‘ಅರ್ಧ ಸತ್ಯ’ ದ ಮೇಲೆ ಸೃಜನ್ ಕಣ್ನೋಟ
03 ಮೇ 2010 ನಿಮ್ಮ ಟಿಪ್ಪಣಿ ಬರೆಯಿರಿ
in 1
ಅರ್ಧಸತ್ಯ’- ಭಾರತೀಯ ಚಿತ್ರರಂಗದಲ್ಲೇ ಒಂದು ರೀತಿಯಲ್ಲಿ ಟ್ರೆಂಡ್ ಸೆಟ್ಟರ್ ಸಿನಿಮಾ. ಗೋವಿಂದ ನಿಹಲಾನಿಯವರು ನಿರ್ದೇಶಿಸಿದ ಸಿನಿಮಾ ಸಾಮಾನ್ಯರ ಬದುಕಿನಲ್ಲೊಂದು ತಮ್ಮ ನಡುವೆಯೇ ಇರುವ, ಭ್ರಷ್ಟ ಸರಕಾರಿ ವ್ಯವಸ್ಥೆಯೊಳಗೆ ನಲುಗುವ ಮತ್ತೊಬ್ಬ ವ್ಯಕ್ತಿಯ ಒಳದನಿ ಕೇಳಿಸಿದ ಚಿತ್ರ.
ಸತ್ಯಕ್ಕೂ ಅಸತ್ಯಕ್ಕೂ ನಡುವಿನ ದೂರ ಎಷ್ಟು ?
ಆದರ್ಶಕ್ಕೂ ವಾಸ್ತವಕ್ಕೂ ನಡುವಿನ ಅಂತರವೆಷ್ಟು ? ಈ ಪ್ರಶ್ನೆಗಳಿಗೆ ಇವತ್ತಿಗೂ ಸರಿಯಾದ ಉತ್ತರವಿಲ್ಲ. ಪರಿಸ್ಥಿತಿಗಳೊಂದಿಗೆ, ವ್ಯವಸ್ಥೆಯೊಂದಿಗೆ ರಾಜಿಯ ಉತ್ತರಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. ಆ ಉತ್ತರ ಇಲ್ಲಿ’ಅರ್ಧ ಸತ್ಯ’ವಾಗಿರುತ್ತದೆ.ನಿಷ್ಟುರವಾದ ಸತ್ಯವನ್ನೇ ಗೋವಿಂದ ನಿಹಲಾನಿ ‘ಅರ್ಧ ಸತ್ಯ’(1983) ಹೆಸರಿಂದ ಸಿನಿಮಾ ಮಾಡಿದ್ದಾರೆ. ನಿರ್ದೇಶಕರಾಗಿ ಅವರಿಗೆ ಈ ಚಿತ್ರ ಮೈಲಿಗಲ್ಲು.
ಸಿನಿಮಾದಲ್ಲಿ ನಾಯಕನಾಗಿ ನಟಿಸಿದ ಓಂಪುರಿಗೂ ಇದು ಕಂಡರಿಯದ ಮೊದಲ ಹಿಟ್. ಒಂದು ಕಲಾತ್ಮಕ ಚಿತ್ರ ಕಮರ್ಷಿಯಲ್ ಆಗಿ ಜನಪ್ರಿಯಗೊಳ್ಳುವ ಟ್ರೆಂಡ್ ಇದರಿಂದಲೇ ಪ್ರಾರಂಭವಾಯ್ತು. ಆದ್ದರಿಂದಲೇ ‘ಅರ್ಧ ಸತ್ಯ’ ಭಾರತಿಯ ಚಿತ್ರ ಇತಿಹಾಸದಲ್ಲೂ ಮೈಲಿಗಲ್ಲೇ.
ನಮ್ಮ ಚಲನಚಿತ್ರ ಇತಿಹಾಸದ ಪುಟಗಳನ್ನು ತಿರುವಿ ನೋಡಿದರೆ ಪೋಲಿಸ್ ಕಥೆಯಾಧಾರಿತ ಸಿನಿಮಾಗಳು ಪುಂಖಾನು ಪುಂಖವಾಗಿ ಸಿಗುತ್ತವೆ. ವೃತ್ತಿಯನ್ನು ಪವಿತ್ರವೆಂದು ಭಾವಿಸುತ್ತಾ ತಮ್ಮ ಪ್ರಾಣವನ್ನೇ ಧಾರೆಯೆರೆದ ನಿಷ್ಟಾವಂತ ಪೋಲಿಸ್ ಅಧಿಕಾರಿಗಳು ಒಂದು ಕಡೆಯಾದರೆ, ಲಂಚ-ಅಧಿಕಾರ ಧಿಮಾಕುಗಳಿಂದ ಮೆರೆದವರ ದಂಡು ಮತ್ತೊಂದು ಕಡೆ. ನಿಜ ಹೇಳಬೇಕೆಂದರೆ ಪೋಲಿಸ್ ಉದ್ಯೋಗ ಒಂದು ರೀತಿಯಲ್ಲಿ ಕತ್ತಿಯಂಚಿನ ಬದುಕು. ನಿಷ್ಠೆ ಪ್ರಾಮಾಣಿಕತೆಗಳು ಮೇಲಧಿಕಾರಿಗಳ ಲೋಲುಪತೆ ಎದುರು ಕೇವಲ ನಿಘಂಟಿನ ಪದಗಳು. ವೃತ್ತಿಗೆ ನ್ಯಾಯ ಒದಗಿಸಲಾಗದೆ, ಮನಸ್ಸಿಗೆ ವಿರುದ್ಧವಾಗಿ ಪರಿಸ್ಥಿತಿಗಳೊಂದಿಗೆ ರಾಜಿಯಾಗದೆ ಮಾನಸಿಕವಾಗಿ ಜರ್ಜರಿತರಾಗುತ್ತಿರುವ ಎಷ್ಟೋ ನಿಷ್ಠಾವಂತ ಅಧಿಕಾರಿಗಳಿದ್ದಾರೆ. ಜೈಲಿನ ಗೋಡೆಗಳ ಹಿಂದೆ, ಬಾಗಿಲ ಸರಳುಗಳ ಹಿಂದೆ ಕಮರಿ ಹೋಗುತ್ತಿರುವ ಖೈದಿಗಳಂತೆ ಜೈಲು ಗೋಡೆಗಳ ಈಚೆ ಇಂಥದೇ ಸ್ಥಿತಿಯಲ್ಲಿರುವ ಪೋಲೀಸರ ದುರ್ಭರ ಸ್ಥಿತಿಗಳ ಬಗ್ಗೆ ನಿಹಲಾನಿ ಸಿನಿಮಾ ಮಾಡುವವರೆಗೆ ಯಾರಿಗೂ ಗೊತ್ತಿರಲಿಲ್ಲ.
‘ಅರ್ಧ ಸತ್ಯ’ ಪ್ರಾಮಾಣಿಕ ಪೋಲಿಸ್ ಇನ್ಸಪೆಕ್ಟರ್ ಒಬ್ಬನ ಕಥೆ. ಅನಂತ್ ವೇಲಂಕರ್(ಓಂ ಪುರಿ) ಸೂಕ್ಷ್ಮ ಮನಸ್ಸಿನ ಕವಿ ಹೃದಯದ, ಭಾವುಕ. ಆರ್ಟ್ಸ್ನಲ್ಲಿ ಪ್ರೊಫೆಸರ್ ಆಗಬೇಕೆಂಬ ಮಹತ್ವಾಕಾಂಕ್ಷೆಯವ. ಆದರೆ ಅವನ ತಂದೆಯ(ಅಮರೀಶ್ ಪುರಿ) ಯೋಚನೆಗಳೇ ಬೇರೆ .ಬೀದಿಯ ರೌಡಿಗಳನ್ನು ಒದ್ದು ದಾರಿಗೆ ತರುವಂತೆ ಹೆಂಡತಿಯನ್ನು ಕೂಡ ಒದ್ದು ದಾರಿಗೆ ತರುವಲ್ಲಿ ತಪ್ಪೇನೂ ಇಲ್ಲವೆಂದು ಭಾವಿಸುವ ಹುಂಬ ಮನುಷ್ಯ. ಅವನಿಗೆ ಎದುರಿನವರ ಇಷ್ಟಗಳ, ಆಸೆಗಳ ಪ್ರಮೇಯವೇ ಇಲ್ಲದವನಂತೆ ವರ್ತಿಸುವವ. ಎಲ್ಲ ತನ್ನಿಷ್ಟ. ತಾನು ಅಂದು ಕೊಂಡದ್ದು ನೆರವೇರಿದರೆ ಸಾಕು. ಹಾಗೆಯೇ ಮಗ ಅನಂತನ ಪುಟ್ಟ ಪುಟ್ಟ ಆಸೆಗಳನ್ನು, ಬಯಕೆಗಳನ್ನು ನಿರ್ಲಕ್ಷ್ಯಿಸಿ, ನಿರಾಕರಿಸಿ ಪೋಲಿಸ್ ವೃತ್ತಿಯಲ್ಲಿ ಸೇರುವಂತೆ ಮಾಡಿದ.
ಇಷ್ಟ ಕಷ್ಟ ಗಳ ನಡುವೆ ಅನಂತ್ ಉದ್ಯೋಗಕ್ಕೆ ಸೇರಿದ ಬಳಿಕ ಅನ್ನ ಕೊಡುವ ಉದ್ಯೋಗ ಕ್ಕೆ ಪ್ರಾಮಾಣಿಕನಾಗಿರುತ್ತಾನೆ. ಹಾಗೆ ಇರಬೇಕಾಗಿರುವುದು ತನ್ನ ಕರ್ತವ್ಯವೆಂದೇ ಭಾವಿಸಿರುತ್ತಾನೆ. ಒಮ್ಮೆ ಅಲ್ಲಿ ಸ್ಥಳೀಯ ರೌಡಿ ರಾಮ್ ಶೆಟ್ಟಿ(ಸದಾಶಿವ್ ಅಮರಾಪುರಕರ್) ಹೆಸರಿನ ರೌಡಿಯನ್ನು ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ. ಪೋಲಿಸ್ ಪೇದೆಯೊಬ್ಬನನ್ನು ರೌಡಿಗಳು ಥಳಿಸಿದ ಆರೋಪದ ಮೇಲೆ ರಾಮ್ ಶೆಟ್ಟಿ ಯ ಮೂವರು ಅನುಚರರನ್ನು ಅನಂತ್ ಬಂಧಿಸುತ್ತಾನೆ. ಆದರೆ ರಾಮ್ಶೆಟ್ಟಿಗೆ ಅನಂತ್ನ ಮುಗ್ಧತೆ ನಗು ತರಿಸುತ್ತದೆ. ಆತ ಮೇಲಾಧಿಕಾರಿಗಳೊಂದಿಗೆ ಮಾತನಾಡಿ ಕ್ಷಣಗಳಲ್ಲಿ ಅವರ ಬಿಡುಗಡೆಯ ಆರ್ಡರ್ ಹೊರಡಿಸುತ್ತಾನೆ. ಇದೆಲ್ಲ ಅನಂತ್ ನ ಕಣ್ಣ ಮುಂದೆಯೇ ನಡೆಯುತ್ತದೆ. ಅನಂತನಿಗೆ ತನ್ನ ನಿಸ್ಸಹಾಯಕತೆ, ತನ್ನ ಇತಿ ಮಿತಿಗಳ ಕಲ್ಪನೆ ಸ್ಪಷ್ಟವಾಗುತ್ತದೆ. ಹತಾಶೆಯಿಂದ ಇದನ್ನು ತನ್ನಪೋಲಿಸ್ ಸ್ನೇಹಿತರೊಂದಿಗೆ ಹಂಚಿ ಕೊಳ್ಳಲು ಯತ್ನಿಸುತ್ತಾನೆ.
ಇತ್ತೀಚಿನ ಟಿಪ್ಪಣಿಗಳು