‘ಮೀಡಿಯಾ ಮಿರ್ಚಿ’ಯಲ್ಲಿ ದೂರದರ್ಶನ

gn-septe2

ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಕಾದಂಬರೀನಲ್ಲೂ ಹೀಗೆ. ಪಾದ್ರಿಯೊಬ್ಬ ಸೈಕಲ್ ತಂದು ಅದನ್ನ ತುಳಿಯೋದು ಪ್ರಾಕ್ಟಿಸ್ ಮಾಡ್ತಾ ಇರ್ತಾನೆ. ಯಾಕೋ ಒಂದ್ಸಲ ಹಿಂದೆ ತಿರುಗಿ ನೋಡಿದರೆ ಇಡೀ ಊರಿಗೆ ಊರೇ ಇವನ ‘ಬೀಸೇ ಕಲ್ಲು’ ನೋಡೋದಿಕ್ಕೆ ಮುತ್ತಿಕೊಂಡಿದೆ. ಎಲ್ಲಾ ಕಣ್ಣು ಬಾಯಿ ಬಿಟ್ಕೊಂಡು ‘ಬೀಸೇ ಕಲ್ಲು’ ನೋಡ್ತಿದ್ದಾರೆ. ನಾವೂ ಅಷ್ಟೇ. ಬಿಟ್ಟ ಕಣ್ಣು ಬಿಟ್ಟ ಹಾಗೆ ಈ ಟೆಲಿವಿಷನ್ ಅನ್ನೋ ಜಾದೂಗಾರನ್ನ ನೋಡ್ತಾ ಇದ್ವಿ. ‘ಮಲ್ಲಮ್ಮನ ಪವಾಡ’ ಅಂತ ಒಂದು ಸಿನೆಮಾ ಬಂದಿತ್ತು. ಅದೇ ನಾನು ನೋಡಿದ ಫಸ್ಟ್ ಸಿನೆಮಾ. ಆದ್ರೆ ಈಗ ಅದಕ್ಕಿಂತ ಡಬ್ಬಲ್ ಆಶ್ಚರ್ಯ ಆಗಿತ್ತು. ಯಾಕಂದ್ರೆ ಈಗ ನಮಗೆ ಗೊತ್ತಿರೋರೆಲ್ಲಾ ಸ್ಕ್ರೀನ್ ಮೇಲೆ ಇದಾರೆ. ಜಿ ಆರ್ ವಿಶ್ವನಾಥ್ ಅಂದ್ರೆ ರಾಜಾಜಿನಗರದವರಿಗೆ ನಮ್ಮನೆ ಹುಡುಗ ಅನ್ನೋಷ್ಟು ಸಲೀಸು. ಯಾಕಂದ್ರೆ ಅವ್ರ ಮನೆನೂ ರಾಜಾಜಿನಗರದಲ್ಲಿತ್ತು. ಈಗ ಇದೇ ಜಿ ಆರ್ ವಿಶ್ವನಾಥ್, ನಮ್ಮ ಮುಂದೆ ಓಡಾಡೋ ವಿಶ್ವನಾಥ್ ಸ್ಕ್ರೀನ್ ಮೇಲೆ ಬ್ಯಾಟ್ ಬೀಸ್ಕೊಂಡು..!. ‘ಶಿವ ಶಿವಾ ಇದೆನಾಶ್ಚರ್ಯವೋ, ಈ ಧರೆಯೊಳ್…’ ಅನ್ನೋ ಕಂಪನಿ ನಾಟಕದ ಹಾಡು ಎದ್ದೆದ್ದು ಬರ್ತಿತ್ತು..

ತೆರೆ ಮೇಲೆ ಬರೋದೆಲ್ಲಾ ಸಿನಿಮಾನೇ, ತೆರೆ ಮೇಲೆ ಬರೋರೆಲ್ಲಾ ರಾಜ್ ಕುಮಾರೇ ಅನ್ಕೊಂಡಿದ್ದ ನಾವು ಈಗ ಕಣ್ಣು ಮಿಟುಕಿಸದೆ ಕೊತಿದ್ವಿ. ಅಷ್ಟೇ ಆಶ್ಚರ್ಯ ಮತ್ತೆ ಆಗಿದ್ದು ಅದೇ ದೂರದರ್ಶನದಿಂದ. ಇಂದಿರಾ ಗಾಂಧಿ ಏಷ್ಯನ್ ಗೇಮ್ಸ್ ತರ್ಸಿ ಡೆಲ್ಲೀನಲ್ಲಿ ಕೂರ್ಸಿದ್ರಲ್ಲಾ.. ದೇಶಕ್ಕೆ ದೇಶಾನೇ ಬದಲಾಗಿ ಹೋಯ್ತು. ಏಷ್ಯನ್ ಗೇಮ್ಸ್ ನಲ್ಲಿ ಯಾರು ಗೆದ್ರು, ಯಾರ್ ಸೋತ್ರು ಅಂತ ಲೆಕ್ಕ ಇಟ್ಟೋರು ಯಾರು. ಆದ್ರೆ ಕಪ್ಪು ಬಿಳುಪು ಇದ್ದ ಟಿ ವಿ ಸಡನ್ನಾಗಿ ಕಲರ್ ಹಾಕ್ಕೊಂಡು ನಿಂತ್ಬಿಡ್ತು ..ಆಗ ‘ಪ್ಯಾರ್ ಕಿಯಾ ತೋ ಡರ್ ನಾ ಕ್ಯಾ ಹೈ’ ಅಂತಾ ಕುಣಿಯೋದಿಕ್ಕೆ ಶುರು ಮಾಡಿದಾಗ ಅನಾರ್ಕಲಿ ಸಡನ್ನಾಗಿ ಒಂದು ರೀಲು ಕಲರ್ ಆಗೋಗ್ತಾಳಲ್ಲಾ ಹಾಗೆ ಆಗಿ ಹೋಗಿತ್ತು.

ಪೂರ್ಣ ಓದಿಗೆ: ಮೀಡಿಯಾ ಮೈಂಡ್

ತೆನಾಲಿರಾಮ ತನ್ನ ಬೆಕ್ಕಿಗೆ ಮಾಡಿದಂತೆ..

103_0355

ಹಿಂಸೆಯೆಂಬ ಕಂಡಿಶನ್ಡ್ ರಿಫ್ಲೆಕ್ಸೂ, ತೆನಾಲಿರಾಮನ ಬೆಕ್ಕೂ

-ಗುರುಪ್ರಸಾದ್ ಕಾಗಿನೆಲೆ

ಸಮಶೀತೋಷ್ಣ

ಈ ಜಗತ್ತಿನಲ್ಲಿ ಕೆಟ್ಟದು ಅನ್ನುವುದಿಲ್ಲದಿದ್ದರೆ ಒಳ್ಳೆಯದಕ್ಕೆ ಬೆಲೆ ಬರುತ್ತಿತ್ತಾ? ಒಳ್ಳೆಯದು, ಕೆಟ್ಟದ್ದು ಅನ್ನುವ ಬೈನರಿ ನಿಯಮ ಈ ಪ್ರಪಂಚದಲ್ಲಿ ಇರಲೇಬೇಕು. ಆಗಲೇ ಒಳ್ಳೆಯದು ಒಳ್ಳೆಯದಾಗುವುದು. ಒಂದು ಕ್ರಿಯೆ ‘ಕೆಟ್ಟದ್ದು’ ಅನ್ನುವುದು ಗೊತ್ತಿದ್ದರೂ ಕೆಲವರು ಅದನ್ನು ತಮ್ಮ ಪ್ರವೃತ್ತಿಯಾಗಿ ಆಯ್ದುಕೊಳ್ಳುತ್ತಾರಲ್ಲ. ಅದನ್ನು ನಾವು ಒಪ್ಪಿಕೊಳ್ಳುವುದು ಹೇಗೆ?

ಒಳ್ಳೆಯದು ಕೆಟ್ಟದ್ದು ಎನ್ನುವ ನೈತಿಕ ಧ್ರುವಗಳನ್ನು ನಮಗೆ ಹೊರೆಸಬೇಕಾಗಿರುವುದು ಯಾರು? ನಮ್ಮ ಸಮಾಜವೇ? ನಮ್ಮ ಒಳಗಿನ ಧ್ವನಿಯೇ? ಅಥವಾ ಇಂತದ್ದು ಮಾಡಿದರೆ ನಿನಗೆ ಶಿಕ್ಷೆಯಾಗುತ್ತದೆ ಆದ್ದರಿಂದ ಇದನ್ನು ನೀನುಮಾಡಬಾರದು ಎಂದು ಹೇಳುವ ಸರಕಾರವೇ? ಒಂದು ಕ್ರಿಯೆಯ ಹೊಣೆಗಾರಿಕೆಯಿಂದ, ಅದರ ಪರಿಣಾಮದಿಂದ ಮಾತ್ರ ಅದನ್ನು ಒಳ್ಳೆಯದು, ಕೆಟ್ಟದ್ದು ಎಂದು ಕಪ್ಪುಬಿಳಿಯಾಗಿ ವಿಂಗಡಿಸಬಹುದೇ?

ಸರಕಾರ ಅಥವಾ ಇಂಥ ಯಾವುದೇ ಒಂದು ನೈತಿಕ ಪೋಲಿಸ್ ಆಗಿ ಕಾಯುವ ಸಂಸ್ಥೆ ಒಬ್ಬ ಮನುಷ್ಯ ಮಾಡಿದ ಅಪರಾಧಕ್ಕೆ ಶಿಕ್ಷೆ ಕೊಡಬಹುದೇ ಹೊರತು, ಆತ ಈ ಅಪರಾಧವನ್ನು ಮಾಡದೆಯೇ ಇರುವಂತೆ ತಡೆಯುವುದು ಸಾಧ್ಯವೇ? ಹಾಗೆ ಮಾಡುವುದು ಸಾಧ್ಯವಾದ ಪಕ್ಷದಲ್ಲಿ ಅಂತ ಜಗತ್ತಿನಲ್ಲಿ ಅಪರಾಧವೇ ಇರುವುದಿಲ್ಲವೇ? ಬರೇ ‘ಒಳ್ಳೆ’ಯವರಿಂದಲೇ ತುಂಬಿಹೋಗಿರುತ್ತದೆಯೇ? ಅಥವಾ ಅಪರಾಧ, ಹಿಂಸೆ ಕೂಡ ಒಂದು ಆಯ್ಕೆಯೇ?

ಪಾವ್ಲೋವ್‌ನ ಪ್ರಯೋಗ ಎಲ್ಲರಿಗೂ ಗೊತ್ತೇ ಇದೆ. ಈತ ನಾಯಿಯ ಮಾಂಸತಿನ್ನುವ ಕ್ರಿಯೆಗೆ ಗಂಟಾನಾದವನ್ನು ಜೋಡಿಸಿ ಮಾಂಸವಿಲ್ಲದೇ ಇದ್ದಾಗೂ ಬರೇ ಗಂಟಾನಾದಕ್ಕೆ ನಾಯಿ ಜೊಲ್ಲು ಸುರಿಸುವುದನ್ನು ನಿದರ್ಶಿಸಿ ಕಂಡಿಶನ್ಡ್ ರಿಫ್ಲೆಕ್ಸ್ ಅನ್ನು ವಿವರಿಸಿದ. ನಮ್ಮ ತೆನಾಲಿ ರಾಮನ ದಂತಕತೆಗಳಲ್ಲಿ ಇದನ್ನೇ ಸ್ವಲ್ಪ ಮಾರ್ಪಡಿಸಿ ಬೆಕ್ಕಿಗೆ ಬಿಸಿಹಾಲು ಕುಡಿಸಿ ಬೆಕ್ಕು ಮುಖ ಸುಟ್ಟಿಕೊಂಡಾಗ ಆ ಬೆಕ್ಕು ಹಾಲನ್ನೂ ಕುಡಿಯದ ಹಾಗೆ “ಡಿಕಂಡಿಶನ್’ ಮಾಡಿದ್ದೂ ಈ ಪಾವ್ಲೊವಿನ ಪ್ರಯೋಗದಷ್ಟೇ ಕುತೂಹಲಕಾರಿ.

ಈ ಹಿಂಸೆ ಒಂದು ಮನಸ್ಸಿನ ಈ ರೀತಿಯ ಕಂಡೀಶನ್ಡ್ ರಿಫ್ಲೆಕ್ಸ್ ಆದರೆ ಈ ಹಿಂಸೆಯನ್ನು ತೆನಾಲಿ ರಾಮನ ಬೆಕ್ಕಿಗಾದಂತೆ ‘ಡಿಕಂಡಿಷನ್’ ಮಾಡಲು ಸಾಧ್ಯವೇ? ಅಂದರೆ, ಹಿಂಸೆ ಮಾಡುವವನಿಗೆ ಹಿಂಸಿಸುವ ಕ್ರಿಯೆ ಸಂತೋಷವನ್ನು ಕೊಡುವಂತಿದ್ದರೆ (ಪಾವ್ಲೊವ್‌ನ ಪ್ರಯೋಗದಲ್ಲಿ ಮಾಂಸಕ್ಕೆ ಮತ್ತು ಮಾಂಸ ತಿನ್ನುವ ಮುಂಚಿನ ಗಂಟಾನಾದಕ್ಕೆ ನಾಯಿ ಜೊಲ್ಲು ಸುರಿಸಿದಂತೆ) ಈ ಸಂತೋಷವನ್ನು ಆತನಿಂದ ಕಿತ್ತುಕೊಂಡರೆ, ಆಗ ಆತ ಈ ಹಿಂಸೆಯನ್ನು ಪೂರ್ಣ ಬಿಟ್ಟುಬಿಡುತ್ತಾನೆಯೇ? ( ನಾಯಿ ಮಾಂಸ ತಿನ್ನುವುದನ್ನು ಬಿಟ್ಟಂತೆ ಅಲ್ಲ, ತೆನಾಲಿ ರಾಮನ ಬೆಕ್ಕುಹಾಲು ಕುಡಿಯುವುದನ್ನು ಬಿಟ್ಟಂತೆ)

* * *
sjff_01_img0111
ಆತನ ಹೆಸರು ಅಲೆಕ್ಸ್.

ಆತನಿಗೆ ಹಿಂಸೆಯೆಂಬುದು ಒಂದು ಆಟ, ಚಟ, ಕಲೆ. ಆತ ಹಾಲಿನಲ್ಲಿ ಹ್ಯಾಲಿಸಿನೋಜನ್ನುಗಳನ್ನು ಸೇರಿಸಿಕೊಂಡು ಕುಡಿಯುತ್ತಾನೆ, (ಇಲ್ಲಿನ ವಿಪರ್ಯಾಸವನ್ನು ಗಮನಿಸಿ. ಹಾಲು ಮುಗ್ಧತೆಯನ್ನು ಸಂಕೇತಿಸಿದರೆ, ಅದಕ್ಕೆ ಬೆರಸುವ ಮಾದಕವಸ್ತುಗಳ ಮಿಶ್ರಣ ಕಲುಶಿತ ಮುಗ್ಧತೆಯಾ?) ಲೈಬ್ರರಿಯಿಂದ ತಂಪಾಡಿಗೆ ತಾನು ಬರುತ್ತಿದ್ದ ಒಬ್ಬ ಮುದುಕನನ್ನು ಸ್ನೇಹಿತರ ಜತೆ ಸೇರಿ ಸಾಯಬಡಿಯುತ್ತಾನೆ. ಅಪ್ರಾಪ್ತ ವಯಸ್ಸಿನ ಹುಡುಗಿಯರ ಜತೆ ಸುಖಿಸುತ್ತಾನೆ, ಅಂಗಡಿಗೆ ಹೋಗಿ ಕದಿಯುತ್ತಾನೆ, ಮುದಿದಂಪತಿಗಳೆಂದು ಲವಲೇಶ ಕರುಣೆಯಿಲ್ಲದೆ ಸಾಯಬಡಿಯುತ್ತಾನೆ.

ಇವನಿಗೆ ತನ್ನ ಈ ಹಿಂಸೆಯ ಬಗ್ಗೆ ಸ್ವಲ್ಪವೂ ಪಾಪಪ್ರಜ್ಞೆಯಿಲ್ಲ. ಹಿಂಸಿಸುವುದನ್ನು ತನ್ನ ಧರ್ಮದಂತೆ ಆತ ನಡೆಸಿಕೊಂಡು ಬರುತ್ತಾನೆ. ಇದರಿಂದ ಯಾರು ಸತ್ತರೂ ಅವರನ್ನು ಈತನೇ ಸಾಯುವಂತೆ ಹೊಡೆದರೂ ಆತನಿಗೆ ಏನೂ ಅನ್ನಿಸುವುದೇ ಇಲ್ಲ. ಬದಲಿಗೆ ಒಂದು ವಿಲಕ್ಷಣ ಖುಷಿಯಾಗುತ್ತಿರುತ್ತದೆ.

ಇದಕ್ಕೆ ಕುಮ್ಮಕ್ಕು ಕೊಡುವುದಕ್ಕೆ ಅವನದೇ ಒಂದು ಗ್ಯಾಂಗಿದೆ. ವಿಚಿತ್ರವಾದ ಸ್ಲ್ಯಾಂಗುಗಳಲ್ಲಿ ಮಾತಾಡಿಕೊಂಡು, ಚಿತ್ರವಿಚಿತ್ರವಾದ ಬಟ್ಟೆಗಳನ್ನು ಹಾಕಿಕೊಂಡು, ತಮ್ಮ ಮನಸ್ಸಿಗೆ ನೇರವಾಗಿ ಅನಿಸುವುದನ್ನು ಮಾತ್ರ ಮಾಡುತ್ತಾ ರಾಕ್ಷಸರಂತೆ ತಾವು ಬದುಕುತ್ತಿದ್ದಾರೆ.

ವಿರೋಧಬಾಸವೋ, ಹುಚ್ಚೋ, ಅಥವಾ ಕಥಾನುಕೂಲವೋ ಗೊತ್ತಿಲ್ಲ, ಇಂಥವನಿಗೆ ಶಾಸ್ತ್ರೀಯ ಸಂಗೀತ ಅದರಲ್ಲಿಯೂ ಬೀಥೋವೆನ್ನಿನ ‘ಸೆವೆಂಥ್ ಹೆವೆನ್’ ಎಂದರೆ ಪ್ರಾಣ. ಯಾವಾಗಲೂ ಬೀಥೋವೆನ್ನಿನ ಸಂಗೀತವನ್ನು ಕೇಳುತ್ತಿರುತ್ತಾನೆ,

ಇನ್ನಷ್ಟು

ಮಲ್ಲಿ ಮಲ್ಲಿ ಎಲ್ಲಿಗೆ? ಮಲ್ಲೀಪಟ್ಣದ ಗಲ್ಲಿಗೆ!

HSV9

ಎಚ್ ಎಸ್ ವೆಂಕಟೇಶ ಮೂರ್ತಿ ಅವರ ‘ಬಾರೋ ಬಾರೋ ಮಳೆರಾಯ’ ಕೃತಿಯಿಂದ

ಅವರೇ ಆಯ್ದ ಕೆಲ ಪದ್ಯಗಳು ಓದುವ ಖುಷಿಗಾಗಿ ನಿಮ್ಮ ಮುಂದೆ-

baro maleraya new copy

ಮಲ್ಲಿ ಮಲ್ಲಿ ಎಲ್ಲಿಗೆ?

ಮಲ್ಲಿ ಮಲ್ಲಿ ಎಲ್ಲಿಗೆ? ಮಲ್ಲೀಪಟ್ಣದ ಗಲ್ಲಿಗೆ!
ಯಾತಕ್ಕಮ್ಮ ಅಲ್ಲಿಗೆ? ಗೋಲೀ ಮಾಡೋ ಕಲ್ಲಿಗೆ!
ಗೋಲೀಮಾಡೋ ಕಲ್ಲನ್ ತಂದು ಯಾರಿಗೆ ಕೊಡ್ತೀ ಮಲ್ಲಿಗೆ?
ರಾತ್ರಿ ಎಲ್ಲಾ ಅಳ್ತಾ ಇರೋ ಅಡುಗೇಮನೆ ನಲ್ಲಿಗೆ!

ಪೋಲೀ ಗುಂಡ!

ಪೋಲೀ ಗುಂಡ ಬಂದ! ಕೋಳೀವಾಡದಿಂದ!
ಬಗಲಲ್ಲೊಂದು ಕೋಳಿ! ಬೆಳಗಾಯ್ತಣ್ಣ ಏಳೀ!
ಕೂಗ್ತಾ ಇತ್ತು ಕೊಕ್ಕೋ! ಉದ್ರೀಗಾದ್ರೂ ತಕ್ಕೋ!

ರಾಣೀ ಬೆಕ್ಕು-ರಾಜಾ ಬೆಕ್ಕು

ರಾಣೀ ಬೆಕ್ಕು, ರಾಜಾ ಬೆಕ್ಕು ಸಿಕ್ಕಿದ ಇಲಿಗಾಗಿ
ರೇಗಾಡುತ್ತಾ ಕೂಗಾಡುತ್ತಾ ಜಗಳಕ್ಕೇ ರೆಡಿಯಾಗಿ
ನಿಂತಿದ್ದಾಗ ಅಲ್ಲಿಗೆ ಬಂತು ನಾಯಿ-ತೆರೆದೇ ಬಾಯಿ!
ಜಗಳ ಇಲ್ಲ, ಪಗಳ ಇಲ್ಲ ಎರಡೂ ಬೆಕ್ಕು ಮಾಯ!

ಹಿರಿಯೂರಲ್ಲಿ

ಹಿರಿಯೂರಲ್ಲಿ ಕರಿಯಣ್ಣೋರು ಕುರೀ ಕಾಯ್ತಾ ಇದ್ರು!
ಕುರಿ ಕಾಯ್ತಾ ಕಾಯ್ತಾ ಒಮ್ಮೆ ಕರೀ ಬಾವೀಲಿ ಬಿದ್ರು!
ಕರೀಬಾವೀಲಿಲ್ಲ ನೀರು. ಬರೀಕತ್ತಲ ಜೋರು!
ಮೊದಲೇ ಬಿದ್ದೋರ್ ಕೇಳ್ತಾ ಇದ್ರು: “ಈಗ ಬಿದ್ದೋರ್ ಯಾರು?”

ಪಾಪನ ಚಡ್ಡಿ!

ಪುಟ್ಟ ಕಂದ ಹೈ!
ಪಾಪ! ಬರೀ ಮೈ!
ಚಡ್ಡಿ ಕೂಡ ನೈ!
ಥೈ! ಥೈ! ಥೈ!

ತಾತ ಎನ್ನುತ
ಕಣ್ಣ ತಿಕ್ಕುತ
ಅಳುತ ಇದ್ದ ತಾ
ಛೆ! ಛೆ! ಛೆ!

ತಾತ ಬಂದರು!
ಕೊಟ್ಟು ಒಂದು ರೂ
ಚಡ್ಡಿ ತಂದರು!!
ಹ! ಹ! ಹ!

ತೊಡಿಸಿ ನಿಕ್ಕರು
ತಾತ ನಕ್ಕರು
ಝಿಪ್ಪೆ ಚಕ್ಕರ್ರು!!
ಹೊ! ಹೊ! ಹೊ!

ಧೋ ಧೋ ಎಂದು!

ಧೊ! ಧೊ! ಎಂದು ಮಳೆ ಸುರಿವಂದು
ಅರಳಿದ ನಾಯಿಕೊಡೆ!
ಮುರಿಯದ ಹಾಗೆ ಬೀದಿಯ ನಾಯಿ
ನಿಂತಿದೆ ಮೇಲುಗಡೇ!

ಇಂದು ಚಿಕ್ಕ ಕೊಡೆ ಬೆಳೆದರೆ ಮುಂದೆ
ಆಗುವುದೂರಗಲ!
ಚೂರೂ ತೊಯ್ಯದೆ ನಿಲ್ಲುವೆ ಕೆಳಗೆ
ಮುಂದಿನ ಮಳೆಗಾಲ!

ಗಿಲ್! ಗಿಲ್! ಗಿಲ್!

ಗಿಲ್! ಗಿಲ್! ಗಿಲ್!
ಹೋಗ್ಬೇಡ ನಿಲ್!
ಹನಿ ಹನಿ ಮಳೆ ಜತೆ
ತಲೆ ಮೇಲೆ ಕಲ್!!

ನಮ್ಮ ಚೋಟು ನಾಯಿಗೆ

ನಮ್ಮ ಚೋಟು ನಾಯಿಗೆ
ನಾಕು ಫೀಟು ನಾಲಗೆ!
ಈಗ ಚೋಟು ಬೌ ಅಂದರೆ
ಕೇಳಿಸುವುದು ನಾಳೆಗೆ!

ಬಾವಿಯಾಮೆಚಿಪ್ಪಲಿ

ಬಾವಿಯಾಮೆಚಿಪ್ಪಲಿ
ಮಾಡಿಕೊಂಡು ಚಪ್ಪಲಿ
ಉರ್‍ಅ ತಿರುಗುತಿತ್ತು ಕತ್ತೆ
ವಾಕಿಂಗಿನ ನೆಪ್ಪಲಿ!

ಓಟೇ ರೇಟು!

ಒಂದು ಹಳೇ ಕೋಟೆ; ಕೋಟೆ ಒಳಗೊಂದು ಪೇಟೆ;
ಪೇಟೆ ಉದ್ದಕ್ಕು ಮಾರ್ತಾ ಇದ್ದಾರೆ ಒಣಾ ಮಾವಿನ ಓಟೆ!
ಓಟೇ ರೇಟು ಜಾಸ್ತಿ ಅಂದ್ರ ಶ್ರೀಮಾನ್ ಜೆಮ್ ಷೆಡ್ ತಾತ!
“ಓಟೇ ರೇಟೇ ಹಾಗೇ” ಅಂತು ಕುರುಚಲು ಗಡ್ಡದ ಹೋತ!

%d bloggers like this: