷವೂ ಕನ್ನಡದ ಕಾವ್ಯ ಮತ್ತು ಲೇಖನ ಸ್ಪರ್ಧೆಗಳನ್ನು ಆಯೋಜಿಸಿದೆ.

ಕಾವ್ಯ ಸ್ಪರ್ಧೆ

ಇದರಲ್ಲಿ ಭಾಗವಹಿಸುವವರು ತಮ್ಮ ಸ್ವಂತ ರಚನೆಯ ಎರಡು ಕವಿತೆಗಳನ್ನು ಕಳುಹಿಸಬೇಕು. ಅನುವಾದಗಳಾಗಲೀ, ಈಗಾಗಲೇ ಪ್ರಕಟಗೊಂಡಿರುವ ಕವಿತೆಗಳಿಗಾಗಲೀ ಅವಕಾಶವಿಲ್ಲ.

 

ಲೇಖನ ಸ್ಪರ್ಧೆ

ಈ ಸ್ಪರ್ಧೆಗೆ ಕೊಟ್ಟಿರುವ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 15 ಪುಟಗಳನ್ನು ಮೀರದ ಒಂದು ಲೇಖನ ಕಳುಹಿಸಬಹುದು.

ಲೇಖನ ಸ್ಪರ್ಧೆಯ ವಿಷಯಗಳು

ದ.ರಾ.ಬೇಂದ್ರೆ ಅವರ ಕವಿತೆಯೊಂದರ ಚರ್ಚೆ

ಗಾಂಧೀಜಿ ಅವರ `ಹಿಂದ್ ಸ್ವರಾಜ್’ ಪುಸ್ತಕ ಮತ್ತು ಅದರ ಪ್ರಸ್ತುತತೆ

ಜಾರುವ ಕಾಲದಲ್ಲಿ ನನ್ನ ಊರಿನ ಚಿತ್ರಗಳು

ಕರ್ಣಾಟಕದ ರಾಜಕಾರಣದ ದಿಕ್ಕು-ದಿಸೆ

ಇವತ್ತಿನ ಕನ್ನಡದ ಹೊಸ ಬರಹಗಾರರ ಎದುರಿನ ಸವಾಲುಗಳು

 

ಸ್ಪರ್ಧೆಯ ನಿಯಮಗಳು

ಬರಹಗಳು ಸ್ವತಂತ್ರವಾಗಿದ್ದು, ಎಲ್ಲೂ ಪ್ರಕಟಗೊಂಡಿರಬಾರದು ಸ್

ಪರ್ಧೆಗೆ ಯಾವುದೇ ಪ್ರವೇಶ ಶುಲ್ಕ ಹಾಗೂ ವಯೋಮಿತಿಗಳು ಇಲ್ಲ.

ಸ್ಪರ್ಧೆಗೆ ಕಳುಹಿಸಲಾದ ಹಸ್ತಪ್ರತಿಗಳನ್ನು ವಾಪಸ್ಸು ಕಳುಹಿಸಲಾಗುವುದಿಲ್ಲ.

ಹಸ್ತಪ್ರತಿಯ ಜೊತೆಗೆ ಲೇಖಕರ ಹೆಸರು, ಸಂಪರ್ಕ ವಿಳಾಸಗಳನ್ನು ಬೇರೆ ಕಾಗದದಲ್ಲಿ ಬರೆದು ಲಗತ್ತಿಸಿರಬೇಕು. ಬಹುಮಾನಗಳು ಪುಸ್ತಕ ರೂಪದ್ದಾಗಿದ್ದು ತೀರ್ಪ್ರುಗಾರರ ತೀರ್ಮಾನವೇ ಅಂತಿಮ.  ಆಯ್ದ ಬಹುಮಾನಿತ ಬರಹಗಳು ಸಂಚಯ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ.

 

ಬಹುಮಾನ ವಿತರಣೆ ಜನವರಿ 31, 2009ರಂದು ಬೆಂಗಳೂರಿನಲ್ಲಿ ನಡೆಯುವ `ಕವಿದಿನ’ದ ಕಾರ್ಯಕ್ರಮದಲ್ಲಿ ನಡೆಯಲಿದೆ. ಬರಹಗಳನ್ನು ಕಳುಹಿಸಲು ಕೊನೆಯ ದಿನಾಂಕ ನವೆಂಬರ್ 30, 2008

ಬರಹಗಳನ್ನು ಕಳುಹಿಸಬೇಕಾದ ಸಂಪರ್ಕ ವಿಳಾಸ   ಕೇರಾಫ್ ಜೆನ್ ಹೈಜಿನಿಕ್ಸ್, ನಂ. 86, 8ನೇ ಅಡ್ಡರಸ್ತೆ, ಅಶೋಕನಗರ, ಬನಶಂಕರಿ 1ನೇ ಹಂತ, ಬೆಂಗಳೂರು – 560 050

ಜೋಗಿ ಕಹಾನಿ

 

ಅದೇ ನನ್ನ ಉತ್ತರ

ನೂರು ಪತ್ರ ಬರೆದಿದ್ದೀನಿ. ಒಂದಕ್ಕೂ ಉತ್ತರ ಬರೆದಿಲ್ಲ.

ಶಿಷ್ಯ ಆಕ್ಷೇಪಿಸುತ್ತಾ ಗೊಣಗಿಕೊಂಡ. ಗುರು ಹೇಳಿದ:

ಅದೇ ನನ್ನ ಉತ್ತರ.

ಇಲ್ಲಿ, ಡಾರ್ಕ್ ರೂಂನಲ್ಲಿ ನಾನು ’ನಾನು’ ಮಾತ್ರ ಆಗಿರುತ್ತೇನೆ

 

‘ಮೌನ ಕಣಿವೆ’ ಸುರಗಿ ಅವರ ಬ್ಲಾಗ್. ಸುರಗಿ ಯಾರು? ಈ ಪ್ರಶ್ನೆ ಬ್ಲಾಗ್ ಪ್ರಪಂಚದಲ್ಲಿ ಓಡಾಡುತ್ತಲೇ ಇದೆ. ಅನಾಮಿಕತೆ ಉಳಿಸಿಕೊಳ್ಳುವುದರ ಹಿಂದೆ ಇರುವ ಸ್ವಾತಂತ್ರ್ಯವನ್ನು ಸುರಗಿ ಇಲ್ಲಿ ವಿವರಿಸಿದ್ದಾರೆ. ಈ ಹಿಂದೆ ಎನಿಗ್ಮಾ ಬಳಗ ಈ ಅನಾಮಿಕತೆಯ ಬಗ್ಗೆ ಬರೆದ ಬರವಣಿಗೆಗೆ ಇದು ಪೂರಕ ಓದು-
ಕೆಲವು ಜನ ಮೆಸೇಜ್ ಮಾಡಿ ’ಸುರಗಿ ನಿಮ್ಮ ನಿಜವಾದ ಹೆಸರಾ?’ ಎಂದು ಕೇಳಿದ್ದಾರೆ. ಹೆಸರಿನಲ್ಲೇನಿದೆ ಮಹಾ ಎಂದುಕೊಂಡರೂ, ಎಲ್ಲಾ ಇರುವುದು ಹೆಸರಲ್ಲೇ ಎಂಬುದು ನನಗೆ ಗೊತ್ತಿದೆ. 

ಸಾರ್ವಜನಿಕ ಬದುಕಿನಲ್ಲಿ, ಸಮಾಜದಲ್ಲಿ ನಾವು ’ಎನೋ’ ಆಗಿರುತ್ತೇವೆ. ನಾವು ಆಡುವ ಮಾತುಗಳು, ವ್ಯಕ್ತಪಡಿಸುವ ಅಭಿಪ್ರಾಯಗಳು ’ನಮ್ಮವರ’ ಮೇಲೆ ನೇರವಾದ ಪರಿಣಾಮ ಬೀರುತ್ತದೆ. ಹಾಗಾಗಿ ಅಳೆದು, ತೂಗಿ ಮಾತಾಡುತ್ತೇವೆ. ಆದರೆ ಹೇಳಲಾರದ ದುಃಖ-ದುಮ್ಮಾನಗಳು, ಆಸೆ-ಆಕಾಂಕ್ಷೆಗಳು, ಸಿಟ್ಟು-ಸೆಡವುಗಳು ಮನಸ್ಸಿನೊಳಗೆ ಹಾಗೇ ಉಳಿದು ಬಿಡುತ್ತಲ್ಲ, ಅದಕ್ಕೇನು ಮಾಡೋಣ?

’ಡೈರಿ ಬರೆದು ಬಿಡಿ’ ಅಂದು ಬಿಡಬಹುದು. ಆದರೆ, ಅದು ಖಾಸಗಿ ಹಂತದಲ್ಲೇ ಉಳಿದು ಬಿಡುತ್ತದೆ. ತನ್ನ ಕ್ರಿಯೆಗಳನ್ನು ಬೇರೆಯವರು ಗಮನಿಸಬೇಕು ಎಂಬುದು ಮನುಷ್ಯ ಸಹಜ ಗುಣ. ಹಾಗಾಗಿ ಬ್ಲಾಗ್ ಬರೆಯಲು ಆರಂಭಿಸಿದೆ. ಇದು ’ನನ್ನೊಡನೆ ನಾನು’ ಮಾತಾಡಿಕೊಂಡಂತೆ. ಇದನ್ನೇ ನಾನು ನನ್ನ ಬ್ಲಾಗ್ ಬರವಣಿಗೆಯ ಆರಂಭದಲ್ಲಿ ಹೇಳಿಕೊಂಡಿದ್ದೇನೆ.

’ಮನಸ್ಸಿಗೆ ತೋಚಿದಂತೆ ಬರೆಯಲು ಬ್ಲಾಗೇನು ಪರ್ಸನಲ್ ಡೈರಿಯಾ?’ ಎಂದು ವಿಜಯ ಕರ್ನಾಟಕದಲ್ಲಿ ಲೇಖಕರೊಬ್ಬರು ಪ್ರಶ್ಣಿಸಿದ್ದಾರೆ. ಹೌದು, ಒಂದು ರೀತಿಯಲ್ಲಿ ಅದು ಪರ್ಸನಲ್ ಡೈರಿಯೇ. ಯಾರೂ ಓದುಗರಿಲ್ಲದಿದ್ದರೂ ನಾನು ಮನಸ್ಸು ಬಂದಾಗಲೆಲ್ಲಾ ಬರಿತಾನೇ ಇರ್ತಿನಿ. ಇಷ್ಟಕ್ಕೂ ಬರವಣಿಗೆ ಅನ್ನೊದು ಬಿಡುಗಡೆ. ಅದು ಲೇಖಕನ ಮಡುಗಟ್ಟಿದ ಭಾವನೆಗಳ ಅಭಿವ್ಯಕ್ತಿ.

ಇಂತಹ ಬರವಣಿಗೆಯಲ್ಲಿ ಆತ್ಮಚರಿತ್ರೆಯ ಛಾಯೆಯಿರಬಹುದು। ಹೆಂಗಸರಲ್ಲಿ ಸ್ವಂತ ಐಡೆಂಟಿಟಿ ಇರುವವರು ಕಡಿಮೆ. ’ಇಂತಹವರ’ ಪತ್ನಿ, ಮಗಳು, ತಂಗಿ, ತಾಯಿ ಅಥವಾ ಗೆಳತಿ ಎಂದೇ ಗುರುತಿಸುತ್ತಾರೆ. ಅದರಲ್ಲೂ ಗಣ್ಯ ವ್ಯಕ್ತಿಯ ಪತ್ನಿಯಾಗಿದ್ದು, ಗಂಡನ ಕ್ಷೇತ್ರದಲ್ಲೇ ಚೂರು ಪಾರು ಹೆಸರು ಮಾಡಿದ್ದರೆ ಅವಳನ್ನು ಸಂಶಯದಿಂದಲೇ ನೋಡಲಾಗುತ್ತದೆ. ಪತಿಯ ನೆರಳಲ್ಲೆ ಪತ್ನಿಯ ಪ್ರತಿಭೆಯನ್ನು ಗುರುತಿಸಲಾಗುತ್ತದೆ.

ಇಲ್ಲಿ, ಡಾರ್ಕ್ ರೂಂನಲ್ಲಿ ನಾನು ’ನಾನು’ ಮಾತ್ರ ಆಗಿರುತ್ತೇನೆ. ನನ್ನ ಬರಹ ಮಾತ್ರ ನಿಮ್ಮ ಮುಂದಿರುತ್ತದೆ. ಅದು ಮಾತ್ರ ನಿಮ್ಮನ್ನು ತಲುಪುತ್ತದೆ. ಸಮಾಜವನ್ನು ತಿದ್ದುವ, ಬದಲಿಸುವ ದೊಡ್ಡ ದೊಡ್ಡ ಹೊಣೆಗಾರಿಕೆಗಳು ಖ್ಯಾತ ನಾಮರಿಗೇ ಇರಲಿ.

ಕನ್ನಡದ ಕೆಲವು ಪತ್ರಿಕೆಗಳು ಮತ್ತು ನಿಯತಕಾಲಿಕಗಳು ನನ್ನ ಲೇಖನಗಳನ್ನು ಪ್ರಕಟಿಸಲಿಲ್ಲ. ಹಿಂದೆ ಪ್ರಕಟಿಸುತ್ತಿದ್ದವು. ಯಾಕಿರಬಹುದೆಂದು ಕೆದಕಿದಾಗ ಗೊತ್ತಾಗಿದ್ದು; ನಾನು ’ಇಂತವರ’ ಪತ್ನಿಯೆಂದು, ಮತ್ತೊಂದು ಕಾರಣ ಆ ಪತ್ರಿಕೆಯ ದ್ಯೇಯಧೋರಣೆಗಳಿಗೆ ವ್ಯತಿರಿಕ್ತವಾಗಿ ನನ್ನ ಬರಹ ಇದ್ದದ್ದು. ’ನಿಮ್ಮ ಬರಹದಲ್ಲಿ ಸತ್ವ ಇದ್ದಿರಲಾರದು ಬಿಡಿ’ ಎಂದು ನೀವನ್ನಬಹುದು. ಆದರೆ ಅದೇ ಬರಹಗಳನ್ನು ಪ್ರಜಾವಾಣಿ ಸಮೂಹ ಪ್ರಕಟಿಸಿತು.’ ಓ॥ಗೊತ್ತಾಯ್ತು ಬಿಡಿ ನೀವು ಎಲ್ಲಿ ಗುರುತಿಸಲ್ಪಡುತ್ತೀರಿ ’ ಅಂತ ರಾಗ ಎಳೆದ್ರಾ.. ಇದೇ ಸ್ವಾಮಿ, ಪೂರ್ವಗ್ರಹ ಅಂದ್ರೆ.

ಮೊನ್ನೆ ’ಕೆಂಡ ಸಂಪಿಗೆ’ಯಲ್ಲಿ ಜೋಗಿ ಬರೆದ ಬೈರಪ್ಪನವರ ಬರಹಕ್ಕೆ ಕಮೆಂಟ್ ಬರೆಯೋಣವೆಂದುಕೊಂಡೆ. ಯಾಕೆಂದರೆ ಬೈರಪ್ಪನವರ ಸ್ತ್ರೀ ಪಾತ್ರಗಳು ಜೋಗಿಗೆ ಕಾಡದಿರಬಹುದು. ಆದರೆ ನನಗಂತೂ ಕಾಡಿವೆ. ಅವರ ಸ್ತ್ರೀ ಪಾತ್ರಗಳು ಕಾದಂಬರಿಕಾರರನ್ನು ಮೀರಿ ಬೆಳೆಯಲು ಪ್ರಯತ್ನಿಸುತ್ತವೆ. ಕಾದಂಬರಿಕಾರ ಅವರನ್ನು ಉಸಿರುಗಟ್ಟಿಸಿದರೂ ನನ್ನಂಥ ಓದುಗಳಲ್ಲಿ ಅದು ಮರು ಜೀವ ಪಡೆದು ಚಿಗುರಿಕೊಳ್ಳುತ್ತದೆ.

ಆದರೆ ಬರೆಯಲಿಲ್ಲ. ಅಲ್ಲಿರುವ ಕಮೆಂಟ್ ರಾಶಿ ನೋಡಿ ಬೆರಗಾಗಿ ಹೋದೆ. ನಮ್ಮ ಪರಿಸರ ನಮ್ಮ ವ್ಯಕ್ತಿತ್ವವನು ರೂಪಿಸುತ್ತದೆ. ಓದು ಮತ್ತು ಅನುಭವ ಅದಕ್ಕೆ ಇನ್ನೊಂದು ಆಯಾಮ ನೀಡಬಹುದು. ಆದರೆ ನಮ್ಮದಲ್ಲದ ವ್ಯಕ್ತಿತ್ವವನ್ನು ಅರೋಪಿಸಿ ಜಗ್ಗಾಡಿದರೆ ನೋವಾಗುವುದಿಲ್ಲವೇ? ಜೋಗಿಯ ಬರವಣಿಗೆ ಹಿನ್ನೆಲೆಗೆ ಸರಿದು ಜೋಗಿ ’ಇಂಥವರು’, ಕಮೆಂಟ್ ಮಾಡಿದವರು ’ಇಂತವರಿಗೆ ಸಂಬಂದಿಸಿದವರು’ ಎಂಬುದರ ಮೇಲೆ ಚರ್ಚೆ ಮುಂದುವರಿಯುತ್ತಿತ್ತು. ಸೂಕ್ಷ ಮನಸ್ಸಿನವರಿಗೆ ಇದನ್ನು ಅರಗಿಸಿಕೊಳ್ಳುವುದು ಸ್ವಲ್ಪ ಕಷ್ಟ.

ಯಾವುದೋ ಒಂದು ಸಮುದಾಯದ ಅಥವಾ ಸಿದ್ಧಾಂತದ ಚೌಕಟ್ಟಿನೊಳಗೆ ನನ್ನನ್ನು ನನಗೆ ಗುರುತಿಸಿಕೊಳ್ಳಲು ಸಾಧ್ಯವಾಗದು. ಆದರೆ ಪ್ರಭಾವಕ್ಕೊಳಗಾಗಬಹುದು. ಗುರುತಿಸಿಕೊಳ್ಳುವುದೇ ಅನಿವಾರ್ಯವಾದರೆ ಸ್ತ್ರೀವಾದಿಯಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ. ಹಾಗಾಗಿ ’ ಇಂಥವರ’ ನೆರಳಲ್ಲಿ ಗುರುತಿಸಿಕೊಂಡರೆ ನಮ್ಮ ಐಡೆಂಟಿಟಿ ಮಸುಕಾಗುತ್ತದೆ. ಇಲ್ಲವೇ ಸಂಶಯಕ್ಕೊಳಗಾಗುತ್ತದೆ.

ಡಾರ್ಕ್ ರೂಂನಿಂದ ಬರೆದಾಗಲೂ ಕಿರಿಕಿರಿಯಾಗುವುದುಂಟು. ಸುಮಾರು ಒಂದು ತಿಂಗಳಿಗೂ ಹಿಂದೆ ನಾನು ಕೆಲವು ಪರಿಚಿತರಿಗೆ ಮೆಸೇಜ್ ಮಾಡಿ ನನ್ನ ಬ್ಲಾಗ್ ನೋಡುವಂತೆ ಮನವಿ ಮಾಡಿದ್ದೆ. ಇಮೇಲ್ ಗಿಂತಲೂ ಮೆಸೇಜ್ ಸುಲಭ ಅಂದುಕೊಂಡು ಮೊಬೈಲ್ ನಂಬರ್ ಪ್ರೋಪೈಲ್ ನಲ್ಲಿ ನೀಡಿದ್ದೆ. ಇಂಗ್ಲೀಷ್ ಪತ್ರಕರ್ತನೊಬ್ಬ ’ಲೀವಿಂಗ್ ಟುಗೆದರ್’ ಲೇಖನ ಬರೆದಾಗ ಎಚ್ಚೆತ್ತುಕೊಂಡ. ಬೆನ್ನು ಬಿಡದ ಬೇತಾಳದಂತೆ ಕಾಡತೊಡಗಿದ. ಅವನು ಇನ್ನಾರೋ ಪತ್ರಕರ್ತೆ ತಾನೆಂದು ಭಾವಿಸಿದನಂತೆ!

ಈ ಬ್ಲಾಗ್ ಮನುಷ್ಯ ಸ್ವಭಾವದ ಕೆಲವು ಮುಖಗಳನ್ನು ಪರಿಚಯ ಮಾಡಿಕೊಟ್ಟಿದೆ. ಅದಕ್ಕಾಗಿ ಕೃತಜ್ನತೆಯಿದೆ. ನಿಜದ ಬದುಕಿನಲ್ಲಿ ಎಲ್ಲವನ್ನೂ ಬಿಚ್ಚಿಟ್ಟು ಬದುಕಲಾಗದು. ಇಲ್ಲಾದರೆ ಅಡ್ಡಗೊಡೆಯಲ್ಲಿಟ್ಟ ದೀಪದಂತೆ ಹೇಳಿಕೊಳ್ಳಬಹುದು. ಹೇಳಿ ಹಗುರಾಗಬಹುದು. ಕೆಲವೊಮ್ಮೆ ಪ್ರತಿಕ್ರಿಯೆಯೂ ಸಿಗಬಹುದು. ಭಾವನೆಗಳ ವಿನಿಮಯಕ್ಕೆ ಇಲ್ಲಿ ಮುಕ್ತ ಅವಕಾಶವಿದೆ. ಓದುಗರ ಜೋತೆ ನೇರ ಸಂಪರ್ಕವಿರುವುದರಿಂದ ಬ್ಲಾಗ್ ಒಮ್ಮೊಮ್ಮೆ ಆಪ್ತ ಸಲಹಾ ಕೇಂದ್ರದಂತೆಯೂ ಕೆಲಸ ಮಾಡುತ್ತದೆ.

ನನ್ನದೊಂದು ಪುಟ್ಟ ಭಾವ ಪ್ರಪಂಚ. ಅಲ್ಲಿರುವುದು ನಾನು ಮತ್ತು ನನ್ನ ಭಾವನೆಗಳು ಮಾತ್ರ. ಅಲ್ಲಿಗೆ ಆಕ್ರಮಣವಾಗದಂತೆ ನಾನು ಎಚ್ಚರ ವಹಿಸುತ್ತೇನೆ. ’ನಿನಗೆ ನೀನೇ ಗೆಳೆಯ’ ಎಂಬ ಮಾತಿನಲ್ಲಿ ನನಗೆ ಸಂಪೂರ್ಣ ವಿಶ್ವಾಸವಿದೆ.

 

ಕಿ ರಂ ಮತ್ತು ಚಾಕಲೇಟು

ಭಯದ ಬಣ್ಣ ಹೇಗಿರುತ್ತದೆ?

`ಮೋಹನದಾಸ’ ಉದಯಪ್ರಕಾಶರ ನೀಳ್ಗತೆ. ಗಾತ್ರದ ದೃಷ್ಟಿಯಿಂದ ಇದನ್ನು ಕಾದಂಬರಿ ಎನ್ನಬಹುದಾದರೂ ನೀಳ್ಗತೆ ಎನ್ನುವುದೇ ಸೂಕ್ತ. ಇದನ್ನು ಹಿಂದಿಯಿಂದ ಅನುವಾದಿಸಿದವರು ಆರ್.ಪಿ.ಹೆಗಡೆ. ಇವರು `ತಿರೀಛ’ ಕತೆಯನ್ನು `ದೇಶಕಾಲ’ದಲ್ಲಿ ಓದಿ ಪ್ರಭಾವಿತರಾಗಿ ಉದಯಪ್ರಕಾಶರ `ಮೋಹನದಾಸ’ ಎಂಬ ನೀಳ್ಗತೆಯನ್ನು ತರಿಸಿ ಓದುತ್ತಾರೆ ಮತ್ತು ವಸ್ತು, ಶೈಲಿ, ತಂತ್ರದ ದೃಷ್ಟಿಯಿಂದ ಅದ್ಭುತವೆನಿಸುವ ಈ ನೀಳ್ಗತೆ ಕನ್ನಡಿಗರೆಲ್ಲರನ್ನು ತಲುಪಬೇಕೆಂಬ ಉದ್ದೇಶದಿಂದ ಅನುವಾದಿಸಲು ಮುಂದಾಗುತ್ತಾರೆ. ಆರ್.ಪಿ.ಹೆಗಡೆಯವರ ಈ ಘನ ಅಭಿರುಚಿಯ ಫಲಶ್ರುತಿ ಇದೀಗ ಲೋಹಿಯಾ ಪ್ರಕಾಶನದಿಂದಾಗಿ ನಮ್ಮೆಲ್ಲರ ಕೈಸೇರುವಂತಾಗಿರುವುದು ನಿಜಕ್ಕೂ ಅಭಿನಂದನೀಯ.

ಸಂಪೂರ್ಣ ಓದಿಗೆ ಭೇಟಿ ಕೊಡಿ- ಓದುವ ಹವ್ಯಾಸ  

+++

 

ಬೇಂದ್ರೆ ಪದ್ಯ ಓದಿದರೆ ಕೀರಂ ತರ ಓದಬೇಕು!

ಚಿತ್ರ : ಸುಶ್ರುತ ದೊಡ್ಡೇರಿ

ಕೀರಂ ಪದ್ಯವನ್ನು ಓದುವ ಬಗೆಯೆಂದರೆ ಪುಟ್ಟ ಮಗುವೊಂದು ಒಂದು ಬಾರ್ ಚಾಕಲೇಟನ್ನು ಪ್ರಪಂಚದ ಆನಂದವೆಲ್ಲ ಅದರಲ್ಲೇ ಅಡಕವಾಗಿದೆ ಎಂಬಂತೆ ತಿನ್ನುವ ಬಗೆಯಂತೆ. ಅದರಲ್ಲಿ ಒಂದು ಇನೊಸೆಂಟ್ ತನ್ಮಯತೆ ಇದೆ ಅನ್ನಿಸುತ್ತದೆ. ಪಾಂಡಿತ್ಯ ಕಣ್ಣಿಗೆ ರಾಚುವುದಿಲ್ಲ, ಪದಗಳಲ್ಲಿ ಜಾರ್ಗನ್ನುಗಳ ಭರಾಟೆ ಇರುವುದಿಲ್ಲ. ಸ್ವಲ್ಪ ಸ್ಪಾನಿಶ್ ಸಿನೆಮಾದ ಹಾಗೆಯೇ! 

ಸಂಪೂರ್ಣ ಓದಿಗೆ ಭೇಟಿ ಕೊಡಿ- ಬಾಗೇಶ್ರೀ 

ಜೋಗಿ ಅವರ ‘ಹನಿ ಕಹಾನಿ’

 

ಬೆಲೆ ಎಷ್ಟು?

ಇಬ್ಬರು ದರವೇಶಿಗಳು ಕಿತ್ತಾಡುತ್ತಿದ್ದರು. ಒಬ್ಬ ಇನ್ನೊಬ್ಬನಿಗೆ ಹೇಳುತ್ತಿದ್ದ:

ನಿನಗೆ ಸಿಕ್ಕಿರುವ ಈ ವೈರಾಗ್ಯದ ಬದುಕಿನ ಬೆಲೆ ನಿನಗೆ ಗೊತ್ತಿಲ್ಲ?  ತುಂಬ ಅಗ್ಗಕ್ಕೆ ಅದು ನಿನಗೆ ಸಿಕ್ಕಿಬಿಟ್ಟಿದೆ ನೋಡುಅದಕ್ಕೆ ಈ ಉಡಾಫೆ ನಿನಗೆ. ನಿನ್ನಂಥವನಿಗಿದು ಸಿಕ್ಕಿದ್ದು ದಂಡಕ್ಕೆ.

ಇನ್ನೊಬ್ಬನಿಗೆ ಸಿಟ್ಟು ಬಂತು:

ಅಷ್ಟೆಲ್ಲ ಮಾತಾಡ್ತೀಯಲ್ಲಪ್ಪಾ.. ನೀನೇನು ಮಹಾ ಕೊಟ್ಟಿದ್ದೀಯಾಎಷ್ಟು ಕೋಟಿ ಕೊಟ್ಟು ಕೊಂಡುಕೊಂಡೆ ಈ ಬದುಕನ್ನ? ಕೇಳಿದ.

ನನ್ನ ಸಾಮ್ರಾಜ್ಯವನ್ನೇ ಕೊಟ್ಟು ತಗೊಂಡೆ ಕಣಯ್ಯಾ.. ಆದ್ರೂ ತುಂಬ ಕಡಿಮೆ ಬೆಲೆಗೆ ಸಿಕ್ತು ಅನ್ನಿಸ್ತಿದೆ ನಂಗೆ.

 

‘ಮುತ್ತುಪ್ಪಾಡಿ’ ಸೃಷ್ಟಿಯಾದದ್ದು ಹೀಗೆ…

ಮೂರು ದಶಕದ ಕತೆ

 

ಮೂವತ್ತು ವರ್ಷಗಳು ಕಳೆದು ಹೋದವು.`ಬದ್ದತೆಯೆಂಬುದು ಸೃಜನಶೀಲತೆಗೆ ಮೊದಲ ಶತ್ರು, ಎಂಬ ಫಲಕ ತೂಗುತ್ತಿತ್ತು. ಪಕ್ಕದಲ್ಲಿ, `ಬರಹದಿಂದ ಬದುಕು ಬದಲು ಮಾಡಲಾಗದು’ ಎಂಬ ವಾದವನ್ನು ಸುಳ್ಳು ಮಾಡುತ್ತಿದ್ದ, ಹಲವು ನಿಲುವುಗಳಿಗೆ ಬದ್ದವಾದ, ಧರ್ಮಗ್ರಂಥಗಳು ಕಣ್ಣೆದುರಿಗಿದ್ದವು. ಆದ್ದರಿಂದ, ಕೆಲವು ಸೂತ್ರಗಳಿಗೆ ಬದ್ದನಾಗಿಯೇ ನಾನು ಬರವಣಿಗೆ ಆರಂಭಿಸಿದ್ದೆ; ಯಾಕೆಂದರೆ ನನ್ನೆದುರು ಎರಡು ಗುರಿಗಳಿದ್ದವು.

 

ಕನ್ನಡದ ಓದುಗರಿಗೆ ಅಷ್ಟೇನೂ ಪರಿಚಿತವಲ್ಲದ ಜನಸಮೂಹವೊಂದನ್ನು (ಅವರನ್ನು ದ್ವೀಪವೆಂದೂ ಕರೆಯಲಾಗುತ್ತಿತ್ತು) `ಹೌದಾ, ಅವರು ಹಾಗಿಲ್ಲವಾ? ಎಂಬಂತೆ ಉಳಿದವರಿಗೆ ಪರಿಚಯಿಸುವುದು ಮೊದಲ ಗುರಿ. ಅಂತೆಯೇ, ಕನ್ನಡದ ಓದಿಗೆ ಬಹುಪಾಲು ಕರುಡಾಗಿದ್ದ ಅದೇ ಜನಸಮೂಹವನ್ನು ಓದುವಂತೆ ಪ್ರೇರೇಪಿಸಿ `ಹೌದಾ? ನಾವು ಹೀಗಿದ್ದೇವಾ?, ಎಂದು ಪ್ರಶ್ನಿಸಿಕೊಳ್ಳುವಂತೆ ಒತ್ತಾಯಿಸುವುದು ಎರಡನೆಯ ಗುರಿ. ಒಟ್ಟಿನಲ್ಲಿ ಎರಡು ದೋಣಿಗಳಲ್ಲಿ ಕಾಲಿರಿಸಿ ಹುಟ್ಟು ಹಾಕುವ ಹುಚ್ಚು ಹಂಬಲ. ಕಾಲು ಶತಮಾನದ ಸುದೀರ್ಘ ಯೋಜನೆ ಅದು. ಅದಕ್ಕಾಗಿ ಅಷ್ಟು ಕಾಲ ನಾನು ಬದುಕುಳಿಯಲೇ ಬೇಕಾಗಿತ್ತು: ಬೇರೆಯವರ ಉಸಾಬರಿ ಬೇಡವೆಂದು ನನ್ನದೇ ಆದ `ಮುತ್ತುಪ್ಪಾಡಿ’ಎಂಬ ಗ್ರಾಮವನ್ನು ಕಲ್ಪಿಸಿದೆ.

೩೦ ವರ್ಷಗಳ ಹಿಂದೆ ಬೊಳುವಾರು ಮಹಮದ್ ಕುಂಇ ದೇವರುಗಳ ರಾಜ್ಯದಲ್ಲಿ ಕಥಾ ಸಂಕಲನ ಹೊರತಂದರು. ಅಷ್ಟೆ ಅಲ್ಲ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಸಂವೇದನೆಯ ಗಾಳಿ ಬೀಸಲು ಕಾರಣರಾದರು. ಈಗ ಡಾ ಎಂ ಭೈರೇಗೌಡ ತಮ್ಮ ಪ್ರಗತಿ ಗ್ರಾಫಿಕ್ಸ್ ಮೂಲಕ ಈ ಪುಸ್ತಕ ಮತ್ತೆ ಬೆಳಕು ಕಾಣಲು ಕಾರಣರಾಗಿದ್ದಾರೆ.

ಈ ಸಂದರ್ಭದಲ್ಲಿ ಬೊಳುವಾರು ಮೆಲುಕು ಹಾಕಿದ ನೆನಪುಗಳ ಸಂಪೂರ್ಣ ಓದಿಗೆ ಭೇಟಿ ಕೊಡಿ- ಓದುಬಜಾರ್

ಯಾರೂ…?

 

‘ಸಿರಿ’ ಬಂದ ಕಾಲಕ್ಕೆ…

-ಮೃಗನಯನಿ

 

 

ಟೆರೇಸಿನ ಮೂಲೆಯೊಂದರಲ್ಲಿ ಜಾಗ ಹಿಡಿದು ಯಾವುದೋ ಯೋಚನೆಯಲ್ಲಿ ಮಗ್ನಳಾಗಿದ್ದ ಬಬ್ಲಿಯ ಬಳಿಗೆ ಹೋಗಿ ಕೂತೆ. ಅವಳಿಗೆ ಏನೋ ಹೇಳಬೇಕಿತ್ತು ನಾನು. ಹೇಗೆ ಹೇಳುವುದೆಂದು ತಿಳಿಯುತ್ತಿರಲಿಲ್ಲ, ಹೇಳುವುದು ಹೇಗೆಂದು ಯೋಚಿಸುತ್ತಾ ಟೆರೇಸಿನ ಗೋಡೆಯ ಒರಟು ಚರ್ಮಕ್ಕೆ ನನ್ನ ಬೆನ್ನೊರಗಿಸಿ ಕೂತು ನಿಟ್ಟುಸಿರಿಟ್ಟೆ.

 

ಇದೆಲ್ಲಾ ಶುರುವಾಗಿದ್ದು ಮೂರುದಿನದ ಹಿಂದೆ, ನಾನು ಮಧು ರೂಮಿಗೆ ಹೋಗಿಬಂದಾಗಿನಿಂದ. ಮಾರನೇ ದಿನ ಸೈಕಾಲಜಿ ಇಂಟರ್ನಲ್ಸ್ ಇತ್ತು ನನ್ನ ಬಳಿ ಒಂದು ಪಾಠದ ನೋಟ್ಸ್ ಇರಲಿಲ್ಲ. ಇಡೀ ಹಾಸ್ಟಲ್ಲಿನ ಏಳ್ನೂರುಜನರಲ್ಲಿರುವ ನನ್ನ ಏಕೈಕ ಕ್ಲಾಸ್ ಮೇಟ್ ಎಂದರೆ ಮಧು. ಸರಿ ಈಗ ಮಲಗಿಬಿಡೋಣ ರಾತ್ರಿ ಒಂದು ಗಂಟೆಗೆ ಎದ್ದು ಮಧು ನೋಟ್ಸ್ ಓದಿದರಾಯ್ತು ಎಂದುಕೊಂಡು ಅವಳಿಗೆ ಮೆಸೇಜ್ ಮಾಡ್ದೆ. ಅವಳು ಸರಿ ನಾನು ರೂಮ್ ಬಾಗ್ಲ್ಲುತೆಗ್ದೇ ಇಟ್ಟಿರ್ತೀನಿ ನಾ ಮಲ್ಗಿದ್ರೂ ಫೋಟೋ ಕಾಪೀಸು ಟೇಬಲ್ ಮೇಲಿರುತ್ತೆ ತೊಗೊಂಡು ಹೋಗು ಎಂಬ ಉತ್ತರ ನೋಡಿ ಒಂದು ಗಂಟೆಗೆ ಅಲರಾಮ್ ಇಟ್ಟು ಮಲಗಿದೆ.

 

ಒಂದು ಗಂಟೆಗೆ ಅಲರಾಮ್ ಹೊಡೀತು ಎದ್ದು ದಡಬಡಿಸಿ ಆರಿಸಿದೆ. ಲಾಲಿ ಪ್ಚ್… ಎಂದು ಸದ್ದು ಮಾಡುತ್ತಾ ಮಗ್ಗಲು ಬದಲಿಸಿದಳು. ಕತ್ತಲಲ್ಲಿ ಚಪ್ಪಲಿ ಹುಡುಕಿ ಹಾಕಿಕೊಂಡು ರೂಮ್ ಹೊರಗೆ ಬಂದು ಲಿಫ್ಟ್ ಮುಂದೆ ಹೋಗಿ ನಿಂತು ಅದರ ಸ್ವಿಚ್ ಒತ್ತಿದೆ. ಎರಡು ನಿಮಿಷದ ನಂತರ ಅದು ಕೆಟ್ಟು ಹೋಗಿರುವುದು ನೆನಪಿಗೆ ಬಂತು. ಗ್ರೌಂಡ್ ಫ್ಲೋರ್ನಲ್ಲಿರುವ ನನ್ನ ರೂಮಿನಿಂದ ಐದನೇ ಮಹಡಿಯಲ್ಲಿರುವ ಮಧು ರೂಮಿಗೆ ಹೋಗುತ್ತಾ ಕೆಟ್ಟು ನಿಂತಿರುವ ಲಿಫ್ಟನ್ನೂ ಕೆಟ್ಟು ನಿಂತು ನಾಲ್ಕು ದಿನವಾದರೂ ಸರಿಮಾಡಿಸುವ ಗೋಜಿಗೆ ಹೋಗದ ವಾರ್ಡನ್ನನ್ನೂ ಶಪಿಸುತ್ತಾ ಸೆಕೆಂಡ್ ಫ್ಲೋರ್ ತಲುಪಿದೆ.

ಅಲ್ಲಿನ ಟ್ಯೂಬ್ ಲೈಟ್ ಬೆಳಕು ಎಲ್ಲಾ ಫ್ಲೋರುಗಳ ಬೆಳಕಿಗಿಂತ ಪ್ರಕಾಶಮಾನವಾಗಿದೆಯಾ ಎಂಬ ಅನುಮಾನವು ಬಗೆಹರಿಯುವ ಮೊದಲೇ ಮೂರನೇ ಮಹಡಿಯಲ್ಲಿ ಲೈಟೇ ಇಲ್ಲ ಎಂಬ ವಾಸ್ತವ ಲೈಟ್ ಆರಿಸಿದವರ ಮೇಲೆ ಸಿಟ್ಟು ತರಿಸಿತು. ಅದೇ ಸಿಟ್ಟಿನಲ್ಲಿ ಮೂರನೇ ಮಹಡಿ ತಲುಪಿ ಲೈಟ್ ಆನ್ ಮಾಡಲು ಸ್ವಿಚ್ ಬೋರ್ಡ್ ಬಳಿ ಹೋದರೆ ನನ್ನ ತಡೆದಿದ್ದು ಆಹ್… ಎಂದು ವಿಚಿತ್ರವಾಗಿ ನರಳುತ್ತಿರುವ ಸದ್ದು ಒಂದು ನಿಮಿಷ ಪ್ರೇತಾತ್ಮಗಳ ಕಲ್ಪನೆ ಬಂದು ಭಯವಾಗಿ ಸಹವಾಸ ಅಲ್ಲ ಎಂದುಕೊಂಡು ಲೈಟ್ ಹಾಕುವ ಸಾಹಸಕ್ಕೆ ಹೋಗದೆ ಅತ್ತಿತ್ತ ನೋಡದೆ ಮೆಟ್ಟಿಲುಗಳನ್ನು ತುಳಿದು ಮಧು ರೂಮ್ ಮುಟ್ಟಿ ಸಮಾಧಾನದ ಉಸಿರು ತೆಗೆದುಕೊಂಡೆ.

 

ಆದರೆ ತಕ್ಷಣ ನನ್ನ ಕಲ್ಪನೆಗಳ ಬಗ್ಗೆ ನನಗೇ ನಗು ಬಂತು. ಕೆಳಗೆ ಹೋಗುವಾಗಲಾದರೂ ಆ ಏನಿರಬಹುದೆಂದು ನೋಡಿಕೊಂಡೇ ಹೋಗಬೇಕೆಂಬ ಧೃಡ ನಿರ್ಧಾರ ಮಾಡಿ ಫೋಟೋಕಾಪಿಗಳನ್ನು ತೆಗೆದುಕೊಂದು ಮೂರನೇ ಫ್ಲೋರ್ ತಲುಪಿದೆ. ಆದರೆ ಅಲ್ಯಾವ ಸದ್ದೂ ಇರಲಿಲ್ಲ ಆದರೂ ಅಲ್ಲೆಲ್ಲಾ ಅಡ್ದಾಡಿದೆ. ಎನೂ ಕಾಣಲಿಲ್ಲ. ನಿರಾಸೆಗೊಂಡು ರೂಮ್ ತಲುಪಿ ಓದುತ್ತಾ ಕೂತೆ.

 

ಸುಮಾರು ಮೂರು ಗಂಟೆಯ ಹೊತ್ತಿಗೆ ಪಕ್ಕದ ರೂಮಿನಲ್ಲಿ ಯಾರೋ ಎದ್ದ ಸದ್ದಾಯಿತು. ಹೊರಬಂದು ನೋಡಿದೆ. ಬಬ್ಲಿ ಬ್ರಷು ಪೇಸ್ಟು ಹಿಡಿದುಕೊಂಡು ನಿದ್ದೆಗಣ್ಣಲ್ಲಿ ಬಾತ್ರೂಮ್ ಕಡೆಗೆ ಹೊರಟಿದ್ದಳು. ಅವಳಿಗೆ ನಾಳೆ ಬಿಸ್ನೆಸ್ ಎಕನಾಮಿಕ್ಸ್ ಪರೀಕ್ಷೆ ಇತ್ತು. ನಾನೂ ಅವಳೂ ಬೇರೆ ಬೇರೆ ಕೋರ್ಸ್ ತೆಗೆದುಕೊಂಡಿದ್ದರೂ ಚಿಕ್ಕಂದಿನಿಂದ ಒಳ್ಳೆಯ ಸ್ನೇಹಿತರು. ಅವಳಿಗೆ ದೇವರು ದೆವ್ವ ಎಲ್ಲದರಲ್ಲಿ ಅತ್ಯಂತ ನಂಬಿಕೆ. ನಾನು ನಂಬಿಕೆ ಇದೆಯೋ ಇಲ್ಲವೋ ಎಂದು ನನಗೇ ಗೊತ್ತಿಲ್ಲದ ಎಡಬಿಡಂಗಿ. ಅವಳನ್ನು ಸುಮ್ಮನೆ ಹೆದರಿಸೋಣವೆನ್ನಿಸಿತು. ‘ಬಬ್ಲಿ ಪ್ಲೀಸ್ ಕಣೇ ಈಗ ಮಾತ್ರ ಬಾತ್ರೂಮ್ಗಳ ಕಡೆ ಹೋಗ್ಬೇಡ ಎಂದೆ.’ ಇವಳಿಗೇನಾಗಿತು ಎನ್ನುವಂತೆ ವಿಚಿತ್ರವಾಗಿ ನೋಡಿದಳು. ‘ಹೋಗಬೇಡ ಅಷ್ಟೇ ನಾ ಹೇಳಿದ್ದನ್ನ ಕೇಳು.’ ಎಂದು ನನ್ನ ರೂಮಿಗೆ ಎಳೆದುಕೊಂಡು ಹೋಗಿ ನನಗಾದ ಅನುಭವವನ್ನ ವಿತ್ ಆಡಿಯೋ ವೀಡಿಯೋ ಎಫೆಕ್ಟ್ ವಿವರಿಸಿ ಹೇಳಿದೆ.

 

ಆಮೇಲೆ ನಮ್ಮ ಸಂವಾದ ಹೀಗಿತ್ತು

ಬಬ್ಲಿ: ಎಷ್ಟ್ ಗಂಟೆಗೆ ನೆಡೆದಿದ್ದು ಹೇಳು?

ನಾನು: ಒಂದು ಗಂಟೆಗೆ!

ಬಬ್ಲಿ: ಹಂಗಾದ್ರೆ ಆ ಸದ್ದು ಖಂಡಿತ ದೆವ್ವದ್ದೇ..

ನಾನು: ಆಂ.. ಯಾಕೆ? (ನನಗೆ ನಗು ಬರುತ್ತಿತ್ತು)

ಬಬ್ಲಿ: ಮಂಗನ್ ಥರ ಆಡ್ಬೇಡ ಸ್ವಲ್ಪ ಸೀರಿಯಸ್ಸಾಗಿರೋದು ಕಲಿ ರಾತ್ರಿ ಒಂದು ಗಂಟೆಗೆ ಈವಿಲ್ ಸ್ಪಿರಿಟ್ಸ್ ಇವೋಕ್ ಆಗುತ್ತೆ ಅಂತಾರೆ

ನಾನು: ಯಾರು ಅಂತಾರೆ?

ಬಬ್ಲಿ: ನಾನು ದಿ ಎಕ್ಸಾರ್ಸಿಸ್ಟ್  ಮೂವಿಲಿ ನೋಡಿದ್ದೆ (ನನಗೆ ನಗು ತಡೆಯಲಾಗಲಿಲ್ಲ) ನಗ್ಬೇಡ ಆ ಸಿನೆಮಾನ ನೈಜ ಘಟನೆ ಆಧರಿಸಿ ಮಾಡಿರೋದು.

ನಾನು: ಸರಿ ಹಂಗಾದ್ರೆ ನಾಳೆನೂ ಒಂದ್ ಗಂಟೆಗೆ ಹೋಗಿ ನೋಡಣ ಬರ್ತೀಯಾ. ನಿನ್ ದೆವ್ವ ಕಾಣ್ಸುತ್ತಾ ಅಂತ? ಬಬ್ಲಿ: ಬೇಕಾದ್ರೆ ನಿಂಗ್ ತಲೆ ಕೆಟ್ಟಿದ್ರೆ ನೀ ಹೋಗು ನಾನು ಬರಲ್ಲ!

ನಾನು: ಏ ಹೆದ್ರ್ಬೇಡ ಕಣೇ ಈ ಹುಡ್ಗೀರು ಹೊತ್ತಲದ್ ಹೊತ್ನಲ್ ಫೋನಲ್ ಮಾತಾಡ್ತಿರಲ್ವ? ಆ ಸೌಂಡೇ ಇರ್ಬೇಕು ಅದು. ದೆವ್ವ ಅಲ್ಲ ಅಂತ ನಾ ಪ್ರೂವ್ ಮಾಡ್ತಿನಿ ಬಾ ನನ್ಜೊತೆ.

ಬಬ್ಲಿ: ನಾ ಬರಲ್ಲ! ನೀನೂ ಹೋಗಬಾರದು . ಸಾಕು ಆ ವಿಷ್ಯ ಮಾತಾಡಿದ್ದು ಓದ್ಕ. ಎಂದು ಎದ್ದು ಹೋಗಿ ಮತ್ತೆ ಮಲಗಿಕೊಂಡಳು!

 

ಆ ಸದ್ದು ಹೇಗೆ ಬರುತ್ತಿತ್ತೆಂದು ಕಂಡುಹಿಡಿಯಲೇಬೇಕೆನ್ನಿಸಿತು ನನಗೆ. ಈ ಗೂಬೆ ಬರ್ದೇ ಹೋದ್ರೆ ಪರವಾಗಿಲ್ಲ ನಾನಂತೂ ಹೋಗಿ ನೋಡೋದೇ ಎಂದು ನಿರ್ಧರಿಸಿದೆ. ಇಂಟರ್ನಲ್ಸ್ ಮುಗಿದ ರಾತ್ರಿ ‘ಮೊಗ್ಗಿನ ಮನಸು’ ಸಿನೆಮಾ ನೋಡಿ ಬಂದು ಸುಮಾರು ಹತ್ತು ಗಂಟೆಯ ಹೊತ್ತಿಗೆ ಮಲಗಿದೆವು.

 

ರಾತ್ರಿ ಒಂದು ಗಂಟೆಗೆ ಅಲರಾಮ್ ಹೊಡೀತು. ಎದ್ದು ರೂಮಿನಿಂದ ಹೊರಬರುವ ಹೊತ್ತಿಗೆ ಬಬ್ಲಿಯೂ ನಿಂತಿದ್ದಳು. ‘ನೀನೂ ಬರ್ತೀಯಾ? ‘ ನನಗೆ ಆಶ್ಚರ್ಯವಾಯಿತು. ‘ನಿನ್ ಫ್ರೆಂಡಾದ್ಮೇಲೆ ಇನ್ನೇನ್ ಮಾಡಕ್ಕಾಗತ್ತೆ ನನ್ ಕರ್ಮ!’ ಬೈದುಕೊಂಡಳು. ಇಬ್ಬರೂ ಸದ್ದು ಮಾಡದೆ ಮೂರನೇ ಫ್ಲೋರ್ಗೆ ಹೋದೆವು. ಅದೇ ರೀತಿಯ ಸದ್ದು ಬಬ್ಲಿ ನನ್ನ ಮುಖ ನೋಡಿ ಬಾರೆ ಹೋಗಣ ಇದು ಖಂಡಿತಾ ದೆವ್ವಾನೇ ಪಿಸುಗುಟ್ಟಿದಳು. ನೀನು ಬೇಕಾದ್ರೆ ಹೋಗು ನಂಗೆ ಡಿಸ್ಟರ್ಬ್ ಮಾಡ್ಬೇಡ ಬೈದೆ. ಅಲ್ಲೇ ನಿಂತಳು.

 

ನೀ ಇಲ್ಲೇ ನಿಂತಿರು ನಾನು ಆ ಕಾರಿಡಾರಿನ ಕಡೆಯಲ್ಲಿ ನೋಡ್ಕೊಂಡ್ ಬರ್ತೀನಿ ಎಂದು ನಾನು ಹೇಳುವ ಹೊತ್ತಿಗೆ, ಸರಿ ನಾನು ಇಲ್ಲಿ ಬಾತ್ ರೂಮ್ಗಳ ಕಡೆ ನೋಡಿ ಬರ್ತೀನಿ ಅಂದ್ಲು. ಕೆಟ್ಟ ಧೈರ್ಯದಿಂದ ಉದ್ದದ ಕತ್ತಲೆ ಕಾರಿಡಾರಿನ ತುಂಬ ಅಲೆದಾಡಿದೆ. ಉದ್ದಕೆ ಚಾಚಿಕೊಂಡಿರುವ ಕಾರಿಡಾರು, ಕಾರಿಡಾರಿನ ಎರಡೂ ಬದಿಗೆ ರೂಮುಗಳು. ಅಲ್ಲಿ ಯಾರೂ ಇರಲ್ಲಿಲ್ಲ! ಬಾತ್ರೂಮ್ನ ಕಡೆಯಿಂದ ಬಬ್ಲಿ ಜೋರಾಗಿ ಕಿರುಚಿಕೊಂಡಳು! ಆ ದಿಕ್ಕಿಗೆ ಓಡಿದೆ. ಅಲ್ಲಿಂದ ಹೊರಬಂದ ಬಬ್ಲಿ ನನ್ನ ಕೈಹಿಡಿದುಕೊಂಡು ದಡ ದಡ ಕೆಳಗಿಳಿಯತೊಡಗಿದಳು! ‘ಏನಾಯ್ತು ಏನಿತ್ತು ಅಲ್ಲಿ..?’ ‘ಹೌದು ನೀ ಹೇಳಿದ್ದೇ ಸರಿ ಯಾವ್ದೋ ಹುಡ್ಗಿ ಫೋನ್ನಲ್ಲಿ ಮಾತಾಡ್ತಿದ್ಲು. ನಾನು ಅವ್ಳನ್ನೇ ಕಾನ್ಸಂಟ್ರೇಷನ್ನಿಂದ ನೋಡ್ತಾ ಏನ್ ಮಾತಾಡ್ತಿದಾಳೆ ಅಂತ ಕೇಳ್ತಿದ್ನಾ ಅಷ್ಟರೊಳಗೆ-‘ ‘ಅಷ್ಟರೊಳಗೆ ದೆವ್ವಾ ಬಂದ್ಬಿಡ್ತಾ?’ ನನ್ನ ಪ್ರಶ್ನೆ. ‘ಥೂ ನಿನ್ನ! ಜಿರಳೆ .. ಜಿರಳೆ ಬಿತ್ತು ನನ್ ಮೇಲೆ! ಅದ್ಕೆ ಕಿರಿಚ್ಕೊಂಡೆ.’ ಅಂದ್ಲು.

 

ಥೂ ಈ ಜಿರಳೆ ಹಲ್ಲಿಗಳಿಗೆಲ್ಲಾ ಹೆದ್ರುಕೊತೀಯಲ್ಲ ಎಂದು ಬೈದುಕೊಂಡರೂ ನಾನೂ ಅಂಥವಳೇ ಆದ್ದರಿಂದ ಸುಮ್ಮನಾದೆ.

 

+++

 

ಈ ಘಟನೆ ನೆಡೆದ ಮರುದಿನ ಸಂಜೆ ಕಾಲೇಜು ಮುಗಿದಮೇಲೆ ಕಾಲೇಜು ಬಸ್ಸಿಗೆ ಎಂದಿನಂತೆ ಕಾಯುತ್ತಾ ನಿಂತಿದ್ದೆ. ಬಸ್ಸು, ಬಾಧೂಳಿಯನ್ನು(ಗೋಧೂಳಿ ಥರ-ಬಸ್ಸು ಸೃಷ್ಟಿಸುವ ಧೂಳು) ಅಲ್ಲಿ ನಿಂತವರಿಗೆಲ್ಲಾ ಅಭಿಷೇಕ ಮಾಡಿಸುತ್ತಾ ಬಂದು ನಮ್ಮೆಲ್ಲರ ಮುಂದೆ ನಿಂತಿತು. ಹತ್ತಲು ಹೋದೆ ಯಾರೋ ಬ್ಯಾಗ್ ಹಿಡಿದು ಎಳೆಯುತ್ತಿದ್ದಾರೆ ಹತ್ತಲು ಬಿಡುತ್ತಿಲ್ಲ ಅನ್ನಿಸಿತು, ತಿರುಗಿ ನೋಡಿದೆ ಯಾರೂ ಇಲ್ಲ. ಆದರೆ ಹತ್ತಲು ಮಾತ್ರ ಆಗುತ್ತಿಲ್ಲ ‘ಎಂತದಾ ಬೇಗ ಬೇಗ ಹತ್ತಿ ಲೇಟ್ ಮಾಡದ್ ಎಂತಕ್ಕೆ’ ಅಂದರು ಡ್ರೈವರ್ ಅಣ್ಣ. ಅಣ್ಣಾ ಯಾರೋ ಬ್ಯಾಗ್ ಎಳೀತಿದಾರೆ ಹತ್ತಕ್ ಬಿಡ್ತಿಲ್ಲ ಅಂತ ಹೇಳಕ್ ಹೋದೋಳು ಹುಚ್ಚು ಅಂದುಕೊಂಡಾರೆಂದು, ಅಣ್ಣಾ ಹತ್ತಕ್ ಆಗ್ತಿಲ್ಲ ಅಂದೆ. ಅಲ್ಲಿಂದ ಧಡಾರೆಂದು ಎದ್ದ ಅಣ್ಣ ಮೇಲೆಳೆದು ಹತ್ತಿಸಿಕೊಂಡು ನನ್ನ ಕೈಗೆ ಬಸ್ ಕೀ ಕೊಟ್ಟು, ನೀರು ಬೇಕಾ? ಸುಸ್ತಾಗ್ತಿದೆಯಾ? ಅಂದರು ನನಗೆ ಒಂದೂ ಅರ್ಥವಾಗಲಿಲ್ಲ. ಪಾಪ ಎಷ್ಟು ವರ್ಷದಿಂದ ಫಿಟ್ಸ್ ಇದೆ ಅಂತ ಪರಿತಾಪ ಬೇರೆ. ನಾನು ತಲೆ ಚಚ್ಚಿಕೊಳ್ಳುವುದೊಂದು ಬಾಕಿ!

 

ಹಾಸ್ಟಲ್ಲಿಗೆ ಬಂದು ಅಟೆಂಡೆನ್ಸ್ ಕೊಡಲು ಹೋದೆ ವಾರ್ಡನ್ನು ‘ನಯ್ನಿ ನಿನ್ ಫ್ರೆಂಡ್ ಬಬ್ಲಿಗ್ಯಾರೋ ಸಿ.ಡಿ ಕೊಟ್ಟೋಗಿದಾರೆ ಕೊಟ್ಬಿಡು ಅವ್ಳಿಗೆ. ಅವ್ಳಿನ್ನು ಕಾಲೇಜಿನಿಂದ ಬಂದಿಲ್ಲ ಅಲ್ವ?’ ಎನ್ನುತಾ ಸಿಡಿಯೊಂದನ್ನು ನನ್ನ ಕೈಗಿತ್ತರು. ಮ್ಯಾಮ್ ಯಾರ್ ಕೊಟ್ಟಿದ್ದು ಕೇಳಿದೆ. ಗೊತ್ತಿಲ್ಲ ನಾನು ಮೆಸ್ ಬಿಲ್ಲ್ ಬರೀತಿದ್ದೆ ಈ ಸಿ ಡಿನ ಬಬ್ಲಿಗೆ ಕೊಟ್ಬಿಡಿ ಅಂದ್ರು ಸರಿ ಅಂದೆ. ನಿಮ್ಮ್ ಹೆಸ್ರೇನು ಅಂತ ಕೇಳಬೇಕು ಅನ್ಕೊಳೋ ಹೊತ್ತಿಗೆ ಅವ್ರು ಹೋಗ್ಬಿಟ್ಟಿದ್ರು. ಯಾವ್ದೋ ಹುಡ್ಗಿ ಅಂದ್ರು. ಸಿಡಿ ಮೇಲೂ ಯಾವ ಹೆಸರೂ ಇರಲಿಲ್ಲ. ಥ್ಯಾಂಕ್ ಯೂ ಹೇಳಿ ತೆಗೆದುಕೊಂಡು ಬಂದೆ. ಬಬ್ಲಿ ಬಂದ ಮೇಲೆ ಅವಳಿಗೆ ಸಿ ಡಿ ಕೊಟ್ಟು ವಾರ್ಡನ್ ಹೇಳಿದ್ದನ್ನೇ ಹೇಳಿ, ಯಾವ ಸಿ ಡಿ ಹಾಕಿ ನೋಡು ಅಂದೆ ಅದಕ್ಕವಳು ನಾನು ಲ್ಯಾಪ್ ಟಾಪ್ ತಂದು ಒಂದು ವಾರನೂ ಆಗಿಲ್ಲ ನನ್ ಹತ್ರ ಲ್ಯಾಪ್ ಟಾಪ್ ಇದೆ ಅಂತ ನಿನ್ಗೆ ಲಾಲಿಗೆ ಬಿಟ್ರೆ ಯಾರಿಗೂ ಗೊತ್ತಿಲ್ಲ. ಲಾಲಿಗೆ ಏನಾದ್ರೂ ಕೊಡಕ್ಕಿದ್ರೆ ನಂಗೇ ಡೈರೆಕ್ಟಾಗಿ ಕೊಟ್ಟಿರೋಳು ಮತ್ತ್ಯಾರು ನಂಗೆ ಕೊಡ್ತಾರೆ ಇದನ್ನ ಅಂತ ತಲೆಕೆಡೆಸಿಕೊಂಡಳು. ಯಾರಾದ್ರೂ ತಂದು ಕೊಟ್ಟಿರಲಿ ಏನಿದೆ ನೋಡಣ ಹಾಕು ಅಂದೆ. ಬೇಡ ಕಣೇ ಪ್ಲೀಸ್. ಆಮೇಲ್ ನೋಡಣ ಈಗ ಬೇಡ ಅಂದಳು. ಇವಳಿಗೇನೋ ಆಗಿದೆ ಅನ್ನಿಸಿತು. ಸಂಜೆ ಬಸ್ ಹತ್ತುವಾಗ ನಡೆದ ಘಟನೆಯನ್ನು ಹೇಳಬೇಕೆನಿಸಿದರೂ, ಇದಕ್ಕೂ ದೆವ್ವದ ಕೈವಾಡವೇ ಕಾರಣ ಎಂದಾಳೆಂದೆನ್ನಿಸಿ ಏನೂ ಹೇಳದೇ ಸುಮ್ಮನಾದೆ.

 

ಅವತ್ತು ರಾತ್ರಿ ಒಂದು ಗಂಟೆಗೆ ಮತ್ತೆ ಎಚ್ಚರವಾಯಿತು, ಅಲರಾಮ್ ಇಟ್ಟಿರಲಿಲ್ಲ. ಎದ್ದು ಕೂತೆ ಮತ್ತೆ ಆ ಸದ್ದು ಥೇಟ್ ಅದೇ ರೀತಿ. ಲಾಲಿಗೂ ರಾತ್ರಿಯೆಲ್ಲಾ ಫೋನಲ್ಲಿ ಮಾತಾಡುತ್ತಾ ನರಳುವ ಬುದ್ದಿ ಅಂಟಿಕೊಂಡಿತಾ ಎಂದು ಅನುಮಾನವಾಗಿ ಲೈಟ್ ಆನ್ ಮಾಡಿದೆ, ಸದ್ದು ನಿಂತಿತು. ನೋಡಿದರೆ ಲಾಲಿ ಹೊದ್ದು ಮಲಗಿದ್ದಳು. ಬೆಡ್ಶೀಟ್ ಒಳಗೆ ನುಸುಳಿಕೊಂಡೇ ಮಾತಾಡುತ್ತಿರಬಹುದಾ ಎಂದು ಮತ್ತೊಂದು ಅನುಮಾನವಾಯಿತು. ಲಾಲಿ ನಿನ್ ಮೊಬೈಲ್ ಕೊಡು ಅಂದೆ. ಅದಕ್ಕೆ ಲಾಲಿ ಏನೇ ನಿಂದು ಹಿಂಸೆ ಈ ರಾತ್ರಿ ಹೊತ್ನಲ್ಲಿ ಮೊಬೈಲ್ ಅಲ್ಲೇ ಟೇಬಲ್ ಮೇಲಿದೆ ನೋಡು ಚಾರ್ಜ್ ಗೆ ಹಾಕಿದೀನಿ ಅಂದಳು. ನನಗೆ ನಿದ್ದೆ ಬರಲಿಲ್ಲ.

 

+++

 

ಮಾರನೇ ದಿನ ಮತ್ತೆ ಬಸ್ ಹತ್ತುವಾಗ ಅದೇ ಅನುಭವವಾಯಿತು. ‘ದಿಸ್ ಈಸ್ ಟೂ ಮಚ್’ ನನಗೇನಾಗಿದೆ ಸೈಕಾಲಜಿಕಲ್ ಡಿಸಾರ್ಡರ್ ಏನಾದರೂ ಶುರುವಾಗಿದೆಯೇನೋ ಅನುಮಾನವಾಯಿತು. ಖಂಡಿತ ಅದೇ ಇಲ್ಲಾಂದ್ರೆ ಹಿಂಗೆಲ್ಲಾ ಆಗೋಕ್ಕೆ ಸಾಧ್ಯನೇ ಇಲ್ಲ. ಅವತ್ತು ಸೈಕಾಲಜಿ ಲೆಕ್ಚರರ್ ಹೇಳುತ್ತಿದ್ದು ಜ್ನಾಪಿಸಿಕೊಂಡೆ. ವಿಸ್ಯುಯಲ್ ಹಾಲೋಸಿನೇಷನ್, ಆಡಿಟರಿ ಹಾಲೊಸಿನೇಷನ್, ಗಸ್ಟೇಟರೀ ಹಾಲೋಸಿನೇಷನ್… ಥೂ ನನಗೇ ಎಲ್ಲಾ ಕಷ್ಟಾ ಅಂತ ದುಃಖ ಬೇರೆ ಆಗುತ್ತಿತ್ತು… ಇದನ್ನೆಲ್ಲಾ ಹೇಳಿಕೊಳ್ಳೋಣವೆಂದೇ ಬಬ್ಲಿ ಬಳಿ ಕೂತಿದ್ದೆ. ಹೇಳೋದನ್ನು ಕೇಳಿ ನಕ್ಕುಬಿಟ್ಟರೆ ಅನುಮಾನವಾಯಿತು. ನಕ್ಕರೆ ನಗಲಿ ಎಂದುಕೊಂಡು ಹೇಳೂಬಿಟ್ಟೆ. ಬಾ ಎಂದು ರೂಮಿಗೆಳೆದುಕೊಂಡು ಹೋದಳು ಬಬ್ಲಿ. ಏನೆಂದು ಕೇಳಿದರೆ ಮಾತೇ ಆಡುತ್ತಿಲ್ಲ. ರೂಮ್ ಬಾಗಿಲ ಬೋಲ್ಟ್ ಜಡಿದು ಲ್ಯಾಪ್ ಟಾಪ್ ಆನ್ ಮಾಡಿದಳು. ಇದು ನೆನ್ನೆ ನೀನು ಕೊಟ್ಯಲ್ಲ, ನಂಗ್ಯಾರೋ ಕೊಟ್ಟುಹೋದರು ಅಂತ ಆ ಸಿಡಿ ಎನ್ನುತ್ತಾ ಅದನ್ನು ಹಾಕಿ ಪ್ಲೇ ಮಾಡಿದಳು. ಅಲ್ಲೂ ಅದೇ ಸದ್ದು ಅದೇ ನರಳುವ ಸದ್ದು. ನನ್ಗೆ ಚಿಟ್ಟು ಹಿಡಿಯುವುದೊಂದು ಬಾಕಿ.

 

ಅಷ್ಟರೊಳಗೆ ಬಾಗಿಲು ಬಡಿದರು. ಲ್ಯಾಪ್ ಟಾಪ್ ಆಫ್ ಮಾಡಿ ರೂಮ್ ಬಾಗಿಲು ತೆರೆದರೆ ಲಾಲಿ ‘ಗೊತ್ತಾಯ್ತೇನ್ರೇ ವಿಶ್ಯಾ.. ಆ ಮಲೆಯಾಳಿ ಹುಡುಗೀರಿದ್ರಲ್ಲಾ ಯಾವಾಗ್ಲೂ ಜೊತೆಗೇ ಓಡಾಡ್ಕೊಂಡಿದ್ರಲ್ಲಾ ನರ್ಸಿಂಗ್ ಕಾಲೇಜೋರು ಅವ್ರಿಬ್ಬರ ಡೆಡ್ ಬಾಡೀಸ್ ಫಾರ್ಮರ್ ಫುಡ್ ಬಾವೀಲಿ ಸಿಕ್ಕಿದ್ಯಂತೇ ಪೋಲೀಸೆಲ್ಲಾ ಬಂದಿದಾರಂತೆ ನೋಡ್ಕೊಂಡ್ ಬರಣಾ ಬನ್ರೇ’ ಎಂದಳು ಏದುಸಿರಿಡುತ್ತಾ.. ನಂಗೆ ಆಶ್ಚರ್ಯವಾಯಿತು. ಬಾರೆ ಬಬ್ಲಿ ಹೋಗಣ ಅಂದ್ರೆ ಇಲ್ಲ ಬೇಡ ನಾ ಬರಲ್ಲ ನೀನೂ ಹೋಗ್ಬೇಡ. ಲಾಲಿ ನೀನು ಹೋಗು ನಾವು ಬರಲ್ಲ ಅಂದ್ಲು. ಎಲ್ಲದಕ್ಕೂ ಬೇಡ ಬೇಡ ಅಂತೀಯಲ್ಲ ಏನಾಗಿದೆ ನಿಂಗೆ ಅಂದೆ. ಅವಳ ಕಣ್ಣಲ್ಲಿ ಜಲಪಾತ.

 

ನಯ್ನೀ ಎರೆಡು ದಿನದ ಹಿಂದೆ ಥರ್ಡ್ ಫ್ಲೋರ್ ಬಾತ್ ರೂಮಿನಿಂದ ಕಿರುಚಿಕೊಂಡು ಬಂದ್ನಲ್ಲ ಆವಾಗ ನಾನು ನೋಡಿದ್ದು ಜಿರಲೆನಲ್ಲ ಅಲ್ಲ್ಯಾರೂ ಫೋನ್ನಲ್ಲೂ ಮಾತಾಡುತ್ತಿರಲಿಲ್ಲ. ಈಗ ಲಾಲಿ ಹೇಳಿದ್ಲಲ್ಲ ಆ ಹುಡ್ಗೀರು ಬಾತ್ ರೂಮ್ನಲ್ಲಿ ಈ ಲೋಕದ ಪ್ರಗ್ನೇನೇ ಇಲ್ಲದೋರ ಥರ ಒಬ್ಬರ ಬೆತ್ತಲೆ ದೇಹನ ಇನ್ನೊಬ್ಬರು ತಬ್ಬಿಕೊಂಡು ಮಲ್ಗಿದ್ರು, ನಂಗೆ ಅಸಹ್ಯ ಆಗಿ ಕಿರುಚಿಕೊಂಡೆ. ನಾ ನೋಡಿದೆ ಅಂತಾನೇ ಅವ್ರು ಆತ್ಮಹತ್ಯೆ ಮಾಡ್ಕೊಂದಿರ್ಬೇಕು ಬಿಕ್ಕಳಿಸಿದಳು. ನನಗೆ ಆಘಾತ! ಹೇಗೆ ಪ್ರತಿಕ್ರಯಿಸಬೇಕೆಂದೇ ತಿಳಿಯಲಿಲ್ಲ.. ಇಬ್ಬರೂ ಆ ವಿಶಯವನ್ನು ಯಾರಿಗೂ ಹೇಳಬಾರದೆಂದು ನಿರ್ಧರಿಸಿದೆವು.

 

ಮಾರನೇ ದಿನ ಕಾಲೇಜಿಗೆ ಹೊರಟೆ ಹೊರಡುವ ಮೊದಲು ಇಂಟರ್ನಲ್ಸ್ ಮಾಕ್ಸಿಗೆ ಸೈನ್ ಹಾಕಿಸಿಕೊಳ್ಳೋಣವೆಂದು ವಾರ್ಡನ್ ರೂಮಿಗೆ ಹೋದೆ. ವಾರ್ಡನ್ ಜೊತೆ ಪೋಲೀಸ್ ಮಾತಾಡುತ್ತಾ ಕೂತಿದ್ದರು ಅವರು ಹೇಳೋದು ಕೇಳಿಸಿತು ‘ಪೊಸ್ಟ್ ಮಾರ್ಟಮ್ ರಿಪೋರ್ತ್ಸ್ ಬಂದಿದೆ ಈ ಹುಡುಗೀರು ಸತ್ತು ಆಗ್ಲೇ ಐದು ದಿನ ಆಗಿದೆ…. ಮುಂದಿನದೇನು ಕೇಳಿಸಲಿಲ್ಲ. ಬಬ್ಲಿ ಎರಡು ದಿನದ ಹಿಂದಷ್ಟೇ ಅವರನ್ನು ನೋಡಿದೆ ಎಂದಳಲ್ಲ ಅವಳು ನೋಡಿದ್ದಾದರೂ ಏನು! ಅವಳು ಹೇಳಿದ್ದು ನಿಜವಾ ಏನೂ ಅರ್ಥ ಆಗಲಿಲ್ಲ ನನಗೆ. ನಾನು ಕುಸಿದು ಕೂತೆ!

Previous Older Entries