ಒಂದು ಪುಸ್ತಕ ಹುಡುಕುತ್ತಾ..

-ಉಷಾ ಕಟ್ಟೆಮನೆ

ಮೌನ ಕಣಿವೆ

ಈ ಬಾರಿಯ ಸಮ್ಮೇಳನ ನಮ್ಮ ಮನೆಯಂಗಳದಲ್ಲಿ ಅಂದರೆ ಬೆಂಗಳೂರಿನಲ್ಲಿ ನಡೆಯುತ್ತಿರುವಾಗ ಹೋಗದಿದ್ದರೆ ಹೇಗೆ? ಹಾಗೆಂದುಕೊಂಡು ಬಹಳ ಹಿಂದೆಯೇ ಹೋಗುವುದೆಂದು ತೀರ್ಮಾನಿಸಿಕೊಂಡಿದ್ದೆ. ಹಾಗೆ ತೀರ್ಮಾನಿಸಲು ಒಂದು ನೆಪವೂ ಇತ್ತು. ನಾನು ರಹಮತ್ ತರಿಕೆರೆಯವರ ’ಕರ್ನಾಟಕ ನಾಥ ಪಂಥ’ ಪುಸ್ತಕವನ್ನು ಹುಡುಕುತ್ತಿದ್ದೆ. ಅದಕ್ಕಾಗಿ ಕೆಲ ಸಮಯದ ಹಿಂದೆ ಅಂಕಿತಾ, ಸ್ವಪ್ನ, ನವಕರ್ನಾಟಕ ಸೇರಿದಂತೆ ಕೆಲವು ಪುಸ್ತಕ ಮಳಿಗೆಗಳಲ್ಲಿ ಹುಡುಕಾಡಿದ್ದೆ. ಸಿಕ್ಕಿರಲಿಲ್ಲ. ನವೆಂಬರಿನಲ್ಲಿ ಪ್ರತಿ ಬಾರಿ ಅರಮನೆ ಮೈದಾನದಲ್ಲಿ ನಡೆಯುವ ಪುಸ್ತಕ ಮೇಳದಲ್ಲೂ ಸಿಕ್ಕಿರಲಿಲ್ಲ.

ಪ್ರಸ್ತುತ ವರ್ಷ ರಹಮತ್ ತರಿಕೆರೆಯವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಬಂದಿದೆಯಲ್ಲ ಹಾಗಾಗಿ ಅವರ ಕೃತಿಗಳೆಲ್ಲಾ ಸಮ್ಮೆಳನದಲ್ಲಿ ದೊರಕಬಹುದೆಂಬ ನಿರೀಕ್ಷೆಯಿತ್ತು.

ಆದರೆ ಶುಕ್ರವಾರ ಟೀವಿ ಮುಂದೆ ಕುಳಿತೆ ನೋಡಿ, ಸಮ್ಮೆಳನಕ್ಕೆ ಹೋಗಬೇಕೆಂದು ಅನ್ನಿಸಲೇ ಇಲ್ಲ. ಕನ್ನಡದ ನ್ಯೂಸ್ ಚಾನಲ್ ಗಳು ಪೈಪೋಟಿಗೆ ಬಿದ್ದವರಂತೆ ಸಮ್ಮೇಳನದ ಲೈವ್ ಕವರೇಜ್ ಗಳನ್ನು ನೀಡತೊಡಗಿದವು. ಹಿಂದೆ ಒಂದೆರಡು ಸಮ್ಮೇಳನದಲ್ಲಿ ಭಾಗವಹಿಸಿದ್ದ ನನಗೆ ಗೊತ್ತಿತ್ತು. ಸಮ್ಮೇಳನದ ಎಲ್ಲಾ ಸೂಕ್ಷ ವಿವರಗಳನ್ನು ನಮಗೆ ಕಾಣಲು ಸಾಧ್ಯವಿಲ್ಲವೆಂದು. ಆದರೆ ಕ್ಯಾಮರ ಕಣ್ಣುಗಳ ವ್ಯಾಪ್ತಿ ದೊಡ್ಡದು. ಅವು ಯಾವುದೇ ವ್ಯಾಖ್ಯಾನವಿಲ್ಲದೆ ಸಮಸ್ತ ವಿವರಗಳನ್ನು ಬಹು ಸುಲಭವಾಗಿ ವಿಕ್ಷಕರಿದ್ದೆಡೆಗೇ ತಲುಪಿಸಬಲ್ಲವು.

ಇದಲ್ಲದೆ ಸಮ್ಮೇಳನದ ವರದಿಗೆಂದೇ ’ಅವಧಿ’ ಯ ಸಹಯೋಗದಲ್ಲಿ ’ನುಡಿಮನ’ ಎಂಬ ಬ್ಲಾಗ್ ಹುಟ್ಟಿಕೊಂಡಿತ್ತು. ಅದು ಸಚಿತ್ರ ವರದಿಯೊಂದಿಗೆ ಸದಾ ಅಪ್ಡೇಟ್ ಆಗುತ್ತಲಿತ್ತು. ಜನಜಂಗುಳಿಯಿಂದ ಸದಾ ದೂರವಿರಲು ಇಷ್ಟಪಡುವ ನನಗಿದು ಸಾಕಾಗಿತ್ತು.

ಇನ್ನಷ್ಟು

ಹಕ್ಕಿ ಹಾರುತಿದೆ ನೋಡಿದಿರಾ?..

-ಜಿ ಎನ್ ಮೋಹನ್

‘ಓ ಬಿ ವ್ಯಾನ್ ಬೇಕು’ ಅಂದೆ. ರಾಮೋಜಿ ಫಿಲಂ ಸಿಟಿಯ ಮೀಟಿಂಗ್ ಹಾಲ್ ನಲ್ಲಿದ್ದವರು ಏನೋ ಟೆರರಿಸ್ಟ್ ಅಟ್ಯಾಕ್ ಆಗಿದೆ ಅಂತ ಗಾಬರಿಯಾದರು. ಅಂತದ್ದೇನೂ ಇಲ್ಲ ಅಂದೆ. ಹಾಗಿದ್ರೆ ಸೋನಿಯಾ ಗಾಂಧಿ ಬರ್ತಾ ಇದ್ದಾರಾ ಅಂದ್ರು. ‘ ನೋ’ ಅಂತ ತಲೆ ಆಡಿಸಿದೆ. ಮತ್ತೆ ಓ ಬಿ ವ್ಯಾನ್ ಯಾಕೆ ಅಂತ ಪ್ರಶ್ನಿಸಿದರು. ಶಿವಮೊಗ್ಗದಲ್ಲಿ ಸಾಹಿತ್ಯ ಸಮ್ಮೇಳನ ಕವರೇಜ್ ಗೆ ಅಂದೆ. ಒಂದು ಕ್ಷಣ ಎಲ್ಲರೂ ಮುಖ ಮುಖ ನೋಡಿಕೊಂಡರು. ಓ ಬಿ ವ್ಯಾನ್ ಗೂ ಸಾಹಿತ್ಯಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಬೆಟ್ಟದ ಮೇಲಿನ ನೆಲ್ಲೀಕಾಯಿ, ಸಮುದ್ರದೊಳಗಣ ಉಪ್ಪು ಎತ್ತಣಿಂದೆತ್ತ ಸಂಬಂಧವಯ್ಯ..?

ಇಂತದ್ದೇ ಗಾಬರಿ ನೇರಾ ನೇರಾ ರಾಮೋಜಿರಾಯರಿಗೇ ಆಗಿತ್ತು. ತೇಜಸ್ವಿ ಇಲ್ಲವಾದಾಗ ಈಟಿವಿಯ ಬುಲೆಟಿನ್ ಗಳೆಲ್ಲವೂ ಶೋಕ ಹೊದ್ದು ಕೂತಿತು. ಗಂಟೆಗೊಮ್ಮೆ ಪ್ರಸಾರವಾಗುವ ಬುಲೆಟಿನ್ ಗಳು ಹಾಂ, ಹ್ಞೂ ಎನ್ನುವುದರೊಳಗೆ ಮುಗಿದು ಹೋಗಿರುತ್ತವೆ. ಹಾಗಾಗಿ ಇದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಪ್ರೈಮ್ ಬುಲೆಟಿನ್ ಮಾತ್ರ ಎಲ್ಲರ ಗರುಡಗಣ್ಣನ್ನೂ ದಾಟಿಯೇ ಬರಬೇಕು. ಸಂಸ್ಥೆಯ ಮುಖ್ಯಸ್ಥರಿಂದ ಹಿಡಿದು ಮ್ಯಾನೇಜರ್ ವರೆಗೆ ಎಲ್ಲರೂ ‘ನೈಟ್ ವಾಚ್ ಮನ್’ ಗಳೇ..ಹಾಗಿರುವಾಗ ತೇಜಸ್ವಿ ಇಲ್ಲವಾದ ದಿನ ಇಡೀ ಬುಲೆಟಿನ್ ಅನ್ನು ತೇಜಸ್ವಿಗೆ ಮೀಸಲಿಟ್ಟಿದ್ದು ಎಲ್ಲರಿಗೂ ಷಾಕ್ ನೀಡಿತ್ತು. ತೇಜಸ್ವಿ ಇಲ್ಲ ಎನ್ನುವ ಸುದ್ದಿಯ ಮುಂದೆ ಇನ್ನೊಂದು ಸುದ್ದಿಯಾದರೂ ಎಲ್ಲಿ ಅನ್ನೋದು ನನ್ನ ನಿಲುವು. ಚೇರ್ಮನ್ ರಿಂದ ಬುಲಾವ್ ಬಂತು. ಅಲ್ಲ, ಇಡೀ ಬುಲೆಟಿನ್ ಅನ್ನು ಒಬ್ಬರಿಗೇ ಮೀಸಲಿಡೋದು ಎಷ್ಟು ಸರಿ? ಜಗತ್ತಿನ ಎಲ್ಲೂ ಇವತ್ತು ಏನೂ ಘಟಿಸಿಲ್ವ? ಅದೂ ಪ್ರೈಮ್ ಬುಲೆಟಿನ್ ನಲ್ಲಿ’ ಅಂದ್ರು. ನನಗಂತೂ ಅವತ್ತಿನ ಮೆಗಾ ನ್ಯೂಸ್ ತೇಜಸ್ವಿಯೇ ಅನ್ನೋದು ಖಚಿತವಾಗಿ ಹೋಗಿತ್ತು. ‘ತೇಜಸ್ವಿ ವಿನಾ ಬುಲೆಟಿನ್ ನ ಚಲತಿ’ ಅಂತ ನಿರ್ಧರಿಸಿಬಿಟ್ಟಿದ್ದೆ.

ಸಾರ್, ನಮ್ಮ ನ್ಯೂಸ್ ಗೆ ಟಿ ಆರ್ ಪಿ ಬರೋದೇ ಮೊದಲ ಆದ್ಯತೆ ಆದ್ರೆ ನನ್ನನ್ನ ಬಿಟ್ಬಿಡಿ. ನನ್ನ ಮನಸ್ಸು ಹೇಳ್ತಿದೆ. ತೇಜಸ್ವಿ ಇಲ್ಲ ಅನ್ನೋ ಸುದ್ದಿ ಮಾತ್ರಾನೇ ಇವತ್ತು ಜನರಿಗೆ ಮುಖ್ಯ. ಅಕಸ್ಮಾತ್ ಟಿ ಆರ್ ಪಿ ಬರಲಿಲ್ಲ ಅಂದ್ರೆ ಇನ್ನು ಮುಂದೆ ನೀವು ಹೇಳಿದ ಹಾಗೆ ಕೇಳ್ತೀನಿ. ನೀವೇ ಹೇಳಿದ್ದೀರಲ್ಲಾ ಮೊದಲ ತಪ್ಪು ಮಾಡೋದಿಕ್ಕೆ ಎಲ್ಲರಿಗೂ ಅವಕಾಶವಿದೆ ಅಂತ ಅವರು ಹೇಳಿದ್ದ ಮಾತನ್ನೇ ರಕ್ಷಣೆಗೆ ಗುರಾಣಿಯಾಗಿ ಬಳಸಿದೆ. ರಾಮೋಜಿರಾಯರು ನನ್ನನ್ನ ಒಂದು ಕ್ಷಣ ನೋಡಿದವರೇ ‘ಗೋ ಅಹೆಡ್’ ಅಂದ್ರು. ತೇಜಸ್ವಿ ತೇಜಸ್ವಿಯೇ. ಸತತ ಮೂರು ದಿನ ಈಟಿವಿ ಚಾನಲ್ ತೇಜಸ್ವಿ ಎನ್ನುವ ‘ನಿಗೂಢ ಮನುಷ್ಯ’ ನನ್ನು ಸಾಧ್ಯವಿದ್ದ ದಿಕ್ಕಿನಿಂದೆಲ್ಲಾ ಸ್ಪರ್ಶಿಸಲು ಯತ್ನಿಸಿತು.

ಇನ್ನಷ್ಟು

ನಾವು ಬರತೇವಿನ್ನ ನೆನಪಿರಲಿ, ನಮ್ ನಮಸ್ಕಾರ ನಿಮಗ..

ಸಮ್ಮೇಳನದ ನೂರಾರು ಫೋಟೋಗಳು, ಇನ್ನಷ್ಟು ಮತ್ತಷ್ಟು ನೋಡಬೇಕು ಎನಿಸುವ ಚಿತ್ರಗಳು,

ಗೋಷ್ಟಿ, ಸಾಂಸ್ಕೃತಿಕ ಕಾರ್ಯಕ್ರಮ, ಪುಸ್ತಕ ಪ್ರದರ್ಶನ, ಸಾಕಷ್ಟು ಸೈಡ್ ಲೈಟ್ ಗಳ ಫೋಟೋಗಳು

ನಮ್ಮದೇ ‘ನುಡಿ ನಮನ’ದಲ್ಲಿದೆ. ನೋಡಲು ಇಲ್ಲಿ ಕ್ಲಿಕ್ಕಿಸಿ

ಮತ್ತೆ ಗಂಗಾವತಿಯಲ್ಲಿ ಭೇಟಿಯಾಗೋಣ

ಅಲ್ಲೀವರೆಗೆ ‘ನಮ್ ನಮಸ್ಕಾರ ನಿಮಗ’..

ಈ ಚಿತ್ರ: ಚಂದ್ರಕೀರ್ತಿಯದ್ದು

ಇನ್ನು ನೀವು ಯಾರೋ, ಇನ್ನು ನಾನು ಯಾರೋ…

ಸಮ್ಮೇಳನ ಮುಗಿಸುವ ಮುನ್ನ..

ಕನ್ನಡಮ್ಮನ ಪ್ರತಿಮೆ- ಬೇಕೋ ಬೇಡವೋ..?

ಮುಖ್ಯಮಂತ್ರಿ ಯಡಿಯೂರಪ್ಪನವರು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 25 ಕೋಟಿ ರೂ ವೆಚ್ಚದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆ ನಿರ್ಮಿಸುವುದಾಗಿ ಹೇಳಿದ್ದಾರೆ. ಅದನ್ನು ಕವಿ ಕೃಷ್ಣಮೂರ್ತಿ ಬೆಳಗೆರೆ ಸಮಾನಾಂತರ ಘೋಷ್ಟಿಯಲ್ಲಿ ತರಾಟೆಗೆ ತೆಗೆದುಕೊಂಡದ್ದೂ ಆಗಿದೆ.

ಈಗ ನೀವು ಹೇಳಿ..ಪ್ರತಿಮೆ ಬೇಕೋ ಬೇಡವೋ..?

ಜೀವಿಯವರ ಭಾಷಣವೂ, ಮುಖ್ಯಮಂತ್ರಿ ಭಾವವೂ..

ಅದಕ್ಕೆ ಹೇಳೋದು ಜರ್ನಲಿಸ್ಟ್ ಗಳು ಅಂದ್ರೆ ಜರ್ನಲಿಸ್ಟ್ ಗಳು ಅಂತ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪ್ರೊ ಜಿ ವೆಂಕಟಸುಬ್ಬಯ್ಯ ಅವರು ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯ ಅಂತ ಹೇಳುತ್ತಿದ್ದಾಗೆ ಚಂದ್ರಕೀರ್ತಿಯ ಕ್ಯಾಮೆರಾ ನೋಡಿದ್ದು ಜೀವಿಯವರನ್ನಲ್ಲ, ಬದಲಿಗೆ ಮುಖ್ಯಮಂತ್ರಿ ಯೆಡಿಯೂರಪ್ಪನವರ ಮುಖವನ್ನ.

ಜೀವಿ ಕೊಟ್ಟ ಏಟಿಗೆ ಬದಲಾದ ಸಿ ಎಂ ಭಂಗಿ ಇಲ್ಲಿದೆ

ಬ್ರೇಕಿಂಗ್ ನ್ಯೂಸ್: ಇನ್ನೂ ಎರಡು ದಿನ ಪುಸ್ತಕ ಪ್ರದರ್ಶನ ಮುಂದುವರಿಕೆ..

ಸಮ್ಮೇಳನಕ್ಕೆ ಪರದೆ

ಇಲ್ಲಿಗೂ ಭೇಟಿ ಕೊಡಿ- ನುಡಿನಮನ

– 

ಇಲ್ಲಿದೆ ಎಲ್ಲಾ ನಿರ್ಣಯಗಳು..

೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

ನಿರ್ಣಯ 1:

ಇದುವರೆಗೂ ನಡೆದ 76 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿಲ್ಲ. ಈಗಲಾದರೂ ಆ ನಿರ್ಣಯಗಳು ಕಾರ್ಯರೂಪಕ್ಕೆ ತರಲು ಸರ್ಕಾರ ಕ್ರಿಯಾಶೀಲವಾಗಿ ಸಹಕರಿಸಬೇಕು.

ನಿರ್ಣಯ 2:

ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತುಗಳಿಗೆ ಆಯಾ ನಗರದ ಕೇಂದ್ರ ಭಾಗದಲ್ಲಿ ಉಚಿತ ನಿವೇಶನ ಮತ್ತು ಸಾಹಿತ್ಯ ಭವನ ನಿರ್ಮಾಣಕ್ಕೆ ಸರ್ಕಾರ ಆರ್ಥಿಕ ನೆರವನ್ನು ಮಂಜೂರುಗೊಳಿಸಬೇಕು.

ನಿರ್ಣಯ 3:

ಪ್ರಾಥಮಿಕ ಹಂತದ ಶಿಕ್ಷಣ 1ರಿಂದ ನಾಲ್ಕನೇ ತರಗತಿಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕೇಂದ್ರೀಯ ವಿದ್ಯಾಲಯದಲ್ಲಿ ವಿದ್ಯಾಭ್ಯಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತ್ರಿಭಾಷಾ ಸೂತ್ರದಂತೆ ನ್ಯಾಯಾಲಯದ ತೀರ್ಪಿನಂತೆ ಕನ್ನಡ ಭಾಷೆ ಕಡ್ಡಾಯವಾಗಿ ಒಂದು ವಿಷಯವಾಗಿ ಕಲಿಸಲು ಸಮ್ಮೇಳನ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ ಒತ್ತಾಯಿಸುತ್ತದೆ.

ನಿರ್ಣಯ 4:

ನಾಲ್ಕು ದಶಕದಿಂದ ದೂರ ಉಳಿದಿದ್ದ ಡಬ್ಬಿಂಗ್ ಸಂಸ್ಕೃತಿಯನ್ನು ಮತ್ತೆ ಕನ್ನಡ ಚಿತ್ರರಂಗಕ್ಕೆ ತರುವ ಪ್ರಯತ್ನ ನಡೆದಿರುವದನ್ನು ಸಮ್ಮೇಳನ ವಿರೋಧಿಸುತ್ತದೆ. ಭಾಷೆ ಮತ್ತು ಸಂಸ್ಕೃತಿಗೆ ಮಾರಕವಾದ ಡಬ್ಬಿಂಗ್ ಚಿತ್ರ ನಿರ್ಮಾಣಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂದು ಸಮ್ಮೇಳನ ಒತ್ತಾಯಿಸುತ್ತದೆ.

ನಿರ್ಣಯ 5:

ಪ್ರತಿ ವರ್ಷ ನೀಡುತ್ತಿರುವ ಪಂಪ ಪ್ರಶಸ್ತಿಯನ್ನು ಪಂಪನ ಜನ್ಮ ಸ್ಥಳವಾದ ಗದಗ್ ಜಿಲ್ಲೆಯ ಅಣ್ಣಿಗೇರಿಯಲ್ಲೇ ನೀಡಬೇಕು ಎಂದು ಸಮ್ಮೇಳನ ಸರ್ಕಾರವನ್ನು ಒತ್ತಾಯಿಸುತ್ತದೆ.

ನಿರ್ಣಯ 6:

ಡಾ|| ಎಂ ಚಿದಾನಂದ ಮೂರ್ತಿಯವರಿಗೆ ಡಾಕ್ಟರೇಟ್ ಪದವಿಯನ್ನು ನೀಡುವ ಸಲುವಾಗಿ ಉಂಟಾದ ವಿದ್ಯಮಾನ ಕನ್ನಡ ಸಾರಸ್ವತ ಲೋಕಕ್ಕೆ ಅಪಮಾನ ಉಂಟು ಮಾಡಿದೆ. ಇದನ್ನು ಸಮ್ಮೇಳನ ಒಕ್ಕೊರಲಿನಿಂದ ಖಂಡಿಸುತ್ತದೆ.

ನಿರ್ಣಯ 7:

ಹೈದರಾಬಾದ – ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಮುನ್ನೂರ ಎಪ್ಪತ್ತೊಂದನೆಯ ಕಾಯಿದೆಯನ್ನು ಅಭಿವೃದ್ಧಿ ದೃಷ್ಟಿಯಿಂದ ಅನುಷ್ಠಾನಗೊಳಿಸಬೇಕು ಎಂದು ಸಮ್ಮೇಳನ ಒತ್ತಾಯಿಸುತ್ತದೆ.

ನಿರ್ಣಯ 8:

ಅನ್ಯಭಾಷಿಕರು ಜೀವನಕ್ಕಾಗಿ ಬೆಂಗಳೂರು ಮತ್ತು ರಾಜ್ಯದ ವಿವಿಧ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಅವರು ಕಡ್ಡಾಯವಾಗಿ ಕನ್ನಡವನ್ನು ಕಲಿತು ವ್ಯಾವಹಾರಿಕ ದೃಷ್ಟಿಯಲ್ಲಿ ಕನ್ನಡ ಭಾಷೆಯನ್ನು ಆಡಬೇಕೆಂದು ಸಮ್ಮೇಳನ ಅನ್ಯಭಾಷಿಕರಿಗೆ ಕರೆ ನೀಡುತ್ತದೆ.

ನಿರ್ಣಯ 9:

77ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಕೊಟ್ಟ ಎಲ್ಲರಿಗೂ ಈ ಮಹಾ ಸಭೆ ಅಭಿನಂದಿಸುತ್ತದೆ.

Previous Older Entries

%d bloggers like this: