ಕರಿಸಿರಿಯಾನ

KARISIYAANA0001

ಸಂಚಯ ‘ಹಿಂದ್ ಸ್ವರಾಜ್’

‘ಸಂಚಯ’ ಸಾಹಿತ್ಯ ಪತ್ರಿಕೆ ಗಾಂಧಿಯವರ ‘ಹಿಂದ್ ಸ್ವರಾಜ್’ ಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಶೇಷ ಸಂಚಿಕೆ ರೂಪಿಸಿದೆ. ಜಿ ಬಿ ಹರೀಶ್ ಈ ಸಂಚಿಕೆಯ ಅತಿಥಿ ಸಂಪಾದಕರು.

ಈ ಸಂಚಿಕೆಯು ರೂಪುಗೊಂಡ ನೆನಪನ್ನು ಹಂಚಿಕೊಳ್ಳಲು ನಡೆಸಿದ ಕಾರ್ಯಕ್ರಮದ ನೋಟ ಇಲ್ಲಿದೆ

IMG_4571

IMG_4604 IMG_4615

IMG_4583

IMG_4619 IMG_4582


ನಮ್ಮೂರಲ್ಲೊಂದು ‘ಟಾಕೀಸಲ್ಲ’, ಬರೇ ‘ಗುಲಾಬಿ’..!

ಚಿತ್ರಾ ಕರ್ಕೇರಾ

ಶರಧಿ

TelevisionRoc

ನಮ್ಮೂರ ಶೇಷಮ್ಮಕ್ಕ ಅಂದ್ರೆ ಅಕ್ಕರೆ, ಪ್ರೀತಿ. ನಮ್ಮನೆಯಿಂದ ಮೂರ್ನಾಲ್ಕು ಮೈಲಿ ನಡೆದರೆ ಶೇಷಮ್ಮಕ್ಕನ ಮನೆ. ೫೫ ದಾಟಿರುವ ಆಕೆ ಅತ್ತ ಅಜ್ಜಿಯೂ ಅಲ್ಲ, ಇತ್ತ ಆಂಟಿಯೂ ಅಲ್ಲ. ಕೂದಲೂ ನರೆತರೂ , ಅರ್ಧಡಜನ್ ಗಿಂತ ಹೆಚ್ಚು ಮಕ್ಕಳಿದ್ದರೂ, ಮೊಮ್ಮಕ್ಕಳದ್ರೂ ಅವಳದು ಇನ್ನೂ ಹರೆಯದ ಉತ್ಸಾಹ. ಶೇಷಮ್ಮಕ್ಕ ಅಂದ್ರೆ ಊರಿಗೆಲ್ಲಾ ಪ್ರೀತಿ. ತಮ್ಮ ಮಕ್ಕಳಂತೆ ಊರವರನ್ನೂ ತುಂಬಾನೇ ಪ್ರೀತಿಸುವ ವಿಶಾಲ ಹೃದಯ ಅವಳದ್ದು. ಅವಳಿಗೆ ಏಳು ಜನ ಮಕ್ಕಳಲ್ಲಿ ನಾಲ್ಕು ಹೆಣ್ಣು ಮತ್ತು ಮೂರು ಗಂಡು. ಮೂವರು ಹೆಣ್ಣುಮಕ್ಕಳನ್ನು ಮದುವೆ ಮಾಡಿ ಕೊಟ್ಟಾಗಿದೆ, ಕೊನೆಯವಳು ಬಾಕಿ..ಗಂಡು ಮಕ್ಕಳೆಲ್ಲಾ ಹೊರಗಡೆ ಒಳ್ಳೇ ಕೆಲ್ಸದಲ್ಲಿದ್ದಾರೆ.

ನಾನು ಊರಿಗೆ ಹೋದರೆ ಶೇಷಮ್ಮಕ್ಕನ ಮನೆಗೆ ಹೋಗೋದನ್ನು ಮರೆಯಲ್ಲ. ನಾನು ಬರ್ತೀನಿ ಅಂದ್ರೆ ಸಾಕು ರೊಟ್ಟಿ ಮತ್ತು ಮೀನು ಸಾರು ಮಾಡಿ ಕಾಯೋಳು ಶೇಷಮ್ಮಕ್ಕ. ಬಟ್ಟಲು ತುಂಬಾ ಪ್ರೀತಿನ ನೀಡೋಳು. ಆಕೆಯ ಅಮ್ಮನ ಮಮತೆಯನ್ನು ಮನತುಂಬಾ ತುಂಬಿಸಿಕೊಳ್ಳೋ ಹಂಬಲ ನನ್ನದು. ಕಳೆದ ಸಲ ಊರಿಗೆ ಹೋದಾಗ ಅವಳ ಮನೆಗೆ ಹೋಗಲು ಮರೆಯಲಿಲ್ಲ. ಒಂದು ಮಟಮಟ ಮಧ್ಯಾಃಹ್ನ ಶೇಷಮ್ಮಕ್ಕನ ಮನೆಗೆ ಹೋದೆ. ನಾನು ಹೋಗಿದ್ದೇ ತಡ..ದೊಡ್ಡ ಚೊಂಬಿನಲ್ಲಿ ನೀರು ತಕೊಂಡು ಬಂದು ನೆಂಟರಿಗೆ ಮನೆ ಒಳಗೆ ಹೋಗುವಾಗ ನೀರು ಕೊಡ್ತಾರಲ್ಲಾ..ಹಾಗೇ ನೀರು ಕೊಟ್ಟು ನನ್ನ ಬರಮಾಡಿಕೊಂಡಳು. ಮನೆ ನೋಡಿದರೆ ಎಂದಿನಂತೆ ಇರಲಿಲ್ಲ. ಎದುರಿನ ಚಾವಡಿಯಲ್ಲಿ ದೊಡ್ಡ ಸೋನಿ ಟಿವಿ ಮಾತಾಡುತ್ತಾ ಕುಳಿತಿತ್ತು. ಪದೇ ಪದೇ ಬೊಬ್ಬಿಡುವ ಫೋನ್ ಕೂಡ ಬಂದಿದೆ. ಚಿಕ್ಕಮಗಳು ಕಾಣಿಸಲಿಲ್ಲ..ಅವಳೂ ಯಾವುದೇ ಕೆಲಸಕ್ಕೆ ಹೊರಗೆ ಹೋಗುತ್ತಿದ್ದಾಳೆ. ನಾನು ಹೋದಾಗ ಶೇಷಮ್ಮಕ್ಕ ಒಬ್ಬಳೇ ಕುಳಿತು ಟಿವಿ ನೋಡುತ್ತಾ, ತನ್ನಷ್ಟಕ್ಕೆ ನಗುತ್ತಾ, ಖುಷಿಪಡುತ್ತಾ, ಆರಾಮವಾಗಿ ಕಾಲುಚಾಚಿ ಈಜಿ ಚಯರ್ ನಲ್ಲಿ ಕುಳಿತಿದ್ದಳು…ಥೇಟ್ ಒಂದೇ ಸಲ ನಂಗೆ ಕಾಸರವಳ್ಳಿಯವರ ‘ಗುಲಾಬಿ ಟಾಕೀಸಿ’ನ ಗುಲಾಬಿಯ ಹಾಗೇ. ..

ಮೀನು ಸಾರು ಮತ್ತು ರೊಟ್ಟಿನೂ ರೆಡಿಯಾಗಿತ್ತು. ಆವಾಗ ಅವಳು ನಾನು ಹೇಗಿದ್ದೇನೆ? ಬೆಂಗಳೂರು ಹೇಗಿದೆ? ಕೆಲಸ ಹೇಗಾಗುತ್ತಿದೆ? ಎನ್ನುವ ಮಾಮೂಲಿ ಪ್ರಶ್ನೆಗಳ ಸುರಿಮಳೆ ಗೈಯಲಿಲ್ಲ. ಬೆಂಗಳೂರಿನಲ್ಲಿ ಅಂಬರೀಷ್ ಕಾಣಕ್ಕೆ ಸಿಗ್ತಾನಾ? ವಿಷ್ಣುವರ್ಧನ್ ಸಿಗ್ತಾನಾ? ಶ್ರುತಿ,ಶಶಿಕುಮಾರ್ ಸಿಗ್ತಾರಾ? ಅಂತ..ಯಪ್ಪಾ..ನಾನು ಟೋಟಲೀ ಕನ್ ಫ್ಯೂಸ್! ನನ್ನ ಉತ್ತರಕ್ಕೂ ಕಾಯದೆ, ಅಂಬರೀಷ್ , ವಿಷ್ಣುವರ್ಧನ್ ಸಿನಿಮಾ ಭಾಳ ಇಷ್ಟ..ಶ್ರುತಿಯ ಅಳುಮುಂಜಿ ಸಿನಿಮಾ ನೋಡಿದಾಗ..ಕರುಳು ಕಿತ್ತು ಬರುತಂತೆ…ಅವಳು ಸೀರೆ, ಲಂಗಧಾವಣಿಯಲ್ಲೇ ಇರ್ತಾಳಂತೆ..ಅರ್ಧಂಬರ್ಧ ಡ್ರೆಸ್ ಹಾಕೋಲ್ಲಂತೆ..ಹಾಗಾಗಿ ಭಾಳ ಇಷ್ಟ ನೋಡೋಕೆ” ಅಂತ ಒಂದೇ ಉಸಿರಿಗೆ ಹೇಳಿಬಿಟ್ಟಾಗ ಮೂಗಿನ ಮೇಲೆ ಬಂದು ನಿಂತಿದ್ದ ನನ್ನ ಬಂಪರ್ ಕೋಪ ಕೂಡ ಕರಗಿ ತಣ್ಣಗಾಗಿ ಹೋಗಿತ್ತು. ಆಕೆಯ ಮುಗ್ಧ, ಪ್ರಾಮಾಣಿಕ ಮಾತು..ಅದನ್ನು ಹೇಳೋ ಸ್ಟೈಲ್ ಹಾಗಿತ್ತು. ಅವಳಿಗೆ ಕುತೂಹಲ ಅಂದ್ರೆ..ಈ ನಟ-ನಟಿಮಣಿಯರೆಲ್ಲಾ ಬೆಂಗಳೂರಲ್ಲೇ ಇರ್ತಾರೆ..ಅಂತ ಮಕ್ಕಳು ಹೇಳಿರ್ತಾರೆ..ಹಾಗೇ ನಾನು ಬೆಂಗಳೂರಿನಲ್ಲಿ ಇರೋದ್ರರಿಂದ ಊರಲ್ಲಿದ್ದ ಹಾಗೇ ಅಕ್ಕ-ಪಕ್ಕನೇ ಇರ್ತಾರೆ..ಅಂಥ ಅವಳ ಮುಗ್ಧ ನಂಬಿಕೆ!.ಆಮೇಲೆ ಅವಳಿಗೆಲ್ಲಾ ವಿವರಿಸಿ ಹೇಳೋವಷ್ಟರಲ್ಲಿ..ಬಟ್ಟಲು ತುಂಬಾ ಹಾಕಿಕೊಟ್ಟ ಮೀನುಸಾರು, ರೊಟ್ಟಿ ಖಾಲಿಯಾಗಿ..ತಲೆನೂ ಖಾಲಿ ಖಾಲಿ ಅನಿಸಿ ಇನ್ನೊಂದು ಬಟ್ಟಲು ರೊಟ್ಟಿ ತಿನ್ನುವ ಮಟ್ಟಕ್ಕೆ ಬಂದು ತಲುಪಿದ್ದೆ ನಾನು. ಪಾಪ! ಶೇಷಮ್ಮಕ್ಕ ಒಬ್ಬಳೇ ಮನೇಲಿರ್ತಾಳಂತ ಮಕ್ಕಳು ಟಿವಿ ತಂದಿದ್ದರು..ಬೋರ್ ನಿವಾರಿಸೋದಕ್ಕೆ..ಇಳಿವಯಸ್ಸಿನತ್ತ ಸಾಗೋ ಒಂಟಿ ಜೀವಕ್ಕೆ ಕಂಪನಿ ಕೊಡಾಕೆ!!!

ಇಷ್ಟಕ್ಕೂ ನಂಗೆ ಈ ಶೇಷಮ್ಮಕ್ಕ ನೆನಪಾಗಿದ್ದು ಮೊನ್ನೆ ಗುರುವಾರ ‘ಬೆಂಗಳೂರು ಅಂತರ್ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಪ್ರದರ್ಶನಗೊಂಡ ಕಾಸರವಳ್ಳಿಯವರ ‘ಗುಲಾಬಿ ಟಾಕೀಸ್’ ಎಂಬ ಒಳ್ಳೆ ಸಿನಿಮಾನ ನೋಡಿದಾಗಲೇ! ನಗರ ಎಷ್ಟೇ ಬದಲಾಗುತ್ತಾ ಹೋದರೂ, ಹಳ್ಳಿಯಲ್ಲಿರುವ ಮುಗ್ಧತೆ, ಪ್ರಾಮಾಣಿಕತೆ ಎಂದಿಗೂ ಬದಲಾಗಿಲ್ಲ..ಅದೇ ಕಾರಣದಿಂದ ಹಳ್ಳೀನ ಇನ್ನೂ ನಾವು ಪ್ರೀತಿಯಿಂದ ಅಪ್ಪಿಕೊಳ್ತಿವಿ ಅನಿಸುತ್ತೆ


ನನ್ನ ಬಳಿ ಕೆಲವು ಟಿಪ್ಸ್ ಗಳಿವೆ !

IMG_0391-ಸಂದೀಪ್ ಕಾಮತ್

ಕಡಲ ತೀರ

ಈಗ ಯಾವ ಚ್ಯಾನಲ್ ನೋಡಿದ್ರೂ ರಿಯಾಲಿಟಿ ಷೋಗಳು.ರಿಯಾಲಿಟಿ ಶೋ ಅಂದ ಮಾತ್ರಕ್ಕೆ ಇಲ್ಲಿ ತೋರಿಸೋದೆಲ್ಲಾ ರಿಯಲ್ ಅಂದುಕೊಂಡ್ರೆ ನಮ್ಮಂಥ ಮೂರ್ಖರು ಬೇರೊಬ್ಬರಿಲ್ಲ!

ಬಹಳಷ್ಟು ಜನರಿಗೆ ಇಂಥ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಬೇಕು ಅಂತ ಆಸೆ ,ಆದ್ರೆ ಹೇಗೆ ಅನ್ನೋದು ಗೊತ್ತಿಲ್ಲ.

ನನ್ನ ಬಳಿ ಕೆಲವು ಟಿಪ್ಸ್ ಗಳಿವೆ ! ನೋಡಿ ಉಪಯೋಗಕ್ಕೆ ಬಂದ್ರೂ ಬರಬಹುದು .ಯೋಚನೆ ಮಾಡ್ಬೇಡಿ ಕಾಸೇನೂ ಕೇಳಲ್ಲ ಇದಕ್ಕೆಲ್ಲ.

reality-tv1

ರಿಯಾಲಿಟಿ ಶೋಗಳಲ್ಲಿ ಭಾಗವಸೋದಕ್ಕೆ ಮಿನಿಮಮ್ ಯೋಗ್ಯತೆ ಅಂದ್ರೆ ನಿಮಗೊಂದಿಷ್ಟು ಟ್ಯಾಲೆಂಟ್ ಇರ್ಬೇಕು.ಟ್ಯಾಲೆಂಟ್ ಇರದಿದ್ದೂ ನಡೆಯುತ್ತೆ ಅಂದುಕೊಂಡಿದ್ರೆ ತಪ್ಪು ಕಣ್ರಿ.ಆ ಮಟ್ಟಿಗೇನೂ ಇಳಿದಿಲ್ಲ ರಿಯಾಲಿಟಿ ಶೋಗಳ ಕ್ವಾಲಿಟಿ!

ನಿಮಗೆ ಹಾಡೋದು ಅಥವಾ ಕುಣಿಯೋದು ಗೊತ್ತಿದ್ರೆ ಒಳ್ಳೇದು.ಎರಡೂ ಗೊತ್ತು ಅಂದ್ರೆ ಇನ್ನೂ ಒಳ್ಳೇದು. ಎರಡೂ ಗೊತ್ತಿಲ್ಲ ಅಂದ್ರೆ ನಿಮಗೆ ಏನು ಗೊತ್ತಿದೆ ಹೇಳಿ ಆಮೇಲೆ ನಿರ್ಧಾರ ಮಾಡೋಣ ಯಾವುದರಲ್ಲಿ ಭಾಗವಹಿಸೋದು ಅಂತ.

ನಿಮಗೆ ಚೆನ್ನಾಗಿ ಹಾಡೋದಕ್ಕೆ ಗೊತ್ತಿದ್ದು ಚೆನ್ನಾಗಿರೋ ಮನೆಯಲ್ಲಿ ನೀವೇನಾದ್ರೂ ವಾಸವಾಗಿದ್ರೆ ನಿಮ್ಮ ಬ್ಯಾಡ್ ಲಕ್ ಕಣ್ರಿ.ಯಾಕಂದ್ರೆ ಟಿ.ವಿ ನವ್ರು ಕಾರ್ಯಕ್ರಮದ ಮಧ್ಯೆ ತೋರ್ಸೋದಕ್ಕೆ ಒಂದು ಹಳೆ ಮನೆ ,ಅದರಲ್ಲಿ ಒಲೆ ಹಚ್ಚುತ್ತಿರೋ ನಿಮ್ಮ ತಾಯಿ ,ನೀವು ಪಕ್ಕದ ಹಳ್ಳಿಯಿಂದ ಕೊಡದಲ್ಲಿ ನೀರು ತುಂಬಿಸಿ ತರೋ ದೃಶ್ಯ ಇವೆಲ್ಲಾ ಬೇಕು.ಹೀಗೆ ನಿಮ್ಮ ಬಡತನವನ್ನು ತೋರಿಸ್ತಾ ಇದ್ದಾಗ ಹಿನ್ನೆಲೆಯಲ್ಲಿ ಒಂದು ಪಿಟೀಲಿನ ಕುಂಯ್ ಕುಂಯ್ ಅನ್ನೋ ಟ್ಯೂನ್ ಹಾಕಿದ್ರಂತೂ SMS ಗಳ ಮಹಾಪೂರ ಗ್ಯಾರಂಟಿ.

ಬದಲಾಗಿ ಮಲ್ಲೇಶ್ವರಂ ನ ಚೆನ್ನಾಗಿರೋ ಅಪಾರ್ಟ್ಮೆಂಟ್ ನಲ್ಲಿ ನೀವು ಸಂಗೀತ ಅಭ್ಯಾಸ ಮಾಡ್ತಾ ಇರೋದು ,ನಿಮ್ಮ ತಾಯಿ ನಿಮಗೆ ಹಾರ್ಲಿಕ್ಸ್ ತಂದು ಕೊಡೋದು ಇದೆಲ್ಲಾ ತೋರ್ಸಿದ್ರೆ ನಿಮಗ್ಯಾರ್ರಿ SMS ಕಳಿಸ್ತಾರೆ?

ಇನ್ನು ನೀವು ಚೆನ್ನಾಗಿ ಡ್ಯಾನ್ಸ್ ಮಾಡೋರಾದ್ರೆ ಒಳ್ಳೇ ವಿಚಾರ.ಆದ್ರೆ ನೀವು ಮಾಮೂಲಿ ಸ್ಟೆಪ್ಸ್ ಜೊತೆ ಒಂದು ಎಕ್ಸ್ಟ್ರಾ ಸ್ಟೆಪ್ ಕಲೀಬೇಕಾಗುತ್ತೆ.ಅದೇನಂದ್ರೆ ಮೇಲಿಂದ ಹಾರಿ ಲ್ಯಾಂಡ್ ಆಗ್ಬೇಕಾದ್ರೆ ಎಡವಟ್ಟಾಗಿ ಬಿದ್ದು ಕಾಲು ತಿರುಚಿಕೊಳ್ಳೋದು!

ನೋಡಿ ಸರಿಯಾಗಿ ಅಭ್ಯಾಸ ಮಾಡ್ಬೇಕು ಈ ಸ್ಟೆಪ್ ನ.ಅಪ್ಪಿ ತಪ್ಪಿ ನಿಜವಾಗ್ಲೂ ಕಾಲು ತಿರುಚಿಕೊಂಡ್ರೆ ನನ್ನನ್ನ ಬಯ್ಬೇಡಿ ಮತ್ತೆ.ನೀವು ಕಾಲು ತಿರುಚಿ ಬಿದ್ದಾಗ ಬೇಜಾರಲ್ಲಿ ಸುಮ್ನೆ ಬಿದ್ದುಕೊಳ್ಳಿ.ಆ ದೃಶ್ಯವನ್ನು ಕಪ್ಪು ಬಿಳುಪಿನಲ್ಲಿ ಒಂದು ಸಲ ,ಸಿಡಿಲು ಬಡಿದ ಹಾಗೆ ಲೈಟ್ ಎಫೆಕ್ಟ್ ಹಾಕಿ ಒಂದು ಸಲ ತೋರ್ಸೋ ಕೆಲಸ ಟಿ.ವಿ ಯವರಿಗೆ ಬಿಟ್ಟು ಬಿಡಿ.ನೀವೇನೂ ತಲೆ ಕೆಡಿಸಿಕೊಳ್ಳಬೇಕಾಗಿಲ್ಲ ಈ ಬಗ್ಗೆ.

ಸತ್ಯವಂತರಿಗಿದು ಕಾಲವಲ್ಲ ಅಂತ ದಾಸರು ತಪ್ಪಿ ಹೇಳಿರೋದು.ಅವರು ’ಸಚ್ ಕಾ ಸಾಮ್ನಾ’ ನೋಡಿಲ್ವಲ್ಲ ಪಾಪ.ಸತ್ಯವಂತರಿಗಿದು ದುಡ್ಡು ಮಾಡೋ ಕಾಲ.ಆದ್ರೆ ಈ ಶೋ ಗೆ ಎಂಟ್ರಿ ಸಿಗೋದು ಸ್ವಲ್ಪ ಕಷ್ಟ.ನಿಮಗೆ ಒಂದೆರಡು ಅನೈತಿಕ ಸಂಬಂಧಗಳಿದ್ರೆ ಆರಾಮಾಗಿ ಭಾಗವಹಿಸಬಹುದು.ಎರಡಕ್ಕಿಂತ ಜಾಸ್ತಿ ಇದ್ರೆ ನಿಮ್ಮನ್ನು ಮನೆಗೆ ಬಂದು ಕರ್ಕೊಂಡು ಹೋಗ್ತಾರೆ ಬಿಡಿ ಚ್ಯಾನೆಲ್ ನವರು!ಯಾವುದಕ್ಕೂ ನೀವು ಯಾರ್ಯಾರ ಜೊತೆ ಮಲಗಿದ್ರಿ ,ಎಷ್ಟು ಜನ ವೇಶ್ಯೆಯವರ ಜೊತೆ ಮಜಾ ಉಡಾಯಿಸಿದ್ರಿ ಇದೆಲ್ಲ ಒಂದು ಪುಟ್ಟ ಡೈರಿಯಲ್ಲಿ ಬರೆದಿಟ್ಟು ಆಗಾಗ ನೆನಪು ಮಾಡಿಕೊಳ್ತಾ ಇದ್ರೆ ಜಾಸ್ತಿ ಹಣ ಬಹುಮಾನವಾಗಿ ಗೆಲ್ಲಲು ಸಹಕಾರಿಯಾಗುತ್ತೆ .

ನಿಮ್ಮದು ತೀರಾ ಸಪ್ಪೆ ಜೀವನವಾದ್ರೆ ಏನೂ ಮಾಡೋದಕ್ಕಾಗಲ್ಲ ಸಾರಿ.ನಿಮಗೆ ಅಲ್ಲಿ ಪ್ರವೇಶವಿಲ್ಲ 😦

ನಿಮಗೆ ಇಂಗ್ಲೀಶ್ ಅಥವ ಹಿಂದಿ ಬೈಗುಳ ಚೆನ್ನಾಗಿ ಗೊತ್ತಿದ್ರೆ ನೀವು ಎಂ.ಟಿ.ವಿ ರೋಡೀಸ್ ಥರದ ಶೋಗಳಿಗೆ ಪ್ರಯತ್ನಿಸಬಹುದು ನೋಡಿ.ಬರೀ ಕನ್ನಡ ಬೈಗುಳ ಗೊತ್ತಿದ್ರೆ once again sorry! ಕನ್ನಡದಲ್ಲಿ ’ಇನ್ನೂ’ ಆ ಥರದ ಶೋ ಶುರು ಆಗಿಲ್ಲ!

ಇನ್ನು ಜಾಸ್ತಿ ಜಾಸ್ತಿ SMS ಗಳನ್ನು ಬಾಚಿಕೊಳ್ಳೋದು ಅನ್ನೋದರ ರಹಸ್ಯ ಗೊತ್ತಾಗ್ಬೇಕಾ ನಿಮಗೆ ? !

ತುಂಬಾ ಸಿಂಪಲ್ ! ನೀವು ಕರ್ನಾಟಕದಲ್ಲೇ ಹುಟ್ಟಿ ಬೆಳೆದರೂ , ’ನಾನು ಹುಟ್ಟಿದ್ದು ದೆಹಲಿಯಲ್ಲಿ,ನಮ್ಮ ಅಪ್ಪ ಕರ್ನಾಟಕದವರು,ಅಮ್ಮ ತಮಿಳುನಾಡಿನವರು ಆದ್ರೆ ಈಗ ನಾವು ರಾಜಸ್ತಾನದಲ್ಲಿ ಮನೆ ಮಾಡಿಕೊಂದಿದ್ದೀವಿ ’ ಅನ್ನಿ !

ಕರ್ನಾಟಕ ,ದೆಹಲಿ,ತಮಿಳುನಾಡು,ರಾಜಸ್ತಾನದವರೆಲ್ಲರೂ ’ಇಂವ ನಮ್ಮವ ಇಂವ ನಮ್ಮವ ’ ಅಂದುಕೊಂಡು SMS ಮಾಡೇ ಮಾಡ್ತಾರೆ!

ಬಳ್ಳಾರಿಯಲ್ಲಿ ನಾಡಹಬ್ಬ

kannada nada habba (1)kannada nada habba mediam (1)

ನವಕರ್ನಾಟಕ ಪುಸ್ತಕಗಳು

navakarnataka invitation