ಬೋಧಿ ನೆಲದ ಮಾತು

ಚಂದನ ವಾಹಿನಿಯಲ್ಲಿ ಒಂದು ಸುಂದರ ಕಾರ್ಯಕ್ರಮ

ಚಂದನ ವಾಹಿನಿಯಲ್ಲಿ ಇತ್ತೀಚೆಗೆ ಒಂದು ಸುಂದರ ಕಾರ್ಯಕ್ರಮ ಪ್ರಸಾರ ಆಯ್ತು. ರಂಗಕರ್ಮಿ ಎಸ್. ಕೆ .ಮಾಧವ ರಾವ್ ಅವರನ್ನು ಪ್ರಸಿದ್ಧ ಸಾಹಿತಿ ಗುಂಡೂ ರಾವ್ ಅವರು ಸಂದರ್ಶನ ಮಾಡಿದರು. ಎಸ್.ಕೆ .ಮಾಧವ ರಾವ್ ಕೈಲಾಸಂ ನಾಟಕಗಳಲ್ಲಿ ಅತಿ ಹೆಚ್ಚು ವಿತಂತು (ವಿಧವೆ ) ಪಾತ್ರ ಮಾಡಿರುವ ಕಲಾವಿದ. ಈ ಪಾತ್ರ ಹಾಗೆನ್ನುವುದಕ್ಕಿಂತ ವಿಧವೆ ಎನ್ನುವ ಪಟ್ಟ ಹೆಣ್ಣುಮಕ್ಕಳಿಗೆ ಅತ್ಯಂತ ಖೇದಕರ ಪರಿಸ್ಥಿತಿ .

ಅದರಲ್ಲೂ ಕೆಲವು ಜಾತಿಗಳಲ್ಲಿನ ಹೆಣ್ಣುಮಕ್ಕಳಿಗೆ ಈ ಪರಿಸ್ಥಿತಿಯ ಘೋರ ಪ್ರಪಂಚದ ಅರಿವು ಇದ್ದೇ ಇದೆ. ಎಸ್ಕೆಎಂ ಎಂದು ಕರೆಯುವ ಮಾಧವರಾಯರನ್ನು ನಾಟಕ-ಮಕ್ಕಳ-ಮಹಿಳೆಯರ ಮಾಧವ ರಾವ್ ಎಂದೇ ಪ್ರಖ್ಯಾತಿ ಹೊಂದಿದ್ದಾರೆ.

ಯಾಕೆ ಕೈಲಾಸಂ ನಾಟಕಗಳಲ್ಲಿ ವಿತಂತು ಪಾತ್ರಗಳು ಸದಾ ಕೋಪ-ಸಿಡಿಮಿಡಿಯನ್ನು ತೋರುತ್ತಿದ್ದವು ಎನ್ನುವುದಕ್ಕೆ , ಕಾರಣ ಆ ಪಾಪದ ಹೆಣ್ಣುಮಗಳು ತನಗೆ ಬದುಕಲ್ಲಿ ಸಿಗದೇ ಇರುವ ಸುಖ-ಸಂತೋಷ ಬೇರೆಯವರಿಗೆ ಸಿಕ್ಕಾಗ ಆ ನೋವು ಸಹಜ.

ಪೂರ್ಣ ಓದಿಗೆ –ಮೀಡಿಯಾ ಮೈಂಡ್

‘ಭಾಗ್ಯ’ ತುಳು ಸಿನೆಮಾ

BHAGYA tulu digital movie is the story of poor fisher women.Director Prakash suvarna katapadi.Producer Francis d’sa.Cameraman Sandeep.Music Rohith Malpe. Bhagya is Prakash suvarna’s 5th film. Other Films are Chenni,Halli Mane,Akku,Guddadama. His film Akku is won the Prasara Bharathi UNICEF National Award.And another Gddadamane film based by ‘Naxlite’ story & best social awareness film Award

ತಲೆದಿಂಬಿನಡಿಯ ಅಸ್ಪಷ್ಟ ಪತ್ರ

-ಪೂರ್ಣಿಮಾ ಭಟ್ಟ, ಸಣ್ಣಕೇರಿ
Teddington, London, United Kingdom

ಮೌನ-ಮುಗುಳು-ಮಾತು

ಇಷ್ಟೆಲ್ಲ ಅತಿರೇಕಕ್ಕೆ ಹೋಗುತ್ತದೆ ಎಂದು ನನಗೆ ಎಲ್ಲಿ ಗೊತ್ತಿತ್ತು? ಹದಿನೈದು ವರ್ಷಗಳಿಂದ ಅದೇ ಮುಖ, ಅದೇ ಸ್ವಭಾವ, ಅದೇ ನಗು, ಅದೇ ಮೈ – ಕೊನೆಗೆ ಮೈಥುನವೂ ಅದೇ… ನನಗೆ ಬೇಜಾರಾದದ್ದು ತಪ್ಪೇ? ನನ್ನ ಸ್ವಭಾವವೇ ಅಂಥದ್ದು. ಕೆಲಸ ಬದಲಿಸುತ್ತ ಬಂದೆ. ಮನೆ ಐದು ವರ್ಷಕ್ಕೆ ಬೇಜಾರಾಯ್ತು. ಮಕ್ಕಳೂ ಬೋರಾಗಬಹುದೆಂದು ಆ ಗೋಜಿಗೆ ಹೋಗಲಿಲ್ಲ. ಇನ್ನು ಸಂಬಂಧ – ಅದು ಹಳಸಲು ಕಾರಣಗಳು ಬೇಕಿರಲಿಲ್ಲ – ಏನಂತಿ? ಹಾಗೆ ನೋಡಿದರೆ ಹದಿನೈದು ವರ್ಷ ನನ್ನ ಮಟ್ಟಿಗೆ ಸುಲಭದ್ದೇನೂ ಆಗಿರಲಿಲ್ಲ.

ಮೊದಲೆರಡು ವರ್ಷದ ಸಂಭ್ರಮದಲ್ಲಿ ಎಲ್ಲವೂ ಚೆಂದವಿತ್ತು. ಬೆಚ್ಚಗಿನ ಮುತ್ತು ಕೆನ್ನೆಯ ಮೇಲೆ ಬಿದ್ದಾಗ ಚಳಿ ಚಳಿಯ ಮುಂಜಾವು ಅಸಹನೀಯ ಅನ್ನಿಸಲೇ ಇಲ್ಲ. ಶೌಚದ ಸಮಯದಲ್ಲಿ ತೆರೆದಿಟ್ಟ ಬಾಗಿಲೂ ನಮ್ಮಿಬ್ಬರ ಜಗಳಕ್ಕೆ ಕಾರಣವಾಗಬಹುದು ಎಂದುಕೊಂಡಿರಲಿಲ್ಲ. ಹಾಸಿಗೆಯ ಹೊದಿಕೆಯನ್ನು ಪ್ರತಿದಿನ ಸರಿಮಾಡುವುದು ಜಗತ್ತಿನ ಅತೀ ಕಷ್ಟದ ಕೆಲಸ ಎನ್ನಿಸಿದ್ದು ಯಾವಾಗ? ಡಿನ್ನರಿನ ಸಮಯದಲ್ಲಿ ಅಗಿಯುವಾಗ ಶಬ್ದಮಾಡಬೇಡ ಎಂದಿದ್ದಕ್ಕಾಗಿ ರಾತ್ರಿಯಿಡೀ ಮಾತನಾಡದೇ ಇರುವ ದುರ್ಬುದ್ಧಿ ನನಗೇಕೆ ಬಂತು? ತುಂಬ ತಲೆ ನೋವೆಂದು ಮಲಗಿದ ನನಗೆ ಮಾತ್ರೆ ನುಂಗಿಸಿ, ಹಣೆ ನೇವರಿಸಿ ಹೋದರೂ – ಹೊದಿಕೆ ಹೊಚ್ಚದೆ ಹಾಗೇ ಹೋದೆ ಎಂದು ಜಗಳ ತೆಗೆದಿದ್ದು ಯಾಕೆ?

ಎರಡು ವರ್ಷದ ಹಿಂದಿನ ಮಾತೇನೋ. ಅದೊಂದು ಚಳಿಗಾಲದ ಮುಂಜಾವು. ಸ್ನಾನ ಮಾಡುವ ಮುನ್ನ ಸುಮ್ಮನೇ ಬಂದ ಮಾತದು. ತಲೆ ಕೂದಲೆಲ್ಲಾ ಬೆಳ್ಳಗಾಗಿದೆ, ಕಲರಿಂಗ್ ಮಾಡಿದರೆ ಇನ್ನಷ್ಟು ಸೆಕ್ಸಿಯಾಗಿ ಕಾಣ್ತೀ ಎಂದು ನೀ ಹೇಳಿದ್ದಲ್ಲವೇ? ನನ್ನ ಸಿಟ್ಟು ನೆತ್ತಿಗೇರಿತ್ತು. ಸೆಕ್ಸಿಯಾಗಿ ಕಾಣುವ ಸೂಳೆಯರಿಗೇನು ಕಮ್ಮಿ ಈ ಊರಲ್ಲಿ? ಅವರನ್ನು ಒಂದು ಕೈ ನೋಡು ಎಂದು ಕಿರುಚಿದ್ದೆ ನಾನು ಅಲ್ಲವೇ? ಮೊದಲೇ ಜಾಸ್ತಿ ಮಾತಾಡದ ನೀನು ಪೂರ್ತಿ ಮಾತು ಬತ್ತಿದವನಂತೆ ಕಾಣುತ್ತಿದ್ದೆ. ಸಂಜೆ ಊರಲ್ಲಿನ ಅಂಗಡಿಗಳನ್ನೆಲ್ಲ ತಡಕಾಡಿ ಮನೆಗೆ ಬಂದಾಗ ರಾತ್ರಿ. ನನ್ನ ಎದುರ್ಗೊಂಡಿದ್ದೇ ಡೈನಿಂಗ್ ಟೇಬಲ್ ಮೇಲಿನ ಮೂರು ಖಾಲಿ ವೈನ್ ಬಾಟಲ್‌ಗಳು. ಜಾಸ್ತಿ ಮಾತು ಬೇಕಿರಲಿಲ್ಲ. ನಂತರ ಮೂರು ದಿನದ ಮೌನ. ನನ್ನ ಪಾಡಿನ ಊಟ, ನಿದ್ದೆ ಎಲ್ಲವೂ ಸರಿಯಾಗಿಯೇ ನಡೆಯುತ್ತಿತ್ತಲ್ಲ – ಘಟನೆಯನ್ನು ಪೂರ್ತಿ ಮರೆತಂತೆ ಇದ್ದೆ. ನಿನ್ನೊಂದಿಗಿನ ಸಖ್ಯ, ಮಾತು ಬೇಕೆನಿಸಲೇ ಇಲ್ಲ. ನೀ ಮಾತ್ರ ಊಟ, ನಿದ್ದೆ ಎಲ್ಲ ಮರೆತಿದ್ದೆ. ನಿನ್ನ ಬಡಕಲು ಶರೀರ ತೀರ ಗಾಳಿಯಲ್ಲಿ ಓಲಾಡುವಂತಿತ್ತು. ಆರನೇ ದಿನಕ್ಕೆ ಬೊಕೆಯೊಂದಿಗೆ ಬಂದ ನೀನು- ಇಷ್ಟು ದಿನ ಸರಿಯಾಗಿ ಮಾತಾಡದೇ ಇದ್ದಿದ್ದಕ್ಕೆ ಕ್ಷಮಿಸು ಎಂದೆ. ಹದಿನೈದು ವರ್ಷದ ನಮ್ಮ ಸಖ್ಯದಲ್ಲಿ ಇಷ್ಟುದ್ದದ ಜಗಳ ಯಾವುದೂ ಇದ್ದಿರಲಿಕ್ಕಿಲ್ಲ. ಯಾಕಾದರೂ ರಾಜಿ ಮಾಡಿಕೊಂಡೆನೋ ಎಂದು ನಂಗನ್ನಿಸಿತ್ತು ಎಂದರೆ ನಂಬ್ತೀಯಾ?

ಇನ್ನಷ್ಟು

ಸಂಕ್ರಾತಿ ಎಂದರೆ ಕಬ್ಬು, ಸಂಕ್ರಾತಿ ಎಂದರೆ ಸುಗ್ಗಿ, ಸಂಕ್ರಾಂತಿ ಎಂದರೆ ಗಾಳಿಪಟ

ಇಲ್ಲಿದೆ ‘ಅವಧಿ’ಗೆ ಗೆಳಯರು ಕಳಿಸಿಕೊಟ್ಟ ಶುಭಾಶಯಗಳು.

ಆ ಶುಭಾಶಯಗಳ ಮೂಲಕ ‘ಅವಧಿ’ಯೂ ನಿಮ್ಮೆಲ್ಲರಿಗೂ ಶುಭ ಕೋರುತ್ತಿದೆ.

From Boston, USA