ಅವಧಿ- Flipkart ಕೈ ಜೋಡಿಸಿದೆ. ನಿಮಗೆ ಬೇಕಾದ ಪುಸ್ತಕ ಇನ್ನು ನಿಮ್ಮ ಮನೆ ಬಾಗಿಲಿಗೆ..

ಇನ್ನು ಮುಂದೆ ಪುಸ್ತಕಕ್ಕೆ ತಡಕಾಡಬೇಡಿ

ಹೇಗೆ ತರಿಸಬೇಕು? ಎಂದು ಯೋಚನೆ ಮಾಡಬೇಡಿ

ಹಣ ಕೊಡುವುದು ಹೇಗೆ? ಎಂದು ಚಿಂತೆ ಬೇಡ

ಪುಸ್ತಕೋದ್ಯಮಕ್ಕೆ ಹೊಸ ಆಯಾಮ ಕೊಟ್ಟ Flipkartನೊಂದಿಗೆ ‘ಅವಧಿ’ ಕೈ ಜೋಡಿಸಿದೆ

‘ಅವಧಿ’ಯ ಬಲ ಬಾಗದಲ್ಲಿ ನೋಡಿ ನಿಮಗೆ

Flipkart ಲೋಗೋ ಕಾಣುತ್ತದೆ ಅದರ ಮೇಲೆ ಲಿಂಕ್ ಇದೆ

ಇನ್ನು ಕನ್ನಡ, ಇಂಗ್ಲಿಶ್ ಸೇರಿದಂತೆ ಬಹುತೇಕ ಭಾಷೆಗಳ ಪುಸ್ತಕಗಳನ್ನು ಮನೆ ಬಾಗಿಲಿಗೆ ತರಿಸಿಕೊಳ್ಳಬಹುದು

ಇನ್ನೇಕೆ ತಡ ಕ್ಲಿಕ್ ಮಾಡಿ

ಇನ್ನೂ ಮಾಹಿತಿ ಬೇಕಾದರೆ avadhimag@gmail.com ಗೆ ಮೇಲ್ ಮಾಡಿ

‘ಚಿತ್ರಸಂತೆ’ ನೋಡಿದಿರಾ?

ನಮ್ಮ ಪ್ರೀತಿಯ ‘ಇಟ್ಟಿಗೆ ಸಿಮೆಂಟ್’ ಆರ್ಥಾತ್ ಪ್ರಕಾಶ್ ಹೆಗ್ಡೆ ಚಿತ್ರಸಂತೆಯ ಜೀವವನ್ನು ಹಿಡಿದಿಟ್ಟಿದ್ದಾರೆ ತಮ್ಮ ಫೋಟೋಗಳಲ್ಲಿ. ಇನ್ನೂ ಹಲವು ಫೋಟೋಗಳು ಬರಲಿವೆ.



ಗಾಂಧಿ ತಾತನ ಮೂಗಿನ ಮೇಲೆ…

ಸೊಳ್ಳೆ ಮತ್ತು ಹಿಂಸೆ

ದಿಲಾವರ್ ರಾಮದುರ್ಗ

ರಾತ್ರಿಯೆಲ್ಲ ಕಿವಿಯ ಬಳಿ ಗುಂಯ್ ಎನ್ನುತ್ತ, ನನ್ನ ನಿದ್ರೆ ಮತ್ತು ನೆಮ್ಮದಿಗೆ ಭಂಗ ತರುವ ಸೊಳ್ಳೆಯೊಂದು ತುಂಬ ಕಿರಿ ಕಿರಿ ನೀಡುತ್ತಿತ್ತು. ಮೂಗಿನ ತುಂದಿ ಕಚ್ಚುತ್ತ, ಕಿವಿಯ ಮೆದುತೊಗಲು ಚುಚ್ಚಿ ಹಿಂಸೆ ಕೊಡುತ್ತ ನನ್ನ ಆಟ ಆಡಿಸುತ್ತಿತ್ತು.

ಅದನ್ನು ಮುಗಿಸುವುದು ಸೂಕ್ತ ಎಂದು ಪ್ರತಿಹಿಂಸೆಗೆ ಸಿದ್ದವಾದರೆ ಸೊಳ್ಳೆ ಗಾಂಧಿ ತಾತನ ಮೂಗಿನ ಮೇಲೆ ಕೂತುಬಿಡೋದಾ…!

‘ಇನ್ನಿನಿಸು ದಿನ ಮಹಾತ್ಮ ನೀ ಬದುಕಬೇಕಿತ್ತು..’

-ಜಿ ಎನ್ ಮೋಹನ್

‘ಒಂದ್ನಿಮಿಷ ಬರ್ತೀನಿ ಇರಿ’ ಎಂದು ಟೆಡ್ ಟರ್ನರ್ ತಮ್ಮ ಖಾಸಗಿ ಕೋಣೆ ಹೊಕ್ಕರು. ಜಗತ್ತಿಗೆ ಜಗತ್ತೇ ನಿಬ್ಬೆರಗಾಗುವಂತೆ ಟೆಡ್ ಟರ್ನರ್ ಬೆಳೆದು ನಿಂತು ಬಿಟ್ಟಿದ್ದರು. ಮನೆಯ ಮೂಲೆಯಲ್ಲಿ ಕಣ್ಣೀರು ಉಕ್ಕಿಸುವ , ಹ ಹ ಹಾ ಎಂದು ಲಾಫರ್ ಕ್ಲಬ್ ಗಳಂತೆ ನಗಿಸುವ ವಸ್ತುವಾಗಿದ್ದ ದೂರದರ್ಶನ ಈಗ ಅಫೀಮಿನಂತೆ ಆಗಿ ಹೋಗಿತ್ತು. ಟೆಡ್ ಟರ್ನರ್ ಕೊಲ್ಲಿ ಯುದ್ಧಕ್ಕೆ ಆಂಟೆನಾ ಜೋಡಿಸಿದ್ದೇ ತಡ ಜಗತ್ತು ಟೆಲಿವಿಷನ್ ಎಂಬ ಮಾಯಾ ಜಿಂಕೆಯ ಬೆನ್ನ ಹಿಂದೆ ಬಿತ್ತು.  ಮತ್ತೆ ಬಾಗಿಲು ತೆರೆದು ಟೆಡ್ ಟರ್ನರ್ ನಮ್ಮ ಮುಂದೆ ನಿಂತಾಗ ಅವರ ಕೈಯಲ್ಲಿ ಒಂದು ಪುಟ್ಟ ಪ್ರತಿಮೆ. ಟೆಡ್ ಜೊತೆ ಲೋಕಾಭಿರಾಮವಾಗಿ ಹರಟೆ ಕೊಚ್ಚುತ್ತಾ ‘ನಿಮಗೆ ತೀರಾ ಇಷ್ಟವಾದವರು ಯಾರು? ಜೇನ್ ಫಾಂಡಾಳನ್ನು ಬಿಟ್ಟರೆ..’ ಅಂತ ಕೇಳಿದ್ದೆ. ಅದಕ್ಕೆ ಉತ್ತರವಾಗಿ ಟೆಡ್ ಈ ಪ್ರತಿಮೆ ಹಿಡಿದು ನಿಂತಿದ್ದರು. ‘ವಾಹ್, ಗಾಂಧಿ!’ ಅಂತ ಆಶ್ಚರ್ಯದ ಉದ್ಘಾರ ಹೊರಟಿದ್ದು ನನ್ನಿಂದ ಮಾತ್ರವಲ್ಲ ಪಕ್ಕದಲ್ಲಿಯೇ ಚಿಲಿ, ದಕ್ಷಿಣ ಆಫ್ರಿಕಾ, ಸ್ಲೊವೇನಿಯಾ. ಜೆಕ್, ಜರ್ಮನಿ, ಕೀನ್ಯಾ, ಕೊರಿಯಾ, ಜಪಾನ್, ಆಸ್ಟ್ರೇಲಿಯಾ ದೇಶದ ಎಲ್ಲರ ಬಾಯಿಂದಲೂ ಈ ಉದ್ಘಾರ ಹೊರಬಿತ್ತು.

gn oct1 (1)

ಇನ್ನೇನು ಸಿ ಎನ್ ಎನ್ ಕಚೇರಿಯಿಂದ ಬೀಳ್ಗೋಳ್ಳಲು ಎರಡೇ ಎರಡು ದಿನ ಬಾಕಿ ಇತ್ತು. ಅಟ್ಲಾಂಟಾದ ಮೂಲೆ ಮೂಲೆಯನ್ನೆಲ್ಲಾ ಜಾಲಾಡಿಬಿಡೋಣಾ ಎಂದು ದಂಡು ಕಟ್ಟಿ ಹೊರಟಿದ್ದು ಮಾರ್ಟಿನ್ ಲೂಥರ್ ಕಿಂಗ್ ನೆನಪಿನ ಮನೆಗೆ. ಇನ್ನೂ ಕಾಂಪೌಂಡ್  ಒಳಗೆ ಕಾಲಿಟ್ಟಿರಲಿಲ್ಲ. ಅಲ್ಲಿ ಆಳೆತ್ತರದ ಪ್ರತಿಮೆ– ಅದು ಗಾಂಧಿ. ನನ್ನ ಜೊತೆಯಲ್ಲಿಯೇ ಹೆಜ್ಜೆ ಹಾಕುತ್ತಿದ್ದ ದಕ್ಷಿಣ ಆಫ್ರಿಕಾದ ನೋಕ್ವಾಸಿ ಶಬಲಾಲ ಓಡಿಹೋಗಿ ಆ ಗಾಂಧಿಯ ಕೆನ್ನೆಗೊಂದು ಮುತ್ತು ತೂರಿದಳು. ನನ್ನ ಕ್ಯಾಮೆರಾ ‘ಕ್ಲಿಕ್’ ಎಂದಿತು.

ಶಾಪ್ ಹಾಪಿಂಗ್ ಮಾಡುತ್ತಾ ಮಾಡುತ್ತಾ ಸಮಯ ರಾತ್ರಿ ಮೂರರ ಗಡಿ ದಾಟಿತ್ತು. ಗೆಳೆಯರ ಜೊತೆ ಇನ್ನೂ ಸುತ್ತುವುದಕ್ಕೆ ನಾನು ಸಿದ್ದನಿರಲಿಲ್ಲ. ಎಲ್ಲರಿಗೂ ಒಳ್ಳೆಯ ಹಗ್ ಕೊಟ್ಟು ‘ಗುಡ್ ಬೈ’ ಹೇಳಿದೆ.  ’ಹುಷಾರು, ಇದು ಆಮೇರಿಕಾ, ಒಬ್ಬನೇ ಹೋಗುತ್ತಿದ್ದೀಯಾ’ ಎಂದು ಜೆಕ್ ಗೆಳೆಯ ಮೆರೆಕ್ ಬ್ರಾಡ್ಸ್ಕಿ ಪಿಸುಗಟ್ಟಿದ. ಭಾರತದಿಂದ ಹೊರಡುವಾಗಲೂ ಎಲ್ಲರದ್ದೂ ಇದೇ ಕಿವಿಮಾತು ಟ್ಯಾಕ್ಸಿ ಏರಿದೆ. ಜೇಬಿನಲ್ಲಿದ್ದ ಪಾಸ್ ಪೋರ್ಟ್, ಡಾಲರ ಗಳ ಮೇಲೆ ಎರಡಲ್ಲ, ಹತ್ತು ಕಣ್ಣಿಟ್ಟಿದ್ದೆ. ರೊಯ್ರಂನೆ ಬೀದಿ ಬೀದಿ ಸುತ್ತಿದ ಟ್ಯಾಕ್ಸಿ ನನ್ನ ಹೋಟಲ್ ಮುಂದೆ ನಿಂತಿತ್ತು. ಟ್ಯಾಕ್ಸಿ ಮೀಟರ್, ಅದಕ್ಕೆ ಹತ್ತು ಪರ್ಸೆಂಟ್ ಟಿಪ್ಸ್ ಸೇರಿಸಿ ಡ್ರೈವರ್ ಕೈಗಿಟ್ಟೆ. ನಾನು ಟಿಪ್ಸ್ ಎಂದು ಕೊಟ್ಟ ಹತ್ತು ಡಾಲರ್ ನೋಟನ್ನು ಆತ ನನ್ನ ಕೈಗೇ ತುರುಕಿದ. ಯಾಕೆ ಎಂದು ಕೇಳಿದೆ. ‘ಗಾಂಧಿ?’ ಅಂತ ಕೇಳಿದ . ನಾನು ‘ಯಸ್, ಇಂಡಿಯಾ’ ಎಂದೆ. ಕೈ ಬೀಸುತ್ತಾ ಹೊರಟೇ ಬಿಟ್ಟ.

ಇನ್ನಷ್ಟು

ಓ! ಗಾಂಧಿ..

ಫೋಟೋ :ಕರ್ನಾಟಕ ಫೋಟೋ ನ್ಯೂಸ್

ನೀ ನಡೆದ ಹಾದಿಯಲ್ಲಿ..

ಸುಘೋಷ್ ಬರೆದ ಕಾಡುವ ಕಥೆ: ಗಾಂಧಿ ಹತ್ಯೆ

-ಸುಘೋಷ್ ಎಸ್. ನಿಗಳೆ


ನುಣ್ಣನೆಯ ಬೋಳು ತಲೆಯ ಮೇಲೆ ಸೂರ್ಯನ ಪ್ರತಿಬಿಂಬ ತುಸು ಸ್ಪಷ್ಟವಾಗಿಯೇ ಕಾಣುತಿತ್ತು. ಎಡಗೈಯಿಂದ ತಲೆಯನ್ನೂ, ಬಲಗೈಯಿಂದ ಪಿರ್ರೆಯನ್ನೂ ತುರಿಸುತ್ತ ಮಟಮಟ ಮಧ್ಯಾಹ್ನದಲ್ಲಿ ಸೋಮಶೇಖರ್ ಅಲಿಯಾಸ್ ಚೋಮ ಅಲಿಯಾಸ್ ಜೂನಿಯರ್ ಗಾಂಧಿ ಆಕಾಶ ನೋಡುತ್ತಿದ್ದ. ಮಳೆಯಾವಾಗ ಬರುತ್ತದೆ ಎಂಬುದು ಆತನ ಚಿಂತೆಗೆ ಕಾರಣವಾಗಿರಲಿಲ್ಲ. ಆದರೆ, ತನ್ನನ್ನು ಕರೆಯುವವರೇ ಇಲ್ಲವಲ್ಲ ಎಂಬುದು ಕಾಂಡಕೊರಕ ಹುಳುವಿನಂತೆ ಮನಸ್ಸನ್ನು ಕೊರೆಯುತ್ತಿತ್ತು. ಸ್ವಾತಂತ್ರ್ಯ ಸಂಗ್ರಾಮಕ್ಕೆ ಹೋರಾಡಿ, ಜೀವತೆತ್ತ ತಾತನ ಕುರಿತ ಗೌರವ ಜನರಲ್ಲಿ ಕಡಿಮೆಯಾಗುತ್ತಿದೆ ಎಂಬದು ಗಮನಕ್ಕೆ ಬಂದಿತ್ತಾದರೂ ಇಷ್ಟು ಬೇಗ, ಇಂಡಿಯಾ ದೇಶದ ಜನ ಮಹಾತ್ಮನನ್ನು ಮರೆಯಬಹುದು ಎಂದುಕೊಂಡಿರಲಿಲ್ಲ. ಮೊದಲೆಲ್ಲ ತುಂಬಾ ಬಿಝಿಯಾಗಿರುತ್ತಿದ್ದ ಚೋಮ, ಈಗ ಅಗಸ್ಟ್-15, ಜನವರಿ-26, ಅಕ್ಟೋಬರ್-2 ಬಂದರೂ ತೂಕಡಿಸುತ್ತ ಮನೆಯಲ್ಲಿ ತತ್ತಿಯಿಡುತ್ತಿದ್ದ. ಗಾಂಧಿ ಜಯಂತಿ, ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ದಿನದಂದೂ ಸಂಘ-ಸಂಸ್ಥೆಗಳಾಗಲಿ, ಜನರಾಗಲಿ ಆತನ ಡೇಟ್ ಕೇಳುವುದನ್ನು ಬಿಟ್ಟುಬಿಟ್ಟಿದ್ದರು. ಗಾಂಧಿ ಕುರಿತು ಗಂಭೀರ ಅಭ್ಯಾಸದಲ್ಲಿ ನಿರತವಾಗಿದ್ದ ಗಾಂಧಿ ಸ್ಮಾರಕ ಭವನಗಳಿಗೆ ಅವನು ಎಂದಿಗೂ ಬೇಕಾಗಿರಲಿಲ್ಲ.

62 ರ ಚೋಮನಿಗೆ ಈ ಹವ್ಯಾಸ ಹತ್ತಿದ್ದು 40 ದಾಟಿದ ಮೇಲೆ. ಆಕಸ್ಮಿಕವಾಗಿ. ಸ್ಕೂಟರ್ ನಲ್ಲಿ ಹೋಗುತ್ತಿರಬೇಕಾದರೆ, ರೋಡ್ ರೇಜ್ ವೊಂದನ್ನು ನೋಡಿದ. ಜಗಳ ಬಿಡಿಸಲು ಬುದ್ಧಿವಾದ ಹೇಳತೊಡಗಿದಾಗ ಅಪಘಾತ ಮಾಡಿದ್ದ ಕಾಲೇಜು ಕುವರ, “ನೀವು ಸುಮ್ಮನಿರ್ರೀ” ಎಂದು ದಬಾಯಿಸಿದ್ದರೂ ಚೋಮ ಮಧ್ಯಪ್ರವೇಶಿಸುತ್ತಲೇ ಇದ್ದ. ಕಾಲೇಜು ಕುವರನ ಸಿಟ್ಟು ನೆತ್ತಿಗೇರಿ ಚೋಮನ ಕಪಾಳಕ್ಕೆ ಬಿಗಿದೇ ಬಿಟ್ಟ. ಸರ್ರಂತ ಚೋಮನ ಸಮಾಜ ಸೇವೆ ನಿಂತುಬಿಟ್ಟಿತು. ಆದರೂ ಕುವರನನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂದು ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸು ಎಂಬುದನ್ನು ನೆನೆಸಿಕೊಂಡು ಮತ್ತೊಂದು ಕೆನ್ನೆ ತೋರಿಸಿದ. ಕುವರನಿಗೆ ಇದು ತಮಾಷೆಯಾಗಿತ್ತು. ಮತ್ತೊಂದು ಕೆನ್ನೆಗೂ ಜೋರಾಗಿ ಬಿಗಿದ. ಚೋಮ ಸುಸ್ತಾಗಿ ಜಾಗ ಖಾಲಿ ಮಾಡಿದ. ಕೆಲ ದಿನಗಳ ನಂತರ ಆ ಘಟನೆಯನ್ನೇ ಮರೆತುಬಿಟ್ಟ. ಆದರೆ ಹೊಡೆಸಿಕೊಂಡ ಕೆನ್ನೆ ತನ್ನ ಕೋಪವನ್ನು ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಹಲ್ಲುಗಳ ಮೇಲೆ ತೋರಿಸಿತು. ಚೋಮ ತನ್ನ ಅಳಿದುಳಿದ ಹಲ್ಲುಗಳನ್ನು ತೆಗೆಸಿಕೊಂಡು ಡೆಂಚರ್ ಹಾಕಿಸಿಕೊಳ್ಳಬೇಕಾಯಿತು. ಇಂತಿಪ್ಪ ಸನ್ನಿವೇಶದಲ್ಲಿ ಆಫೀಸಿನಲ್ಲಿ ಯಾವುದೋ ಕಾರಣಕ್ಕೆ ಡೆಂಚರ್ ತೆಗೆದಿದ್ದಾಗ, ಪಕ್ಕದ ಟೇಬಲ್ಲಿನ ನಟಭಯಂಕರ, ನಟಸಾಮ್ರಾಟ, ನಟಚಕ್ರವರ್ತಿ ನಟೇಶ್ ಕುಮಾರ್, “ಮಿ. ಚೋಮ, ಹಿಂಗ್ ಹೇಳ್ತೆನಪಾ ಅಂತ ತ್ಯಪ್ ತಿಳ್ಕೋಬ್ಯಾಡ್ರೀ, ಖರೆ ನೀವ್ ನಿಮ್ಮ ಹಲ್ ಸೆಟ್ ತಗದಾಗ, ಅಗದೀ ಥೇಟ್ ಬರೋಬರ್ ಗಾಂಧಿ ಮುತ್ಯಾನಂಗ ಕಾಣ್ತೇರ್ ನೋಡ್ರಪಾ. ಅಂದ್ಹಂಗ, ನಾವ್ ಬರೋ ಅಕ್ಟೋಬರ್ ಯಾಡಕ್ಕ ಒಂದ್ ಹೊಸ ನಾಟ್ಕ ಆಡಾಕಹತ್ತೇವಿ. ‘ಹೇ ರಾಮ್ – ಹೇ ಅಲ್ಲಾ’ ಅಂತ. ನೀವ್  ಯಾಕ ನಮ್ಮ್ ನಾಟಕದಾಗ ಪಾಲ್ಟ್ ಮಾಡ್ಬಾರ್ದೂ…..”ಅಂತ ಅರ್ಜಿ ಗುಜರಾಯಿಸಿದ.

ಆಗಲೇ ಆತನ ಬದುಕು ಬದಲಾಗಿದ್ದು. ನಾಟಕದಲ್ಲಿ ಸುಡುಗಾಡು ಒಂದು ಡೈಲಾಗೂ ಇರಲಿಲ್ಲ. ಚೌಕದ ಬಳಿ ಗಾಂಧಿ ಪ್ರತಿಮೆಯೊಂದನ್ನು ನಿಲ್ಲಿಸಿರುತ್ತಾರೆ. ಆ ಪ್ರತಿಮೆಯ ಸುತ್ತಲೂ ಮದ್ಯಸೇವನೆ, ವೇಶ್ಯಾವಾಟಿಕೆ ಎಲ್ಲ ನಡೆಯುತ್ತಿರುತ್ತದೆ. ಪ್ರತಿಮೆ ನಿಲ್ಲಿಸುವ ಬದಲು ನಟೇಶ್ ಕುಮಾರ್, ಚೋಮನಿಗೆ ಗಾಂಧಿ ವೇಷ ಹಾಕಿ ಬರೋಬರಿ ಒಂದೂವರೆ ಗಂಟೆ ನಿಲ್ಲಿಸಿಬಿಟ್ಟಿದ್ದ. ವಾರಾಂತ್ಯದ ಪುರವಣಿಗಳ ನಾಟಕದ ವಿಮರ್ಶೆಗಳಲ್ಲಿ ‘ಇಡೀ ನಾಟಕದಲ್ಲಿ ಚೋಮನನ್ನು ಹೊರತು ಪಡಿಸಿ ಮತ್ತೆಲ್ಲ ಕೆಟ್ಟದಾಗಿತ್ತು’ ಎಂದು ಷರಾ ಬರೆಯಲಾಗಿತ್ತು. ಚೋಮನ ಡಬಲ್ ಕಾಲಂ ಫೋಟೋ ಹಾಕಲಾಗಿತ್ತು. ಇದಾದ ಮೇಲೆಯೇ ಡಿಮ್ಯಾಂಡ್ ಕ್ರಿಯೇಟ್ ಆಗಿದ್ದು,

ಇನ್ನಷ್ಟು

ಗಾಂಧೀಜಿಯ ಕನ್ನಡಕದೊಳಗಿಂದ…

-ನಾ ದಿವಾಕರ

ಆಧುನಿಕ ಭಾರತದ ಇತಿಹಾಸವನ್ನು ಕೆದಕಿದಾಗ ಕಣ್ಣೆದುರು ನಿಲ್ಲುವುದು ಬರೇ ದ್ವಂದ್ವಗಳೇ. ಒಂದೆಡೆ ವಸಾಹತುಶಾಹಿಯನ್ನು ಸ್ವೀಕರಿಸಿ ತಮ್ಮ ಪಾಳಯಗಳನ್ನು ರಕ್ಷಿಸಿಕೊಳ್ಳಲು ಹೆಣಗಾಡಿದ ರಾಜಮಹಾರಾಜರುಗಳ ಕಥೆಯಾದರೆ ಮತ್ತೊಂದೆಡೆ ಸ್ವದೇಶದ ವಿಮೋಚನೆಗಾಗಿ ಬಲಿದಾನ ಮಾಡಿದ ವೀರ ಯೋಧರ ಕಥನಗಳು ರಾರಾಜಿಸುತ್ತವೆ. ಮತ್ತೊಂದೆಡೆ ರಾಷ್ಟ್ರ ವಿಮೋಚನೆಯೊಂದಿಗೇ ದೇಶದ ಆಂತರ್ಯವನ್ನು ದಹಿಸುತ್ತಿದ್ದ ಸಾಮಾಜಿಕ ಅನಿಷ್ಟಗಳನ್ನು ಹೋಗಲಾಡಿಸಲು ಪಣ ತೊಟ್ಟ ನಿದರ್ಶನಗಳು ಅನಾವರಣಗೊಳ್ಳುತ್ತವೆ. ಫುಲೆ, ಅಂಬೇಡ್ಕರ್, ಮಹಾತ್ಮ ಗಾಂಧೀಜಿಯವರ ಸಂಕಥನಗಳು ನವ ಭಾರತದ ಇತಿಹಾಸವನ್ನು ಅಲಂಕರಿಸುತ್ತವೆ. ಗಾಂಧೀಜಿಯವರ ಶಾಂತಿ ಅಹಿಂಸೆಯ ಮಂತ್ರದೊಂದಿಗೇ ಭಗತ್ ಸಿಂಗ್ ಮತ್ತು ಸಂಗಡಿಗರ ಕ್ರಾಂತಿಕಾರಿ ಚಿಂತನೆಗಳೂ ಕಂಗೊಳಿಸುತ್ತವೆ. ಭಾರತದ ಚರಿತ್ರೆಯ ಈ ವೈರುಧ್ಯಗಳ ಹಿನ್ನೆಲೆಯಲ್ಲೇ ಪ್ರಸ್ತುತ ಸಂದಿಗ್ಧಮಯ ಸನ್ನಿವೇಶದಲ್ಲಿ ಗಾಂಧಿ ಏಕೋ ನೆನಪಾಗುತ್ತಾರೆ. ತನ್ನ ನೆಚ್ಚಿನ ರಾಷ್ಟ್ರವನ್ನು ವೀಕ್ಷಿಸಲು ಬರುವ ಗಾಂಧೀಜಿಯವರ ಕಂಗಳ ಮೂಲಕ ಅವರ ಕನ್ನಡಕದೊಳಗಿಂದಲೇ ಪ್ರಸಕ್ತ ಭಾರತವನ್ನು ನೋಡುವ ಒಂದು ಕಲ್ಪನೆ ಇಲ್ಲಿದೆ :

ಯುವ ಭಾರತ : ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಯುವಪೀಳಿಗೆಯನ್ನು ಸೆಳೆದಿದ್ದು ಗಾಂಧೀಜಿಯ ಅಹಿಂಸಾತ್ಮಕ ಧೋರಣೆ ಮತ್ತು ವಸಾಹತುಶಾಹಿ ವಿರೋಧಿ ನಿಲುವು. ಗಾಂಧೀಜಿಯ ದೃಷ್ಟಿಯಲ್ಲಿ ದೇಶದ ಭವಿಷ್ಯವನ್ನು ನಿರ್ಧರಿಸುವಲ್ಲಿ ಯುವಜನತೆಯ ಪಾತ್ರ ಹೆಚ್ಚು ಮಹತ್ತರವಾಗಿತ್ತು. ಆದರೆ ಇಂದು ಭಾರತ ಕಾಣುತ್ತಿರುವ ಯುವ ಪೀಳಿಗೆ ಎತ್ತ ಸಾಗುತ್ತಿದೆ ? ಈ ಪೀಳಿಗೆಗೆ ಸ್ಫೂತರ್ಿಯಾಗಬಲ್ಲ ಮಾದರಿಗಳೇ ಕಾಣುತ್ತಿಲ್ಲ. ಇವರಿಗೆ ಮಾರ್ಗದರ್ಶನ ನೀಡಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುವಂತೆ ಮಾಡುವ ನಾಯಕತ್ವವೇ ಇಲ್ಲ. ಭ್ರಷ್ಟ ರಾಜಕಾರಣದಲ್ಲಿ ಮುಳುಗಿಹೋಗಿರುವ ಸಮಾಜದಲ್ಲಿ, ಹೊಸ ಸಮಾಜಕ್ಕೆ ಕಣ್ಣು ತೆರೆಯುವ ಯುವ ಸಮುದಾಯ ಎತ್ತ ನೋಡಿದರೂ ಕಾಣುವುದು ಕೇವಲ ಭ್ರಷ್ಟತೆ, ಹಿಂಸೆ, ದಬ್ಬಾಳಿಕೆ, ಶೋಷಣೆ. ಶಿಕ್ಷಣವನ್ನೂ ಒಳಗೊಂಡಂತೆ ಎಲ್ಲ ಕ್ಷೇತ್ರಗಳ ವಾಣಿಜ್ಯೀಕರಣ. ಶಿಥಿಲವಾಗುತ್ತಿರುವ, ಕ್ಷೀಣಿಸುತ್ತಿರುವ ಮಾನವೀಯ ಮೌಲ್ಯ ಮತ್ತು ಸಂಸ್ಕೃತಿ. ನಾವಿಕನಿಲ್ಲದ ಹಡಗಿನಲ್ಲಿ ಸಾಗುತ್ತಿರುವ ಯುವಪೀಳಿಗೆ ಈ ಹಡಗಿಗೆ ಲಂಗರು ಹಾಕಿರುವ ಭ್ರಷ್ಟ ವ್ಯವಸ್ಥೆ. ಗಾಂಧೀಜಿಯ ದೃಷ್ಟಿ ಮಸುಕಾಗುತ್ತಿದೆ.

ಇನ್ನಷ್ಟು

%d bloggers like this: